Get Updates
Get notified of breaking news, exclusive insights, and must-see stories!

ಮಾದರಿ ನೀತಿ ಸಂಹಿತೆ ಜಾರಿ: ಧಾರವಾಡ ಜಿಲ್ಲೆಯಲ್ಲಿ ಕಟ್ಟೆಚ್ಚರ: ವಿವರ ಇಲ್ಲಿದೆ

ಧಾರವಾಡ, ಮಾರ್ಚ್‌, 30: ರಾಜ್ಯ ವಿಧಾನಸಭಾ ಚನಾವಣೆಗೆ ಸಂಬಂಧಿಸಿದಂತೆ ಮಾರ್ಚ್‌ 29ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಧಾರವಾಡ ಜಿಲ್ಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗ್ಡೆ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಜಿಲ್ಲೆಯಲ್ಲಿ ಒಟ್ಟು 15,07,414 ಮತದಾರರು ಇದ್ದಾರೆ. 7,57,522 ಪುರುಷ, 7,49,807 ಮಹಿಳಾ ಹಾಗೂ 85 ಜನ ಇತರೆ ಮತದಾರರು ಇದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಈ ಬಾರಿ 26,426 ಯುವ ಮತದಾರರಿದ್ದಾರೆ ಎಂದರು.

Model code of conduct: Strict action in dharwad district

21,036 ಜನ ವಿಕಲಚೇತನ ಮತದಾರರು, 32,301 ಜನ 80 ವರ್ಷ ಮೇಲ್ಪಟ್ಟ ಮತದಾರರಿದ್ದಾರೆ. ಜೊತೆಗೆ 400 ಜನ 100 ವರ್ಷ ಮೇಲ್ಪಟ್ಟ ಮತದಾರರಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 24 ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 1636 ಮತಗಟ್ಟೆಗಳ ಸ್ಥಾಪನೆಯಾಗಲಿದ್ದು, ಇದರಲ್ಲಿ 944 ಮತಗಟ್ಟೆಗಳು ಗ್ರಾಮಾಂತರ ಪ್ರದೇಶದಲ್ಲಿ, 692 ಮತಗಟ್ಟೆಗಳು ನಗರ ಪ್ರದೇಶದಲ್ಲಿ ಇರಲಿವೆ. ಆ ಪೈಕಿ 216 ಸೂಕ್ಷ್ಮ ಹಾಗೂ 162 ಅತೀ ಸೂಕ್ಷ್ಮ ಮತಗಟ್ಟೆಗಳು ಇರಲಿವೆ ಎಂದರು.

ಅಕ್ರಮ ಹಣ ವಶಕ್ಕೆ

ಧಾರವಾಡ ಜಿಲ್ಲೆಯಲ್ಲಿ ಈವರೆಗೂ 80,32,070 ಅಕ್ರಮ ಹಣ ವಶಕ್ಕೆ ಪಡೆಯಲಾಗಿದೆ. 1061.75 ಲೀಟರ್ ಅಕ್ರಮ ಮದ್ಯ ವಶಕ್ಕೆ ಪಡೆಯಲಾಗಿದೆ. 4.49 ಕೆ.ಜಿ. ಗಾಂಜಾ, 12,562 ಅಕ್ರಮ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು. ಒಬ್ಬ ರಾಜಕೀಯ ಅಭ್ಯರ್ಥಿ 40 ಲಕ್ಷದವರೆಗೆ ಖರ್ಚು ಮಾಡಬಹುದಾಗಿದೆ. ಅಲ್ಲದೇ ರಾಜಕೀಯ ವ್ಯಕ್ತಿಗಳು ನಿಗದಿತ ಸ್ಥಳದಲ್ಲಿ ಬ್ಯಾನರ್, ಹೋಲ್ಡಿಂಗ್ಸ್ ಹಾಕಬೇಕೆಂದರೆ ಪರವಾನಗಿ ಪಡೆಯಬೇಕು ಎಂದು ಸೂಚಿಸಿದರು.

Model code of conduct: Strict action in dharwad district

ನಾಮಪತ್ರ ಸಲ್ಲಿಕೆಯ ವಿವರ

ಏಪ್ರಿಲ್ 13 ನಾಮಪತ್ರ ಸಲ್ಲಿಕೆ ಆರಂಭ ಆಗಲಿದೆ. ಏಪ್ರಿಲ್‌ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್‌ 21ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್‌ 24ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಇನ್ನು ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಜಿಲ್ಲೆಯ ಏಳೂ ಕ್ಷೇತ್ರಗಳ ಮತ ಎಣಿಕೆ ಧಾರವಾಡ ಕೃಷಿ ವಿವಿಯಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಧಾರ್ಮಿಕ ಕೇಂದ್ರಗಳನ್ನು ರಾಜಕೀಯ ಅಭ್ಯರ್ಥಿಗಳು ಚುನಾವಣಾ ಪ್ರಚಾರಕ್ಕೆ ಬಳಕೆ ಮಾಡುವಂತಿಲ್ಲ. ಅಲ್ಲದೇ ರಾತ್ರಿ 10 ಗಂಟೆ ನಂತರ ಪ್ರಚಾರ ಕೂಡ ಮಾಡುವಂತಿಲ್ಲ ಎಂದರು. ನವಲಗುಂದ ತಾಲೂಕಿನ ನಾಮಪತ್ರಗಳನ್ನು ನವಲಗುಂದ ತಹಶೀಲ್ದಾರ್‌ ಕಚೇರಿ, ಕುಂದಗೋಳ ತಾಲೂಕಿನ ನಾಮಪತ್ರಗಳನ್ನು ಕುಂದಗೋಳ ತಹಶೀಲ್ದಾರ್‌ ಕಚೇರಿಯಲ್ಲಿ, ಧಾರವಾಡದ ಕ್ಷೇತ್ರಗಳ ನಾಮಪತ್ರಗಳನ್ನು ಧಾರವಾಡ ತಹಶೀಲ್ದಾರ್‌ ಕಚೇರಿಯಲ್ಲಿ ಪಡೆಯಲಾಗುತ್ತದೆ.

ಹಾಗೆಯೇ ಹುಬ್ಬಳ್ಳಿ ಪೂರ್ವ ಕ್ಷೇತ್ರದ ನಾಮಪತ್ರಗಳನ್ನು ಹುಬ್ಬಳ್ಳಿ ತಹಶೀಲ್ದಾರ ಕಚೇರಿಯಲ್ಲಿ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ನಾಮಪತ್ರಗಳನ್ನು ಹುಬ್ಬಳ್ಳಿಯ ಮಹಾನಗರ ಪಾಲಿಕೆ ಕಚೇರಿಯಲ್ಲಿ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ನಾಮಪತ್ರಗಳನ್ನು ಧಾರವಾಡ ಮಹಾನಗರ ಪಾಲಿಕೆ ಕಚೇರಿಯಲ್ಲಿ, ಕಲಘಟಗಿ ಕ್ಷೇತ್ರದ ನಾಮಪತ್ರಗಳನ್ನು ಕಲಘಟಗಿ ತಹಶೀಲ್ದಾರ್‌ ಕಚೇರಿಯಲ್ಲಿ ಪಡೆಯಲಾಗುತ್ತದೆ ಎಂದರು.

ಇನ್ನು ಧಾರವಾಡದ ನೆಹರೂ ನಗರದಲ್ಲಿ ಹಮ್ಮಿಕೊಂಡಿದ್ದ ಆಶ್ರಯ ಮನೆ ಯೋಜನೆಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮವನ್ನು ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಅರ್ಧಕ್ಕೆ ಮೊಟಕುಗೊಳಿಸಲಾಗಿದೆ. 250 ಜನ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಸಕ ಅರವಿಂದ ಬೆಲ್ಲದ್‌ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು.

ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕವೂ ಹಕ್ಕುಪತ್ರಗಳನ್ನು ವಿತರಣೆ ಮಾಡುವ ಕೆಲಸ ನಡೆದಿತ್ತು. ವಿಷಯ ತಿಳಿದ ಕೂಡಲೇ ಮಾಧ್ಯಮದವರು ಸ್ಥಳಕ್ಕೆ ಹೋದ ನಂತರ ತರಾತುರಿಯಲ್ಲಿ ಪೆಂಡಾಲ್‌ನ್ನು ಕೀಳಲಾಯಿತು. ಬಿಜೆಪಿ ಕಾರ್ಯಕರ್ತರೇ ಈ ಹಕ್ಕುಪತ್ರಗಳನ್ನು ವಿತರಣೆ ಮಾಡುತ್ತಿದ್ದರು. ಮಾಧ್ಯಮದವರು ಸ್ಥಳಕ್ಕೆ ಹೋಗುವಷ್ಟರಲ್ಲಿ 150 ಜನ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+