ಧಾರವಾಡ: ತಳ್ಳು ಗಾಡಿಯಲ್ಲಿ ಮರಿ ಮಂಗನ ಶವ, ಮುಗಿಲು ಮುಟ್ಟಿದ ತಾಯಿಯ ಮೂಕರೋಧನೆ
ಧಾರವಾಡ, ಮೇ 31: ಉಪ್ಪಿಗಿಂತ ರುಚಿ ಇಲ್ಲ ತಾಯಿಗಿಂದ ಬಂಧುವಿಲ್ಲ ಎನ್ನುವಂತೆ ತಾಯಿ ಎನ್ನುವ ಸಂಬಂಧ ಮಹತ್ವ ಪೂರ್ಣವಾದದು. ಮಗು ಜನಿಸಿದಾಗ ಪುನರ್ಜನ್ಮ ಪಡೆಯುವ ಅವಳು. ಮಗುವಿನಲ್ಲೇ ತನ್ನ ಖುಷಿಯ ಪ್ರಪಂಚ ಕಾಣುತ್ತಾಳೆ. ತನ್ನ ಮಗುವಿಗೆ ಸಣ್ಣ ನೋವಾದರೂ ಕೊರಗುವ ತಾಯಿ, ಕಣ್ಣೇದುರೆ ಮಗುವಿನ ಸಾವನನ್ನು ಹೇಗೆ ಸಹಿಸಿಯಾಳು?
ಕೆಲವೊಮ್ಮೆ ನಾವು ಮಂಗನಾಟ ಎಂದು ಛೇಡಿಸುವುದುಂಟು, ಆದರೆ ಅವುಗಳು ನಮ್ಮಂತೆ ಭಾವನಾತ್ಮಕ ಜೀವಿಗಳು ಎನ್ನುವುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಘಟನೆ ನಿದರ್ಶನವಾಗಿದ್ದು, ಕಣ್ಣೇದುರೇ ಮಗುವಿನ ಸಾವನನ್ನು ಕಂಡು ರೋಧಿಸುತ್ತಿರುವ ತಾಯಿ ಮಂಗನ ಸ್ಥಿತಿ ಎಂತವರ ಕರಳು ಹಿಂಡಿವಂತಿತ್ತು.

ಒಬ್ಬ ತಾಯಿ ತನ್ನ ಮಗುವನ್ನು ಕಳೆದುಕೊಂಡಾಗ ಅದೆಷ್ಟೋ ಸಂಕಟ ಪಡುತ್ತಾಳೆ. ಅದೇ ರೀತಿ ಇಲ್ಲೊಂದು ಮಂಗ ತನ್ನ ಮಗುವನ್ನು ಕಳೆದುಕೊಂಡು ಅಷ್ಟೇ ರೋಧನೆ ಮಾಡುತ್ತಿದೆ. ವಿದ್ಯುತ್ ಸ್ಪರ್ಶದಿಂದ ಮರಿ ಮಂಗ ಸಾವನ್ನಪ್ಪಿದನ್ನು ಕಂಡು ತಾಯಿ ಮಂಗನ ರೋಧನೆ ಮುಗಿಲು ಮುಟ್ಟಿದ್ದು ಒಂದೆಡೆಯಾದರೆ, ಇದನ್ನು ಕಣ್ಣಾರೆ ಕಂಡ ಗ್ರಾಮಸ್ಥರು ಕಣ್ಣೀರು ಹಾಕಿರುವ ಘಟನೆ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ನಡೆದಿದೆ.
ಮಿಶ್ರಿಕೋಟಿ ಗ್ರಾಮದಲ್ಲಿ ದಿನಂಪ್ರತಿ ಗ್ರಾಮದಲ್ಲಿ ಮಂಗಗಳ ಹಿಂಡು ಪರಸ್ಪರ ಚಿನ್ನಾಟ ಆಡುತ್ತಾ, ಗೋಡೆ ಗೋಡೆಯಿಂದ ಜಿಗಿಯುತ್ತಿದ್ದವು. ಈ ವೇಳೆ ಮರಿ ಮಂಗ ಗೋಡೆಯಿಂದ ಗೋಡೆಗೆ ಜಿಗಿಯಲು ಹೋಗಿ ವಿದ್ಯುತ್ ಕಂಬದ ತಂತಿಗೆ ಸ್ಪರ್ಶಿಸಿದೆ. ಇದರಿಂದ ಕ್ಷಣಾರ್ಧದಲ್ಲೇ ನೆಲಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿತು. ಇದನ್ನು ನೋಡಿ ಗ್ರಾಮಸ್ಥರೆಲ್ಲರೂ ಮರುಗಿದ್ದಾರೆ.

ಇನ್ನು ಸತ್ತು ಮಂಗವನ್ನು ವಿಧಿ ಪ್ರಕಾರ ಶವಸಂಸ್ಕಾರ ಮಾಡಿದರಾಯಿತು ಎಂದುಕೊಂಡು ಗ್ರಾಮದ ಯುವಕರ ತಂಡ ಅದನ್ನು ತಳ್ಳುಗಾಡಿಯಲ್ಲಿ ಹಾಕಿದ್ದರು. ಆದರೆ ಮಂಗ ತಾಯಿ ತನ್ನ ಮಗು ಸತ್ತು ಬಿದ್ದಿದ್ದನ್ನು ನೋಡಿ, ಮಗು ಶವದ ಬಳಿಯಿದ್ದ ಯುವಕರನ್ನು ಹೆದರಿಸಿ, ಮಗುವಿನ ಶರೀರ ಅಲ್ಲಾಡಿಸಿ ಮೇಲೇಳಿಸಲು ಪ್ರಯತ್ನಿಸಿದೆ. ಮಗು ಸತ್ತಿರುವುದನ್ನು ಅರಿತ ತಾಯಿ ಮಂಗ ಶವದ ಬಳಿ ರೋಧಿಸಲು ಪ್ರಾರಂಭಿಸಿತು. ಕೊನೆಯಲ್ಲಿ ಗ್ರಾಮಸ್ಥರು ಮಂಗನನ್ನು ಸಾಂಪ್ರದಾಯಿಕವಾಗಿ ಅಂತ್ಯಸಂಸ್ಕಾರ ಮಾಡಿದರು. ಈ ವೇಳೆ ತಾಯಿ ಮಂಗನ ದುಃಖ ನೋಡಿ ಗ್ರಾಮಸ್ಥರು ಕಣ್ಣೀರು ಹಾಕಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications