ಮೋದಿ ಮತ್ತು ಶಾ 'ರಾಹುಕೇತು'ಗಳು, ದೇಶಕ್ಕೆ ಗ್ರಹಣ ಹಿಡಿದಿದ್ದೇ ಇವರಿಂದ
ಧಾರವಾಡ, ಡಿ 26: ಪೌರತ್ವ ಕಾಯ್ದೆ ತಿದ್ದುಪಡಿ ಮಸೂದೆಯ ವಿರುದ್ದ ಬೀದಿಗಿಳಿದಿರುವ ಕಾಂಗ್ರೆಸ್, ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ವಿರುದ್ದ ಕಿಡಿಕಾರುತ್ತಿದೆ.
ನಗರದಲ್ಲಿನ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದ ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, "ಅಮಿತ್ ಶಾ ಮತ್ತು ನರೇಂದ್ರ ಮೋದಿಯವರಿಗೆ ಏನಾದರೂ ಸಂವಿಧಾನದ ಬಗ್ಗೆ ಅರಿವಿದೆಯಾ" ಎಂದು ಪ್ರಶ್ನಿಸಿದ್ದಾರೆ.
"ಮೋದಿ ಮತ್ತು ಅಮಿತ್ ಶಾ, ರಾಹುಕೇತುಗಳು ಇದ್ದಂತೆ. ದೇಶಕ್ಕೆ ಗ್ರಹಣ ಹಿಡಿದಿದ್ದೇ ಇವರಿಬ್ಬರಿಂದ, ಯುವ ಸಮುದಾಯ ಈ ಗ್ರಹಣದಿಂದ ದೇಶಕ್ಕೆ ಮುಕ್ತಿ ಸಿಗಲು, ಹೋರಾಟಕ್ಕೆ ಇಳಿದಿದೆ" ಎಂದು ಉಗ್ರಪ್ಪ ಹೇಳಿದರು.

"ಕಾಂಗ್ರೆಸ್ ಮುಕ್ತ್ ಭಾರತ್ ಮಾಡುತ್ತೇವೆ ಎಂದು ಹೊರಟಿದ್ದ ಈ ಇಬ್ಬರು ಜೋಡಿಗಳಿಗೆ, ದೇಶದ ಮತದಾರ ಸರಿಯಾದ ಪಾಠವನ್ನು ಕಲಿಸುತ್ತಿದ್ದಾನೆ. ಒಂದೊಂದೇ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳುತ್ತಿದೆ" ಎಂದು ಉಗ್ರಪ್ಪ ಲೇವಡಿ ಮಾಡಿದರು.
"ದೇಶದಲ್ಲಿ ಈಗ ಆರಂಭವಾಗಿರುವ ಹೋರಾಟಗಳು ಅಂತ್ಯವಲ್ಲ, ಇದು ಆರಂಭ. ಮೊದಲ ಸ್ವಾತಂತ್ರ್ಯ ಸಂಗ್ರಾಮ ಬ್ರಿಟಿಷರ ವಿರುದ್ದ ನಡೆದಿತ್ತು. ಎರಡನೇ ಸ್ವಾತ್ಯಂತ್ಯ ಸಂಗ್ರಾಮ ಮತೀಯವಾದಿಗಳ ವಿರುದ್ದ ನಡೆಯಲಿದೆ" ಎಂದು ಉಗ್ರಪ್ಪ ಎಚ್ಚರಿಸಿದ್ದಾರೆ.
"ತಮ್ಮನ್ನು ಚಾಯ್ ವಾಲಾ ಎಂದು ಈ ದೇಶದ ಪ್ರಧಾನಿ ಕರೆಸಿಕೊಳ್ಳುತ್ತಾರೆ. ಆದರೆ, ಅವರ ಪಕ್ಷದ ಸಂಸದ, ಪಂಚರ್ ಹಾಕುವವರಿಗೆ ಅವಮಾನ ಮಾಡುತ್ತಾರೆ. ಇವರೆಲ್ಲಾ ಮನುಷ್ಯರಾ" ಎಂದು ಉಗ್ರಪ್ಪ ಪ್ರಶ್ನಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications