ಧಾರವಾಡದಲ್ಲಿ ವಿಷ ಬೀಜ ಸೇವಿಸಿ 25ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ
ಧಾರವಾಡ, ಜುಲೈ 6: ಮರವೊಂದರ ವಿಷಕಾರಿ ಬೀಜ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಧಾರವಾಡ ಜಿಲ್ಲೆ ಕುಂದಗೋಳದಲ್ಲಿ ನಡೆದಿದೆ.
ಕುಂದಗೋಳ ತಾಲೂಕಿನ ರಟ್ಟಿಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿಯಲ್ಲಿ ಮರವೊಂದಿತ್ತು. ಈ ಮರದಲ್ಲಿ ಬೆಳೆಯುವ ವಿಷಕಾರಿ ಬೀಜವನ್ನು ವಿದ್ಯಾರ್ಥಿಗಳು ತಿಂದಿದ್ದಾರೆ. ಪರಿಣಾಮ ಈ ಅವಘಡ ಸಂಭವಿಸಿದೆ.

ವಿದ್ಯಾರ್ಥಿಗಳು ತೀವ್ರ ವಾಂತಿಭೇದಿಯಿಂದ ಬಳಲುತ್ತಿದ್ದು, ಅಸ್ವಸ್ಥ ವಿದ್ಯಾರ್ಥಿಗಳನ್ನು ಸ್ಥಳೀಯ ಕಿಮ್ಸ್ ಆಸ್ಪತ್ರೆಗೆ ದಾಖಳಿಸಲಾಗಿದೆ. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.












Click it and Unblock the Notifications