ಎಂ. ಎಂ. ಕಲಬುರ್ಗಿ ಹತ್ಯೆ; ಚಾರ್ಜ್ ಶೀಟ್ ಸಲ್ಲಿಸಿದ ಎಸ್ಐಟಿ
ಧಾರವಾಡ, ಆಗಸ್ಟ್ 18 : ಹಿರಿಯ ಸಂಶೋಧಕ ಎಂ. ಎಂ. ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ 1,600 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಹತ್ಯೆ ಪ್ರಕರಣದಲ್ಲಿ 6 ಆರೋಪಿಗಳನ್ನು ಹೆಸರಿಸಲಾಗಿದೆ.
ಹುಬ್ಬಳ್ಳಿ ನ್ಯಾಯಾಲಯಕ್ಕೆ ಎಸ್ಐಟಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಹಾರಾಷ್ಟ್ರ ಮೂಲದ ಅಮೋಲ್ ಎ. ಕಾಳೆ ಕಲಬುರ್ಗಿ ಹತ್ಯೆ ಪ್ರಕರಣದಲ್ಲಿಯೂ ಆರೋಪಿಯಾಗಿದ್ದಾರೆ.
ಅಮೋಲ್ ಎ. ಕಾಳೆ (37), ಧಾರವಾಡದ ಗಣೇಶ್ ಮಿಸ್ಕಿನ್ (27), ಬೆಳಗಾವಿಯ ಪ್ರವೀಣ್ ಪ್ರಕಾಶ್ ಚತುರ್ (26), ವಾಸುದೇವ್ ಭಗವಾನ್ ಸೂರ್ಯವಂಶಿ (29), ಔರಂಗಬಾದ್ನ ಶರದ್ ಬಾಹು ಸಾಹೇಬ್ ಕಳಾಸ್ಕರ್ (25), ಹುಬ್ಬಳ್ಳಿಯ ಅಮಿತ್ ಬುದ್ಧಿ ಆರೋಪಿಗಳಾಗಿದ್ದಾರೆ.

2015ರ ಆಗಸ್ಟ್ 30ರಂದು ಎಂ. ಎಂ. ಕಲಬುರ್ಗಿ ಅವರನ್ನು ಧಾರವಾಡದ ಕಲ್ಯಾಣ ನಗರದಲ್ಲಿರುವ ಮನೆಯಲ್ಲಿ ಹತ್ಯೆ ಮಾಡಲಾಗಿತ್ತು. ನಾಲ್ಕು ವರ್ಷಗಳ ಬಳಿಕ ಪ್ರಕರಣದ ತನಿಖೆ ಮುಕ್ತಾಯಗೊಂಡಿದ್ದು, ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.
2015ರ ಜನವರಿಂದ ಮೇ ತಿಂಗಳ ಅವಧಿಯಲ್ಲಿ ಆರೋಪಿಗಳಾದ ಅಮೋಲ್ ಕಾಳೆ, ಗಣೇಶ್, ಪ್ರವೀಣ್ ಹಲವು ಬಾರಿ ಹುಬ್ಭಳ್ಳಿಯ ಇಂದಿರಾ ಗಾಜಿನ ಮನೆ ಉದ್ಯಾನದಲ್ಲಿ ಸೇರಿ ಕಲಬುರ್ಗಿ ಅವರ ಹತ್ಯೆಗೆ ಸಂಚು ರೂಪಿಸಿದ್ದರು.
ಕಲಬುರ್ಗಿ ಅವರ ಚಲನವಲನಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಅಮೋಲ್ ಕಾಳೆ ಗಣೇಶ್ಗೆ ಸೂಚಿಸಿದ್ದ. ಒಂದು ಬೈಕ್ ಕದ್ದು ಗಣೇಶ್ಗೆ ನೀಡುವಂತೆ ವಾಸುದೇವ್ಗೆ ಸೂಚಿಸಲಾಗಿತ್ತು. ಬಜಾಜ್ ಡಿಸ್ಕವರ್ ಬೈಕ್ ಅನ್ನು ಇದಕ್ಕಾಗಿ ಕದಿಯಲಾಗಿತ್ತು.
ದಕ್ಷಿಣ ಕನ್ನಡದ ರಬ್ಬರ್ ತೋಟವೊಂದರಲ್ಲಿ ಅಮೋಲ್ ಗಣೇಶ್ ಮತ್ತು ಪ್ರವೀಣ್ಗೆ ನಾಡ ಬಂದೂಕಿನಿಂದ ಗುಂಡು ಹಾರಿಸುವ ತರಬೇತಿ ನೀಡಿದ್ದ. ಹತ್ಯೆಯ ದಿನ ಅಮೋಲ್ ಪ್ರವೀಣ್ ಮತ್ತು ಗಣೇಶ್ಗೆ 7.65 ಎಂ.ಎಂ. ಕ್ಯಾಲಿಬರ್ ನಾಡ ಪಿಸ್ತೂಲ್ ಇದ್ದ ಬ್ಯಾಗ್ ನೀಡಿದ್ದ.
ಹತ್ಯೆಯ ದಿನ ಬೆಳಗ್ಗೆ 8.30ರ ಸುಮಾರಿಗೆ ಎಂ. ಎಂ. ಕಲಬುರ್ಗಿ ಅವರ ನಿವಾಸಕ್ಕೆ ಬಂದಿದ್ದ ಪ್ರವೀಣ್ ಮತ್ತು ಗಣೇಶ್ ಎರಡು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಿದ್ದರು ಎಂದು ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications