ವಾಜಪೇಯಿ, ಬಿಎಸ್ ವೈ ಗಾಳಿಯಲ್ಲಿ ಗೆದ್ದುಬಂದ ಪ್ರಹ್ಲಾದ ಜೋಶಿ: ಸಚಿವ ಕುಲಕರ್ಣಿ
ಧಾರವಾಡ, ಅಕ್ಟೋಬರ್ 21 : ಪ್ರಹ್ಲಾದ ಜೋಶಿಯವರಿಗೆ ಪಾಲಿಕೆ ಚುನಾವಣೆ ಗೆಲ್ಲೋದಕ್ಕೂ ಆಗಿರಲಿಲ್ಲ. ಆದರೆ ಜಾತಿ ಗಲಭೆ ಸೃಷ್ಟಿಸಿ, ಈದ್ಗಾ ಮೈದಾನದ ವಿಷಯದ ಮೇಲೆ ಸಂಸದರಾಗಿ ಆಯ್ಕೆಯಾಗಿದ್ದಾರೆ. ಗದ್ದಲ ಆದರೂ ಜೋಶಿಯಂಥವರ ಮೇಲೆ ಕೇಸ್ ಇಲ್ಲ. ಹಿಂದೂ ಹುಡುಗರ ದಾರಿ ತಪ್ಪಿಸಿ, ಧರ್ಮದ ಗಲಭೆ ಸೃಷ್ಟಿಸಿದ್ದಾರೆ ಎಂದು ಸಚಿವ ವಿನಯ ಕುಲಕರ್ಣಿ ಆರೋಪಿಸಿದ್ದಾರೆ.
ಟಿಪ್ಪು ಜಯಂತಿ ವಿಷಯದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತು ಸಂಸದ ಪ್ರಹ್ಲಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಧಾರವಾಡ ಜಿಲ್ಲೆಯಲ್ಲಿಯೇ ಇವರಿಂದ ಅನೇಕ ಹಿಂದೂ ಯುವಕರ ಭವಿಷ್ಯ ಹಾಳಾಗಿದೆ. ಸಮಾನತೆಯಿಂದ ಇರುವುದು ನಮ್ಮ ಕರ್ತವ್ಯ. ನಮ್ಮ ಸರಕಾರ ಬಂದರೆ ಟಿಪ್ಪು ಜಯಂತಿ ರದ್ದು ಮಾಡ್ತೀವಿ ಅನ್ನೋದು ಸರಿಯಲ್ಲ ಎಂದು ಹೇಳಿದರು.

ಗೋ ಹತ್ಯೆ ಬಗ್ಗೆ ಮಾತಾಡುವ ಬಿಜೆಪಿ ನಾಯಕರು ಮೊದಲು ಹತ್ತತ್ತು ಆಕಳು ಸಾಕಲಿ. ಗೋ ಹತ್ಯೆ, ಕೋಮುವಾದದಂತಹ ಭಾವನಾತ್ಮಕ ವಿಚಾರ ತುಂಬಿ, ಗಲಭೆ ಮಾಡಿ ಚುನಾವಣೆ ಗೆಲ್ತಾರೆ. ಆರೆಸ್ಸೆಸ್, ಬಿಜೆಪಿಯವರು ಮಾತ್ರ ಹಿಂದೂಗಳಲ್ಲ. ದೇಶದಲ್ಲಿ ಬಹುಸಂಖ್ಯಾತ ಹಿಂದೂಗಳಿದ್ದಾರೆ ಎಂದರು.
ಪ್ರಧಾನಿ ಮೋದಿ ಅವರಿಗೆ ತಾವು ಮಾತನಾಡಿದ ಕೆಲಸಗಳನ್ನೇ ಮಾಡಲು ಆಗಿಲ್ಲ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಏನೇನೋ ಮಾಡ್ತೀವಿ ಅಂತ ಇದ್ದರು. ಆದರೆ ಏನೂ ಮಾಡಿಲ್ಲ ಎಂದು ಸಚಿವರು ಟೀಕಿಸಿದರು.

ಸಂಸದ ಪ್ರಹ್ಲಾದ ಜೋಶಿ ಹೇಳಿಕೆ ಮೂರ್ಖತನದ ಪರಮಾವಧಿ. ಗಲಭೆ ಸೃಷ್ಟಿಸುವುದಕ್ಕಾಗಿಯೇ ಧರ್ಮದ ಹೆಸರಿನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೋಶಿ ಒಂದು ಸಲ ವಾಜಪೇಯಿ, ಒಮ್ಮೆ ಯಡಿಯೂರಪ್ಪ ಮತ್ತೊಮ್ಮೆ ಮೋದಿ ಗಾಳಿಯಲ್ಲಿ ಗೆದ್ದು ಬಂದಿದ್ದಾರೆ. ತಮ್ಮನ್ನು ಸೀನಿಯರ್ ಅಂದುಕೊಳ್ಳುತ್ತಾರೆ. ಆದರೆ ಅವರಿಗಿಂದ ಐದು ವರ್ಷದ ಮೊದಲೇ ನಾನು ಜನಪ್ರತಿನಿಧಿಯಾಗಿದ್ದೇನೆ. ನಾನೇ ಅವರಿಗಿಂತ ಸೀನಿಯರ್ ಎಂದರು ವಿನಯ ಕುಲಕರ್ಣಿ
-
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications