ಫೆಬ್ರವರಿ 14ರಿಂದ ಧಾರವಾಡ ರಂಗಾಯಣದಲ್ಲಿ ಬಹುಭಾಷಾ ನಾಟಕೋತ್ಸವ: ಇಲ್ಲಿದೆ ವಿವರ
ಧಾರವಾಡ, ಫೆಬ್ರವರಿ 10: ಫೆಬ್ರವರಿ 14ರಿಂದ ಫೆಬ್ರವರಿ 19ರವರೆಗೆ ಆರು ದಿನ ಧಾರವಾಡದ ಪಂ. ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಬಹುಭಾಷಾ ನಾಟಕೋತ್ಸವ ಆಯೋಜಿಸಿದೆ ಎಂದು ರಂಗಾಯಣದ ನಿರ್ದೇಶಕ ರಾಜು ತಾಳಿಕೋಟಿ ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕನ್ನಡದ ಜೊತೆಗೆ ಹಿಂದಿ, ಮರಾಠಿ, ಮಲೆಯಾಳಂ ಭಾಷೆಯ ನಾಟಕಗಳ ಮೂಲಕ ಹೆಣ್ಣಿನ ಅಸ್ಮಿತೆಯ ಹೋರಾಟ, ಕಲಾವಿದನ ಅಸ್ಮಿತೆಯ ಬಿಕ್ಕಟ್ಟು, ಮನುಷ್ಯ ನಾಗುವುದೆಂದರೆ ಸಹಜ-ಸರಳ ವಾಗಿರುವುದು ಎಂಬ ಸಂದೇಶ ನೀಡುವ ನಾಟಕಗಳನ್ನು ಆಯ್ದುಗೊಳ್ಳಲಾಗಿದೆ. ನಾಟಕೋತ್ಸವಕ್ಕೆ ಖ್ಯಾತ ನಾಟಕಕಾರ, ಸಾಹಿತಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ ಫೆಬ್ರವರಿ 14ರಂದು ಸಂಜೆ 6ಕ್ಕೆ ಉದ್ಘಾಟಿಸಲಿದ್ದಾರೆ ಎಂದರು.

ಜಡಭರತ ಎಂದ ಖ್ಯಾತನಾಮ ಜಿ.ಬಿ. ಜೋಶಿ ಅವರು ಕನ್ನಡ ಪ್ರಮುಖ ನಾಟಕಕಾರರಲ್ಲಿ ಒಬ್ಬರು. ಅವರ ಸತ್ತವರ ನೆರಳು ನಾಟಕವನ್ನು ಬಿ.ವಿ. ಕಾರಂತರು ಹೊರತುಪಡಿಸಿ ಮತ್ತಾರು ನಿರ್ದೇಶಿಸಲು ಸಾಧ್ಯವಾಗಿಲ್ಲ. ಈ ನಾಟಕವನ್ನು ಇದೀಗ ಕಾರಂತರ ಶಿಷ್ಯರಲ್ಲಿ ಒಬ್ಬರು ಪ್ರಯತ್ನಿಸಿದ್ದಾರೆ. ರಂಗಾಯಣದ ಬಹುಭಾಷಾ ನಾಟಕೋತ್ಸವದಲ್ಲಿ ಫೆಬ್ರವರಿ 17ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಟ್ಟು 20 ಪ್ರದರ್ಶನ ಹಮ್ಮಿಕೊಳ್ಳಲು ಯೋಜಿಸಲಾಗಿದೆ.
ಶ್ವೇತಾ ಶ್ರೀನಿವಾಸ ನಿರ್ದೇಶನದ 'ಇದ್ದಾಗ ನಿಮ್ದು ಕದ್ದಾಗ ನಮ್ಮು' ಕನ್ನಡ ನಾಟಕವನ್ನು ಬೆಂಗಳೂರಿನ ಶ್ರೀನಿವಾಸ ತಂಡವು ಪ್ರದರ್ಶಿಸಲಿದೆ. ಫೆ. 19ರಂದು ಸಿದ್ಧಲಿಂಗ ಪಟ್ಟಣಶೆಟ್ಟಿ ಅವರ ಆಶೀಫ್ ಕ್ಷತ್ರೀಯ ಮತ್ತು ಶ್ವೇತಾ ಶ್ರೀನಿವಾಸ ನಿರ್ದೇಶ ನದ ಧರ್ಮ ನಟಿ ಕನ್ನಡ ನಾಟಕವನ್ನು ಬೆಂಗಳೂರಿನ ರಂಗರಥ ಟ್ರಸ್ಟ್ ಪ್ರಸ್ತುತಪಡಿಸಲಿದೆ ಎಂದು ತಾಳಿಕೋಟಿ ತಿಳಿಸಿದರು.
ರಂಗಾಯಣದ ಆಡಳಿತಾಧಿಕಾರಿ ಶಶಿಕಲಾ ಹುಡೇದ ಮಾತನಾಡಿ, ನಾಟಕ ಕಟ್ಟುವಲ್ಲಿ ಬಹುದೊಡ್ಡ ಶ್ರಮವಿದೆ. ಆದ್ದರಿಂದ ಪ್ರತಿ ನಾಟಕಕ್ಕೂ 100 ಪ್ರವೇಶ ದರ ಹಾಗೂ ಆರು ನಾಟಕಗಳಿಗಾಗಿ 500 ರೂಪಾಯಿ ದರ ನಿಗದಿ ಪಡಿಸಲಾಗಿದೆ. ಎಲ್ಲ ನಾಟಕಗಳು ಪ್ರತಿದಿನ ಸಂಜೆ 6.30ಕ್ಕೆ ಪ್ರದರ್ಶನಗೊಳ್ಳಲಿವೆ. ನಾಟಕದ ಪೂರ್ವದಲ್ಲಿ ಪ್ರತಿದಿನ ಮಧುರವೇಣಿ ನೃತ್ಯಾಲಯ ವಿದ್ಯಾರ್ಥಿಗಳಿಂದ ಶಾಸ್ತ್ರೀಯ ನೃತ್ಯ ಪ್ರದರ್ಶನವಿರುತ್ತದೆ ಎನ್ನುವ ಮಾಹಿತಿ ನೀಡಿದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications