ಫೆಬ್ರವರಿ 14ರಿಂದ ಧಾರವಾಡ ರಂಗಾಯಣದಲ್ಲಿ ಬಹುಭಾಷಾ ನಾಟಕೋತ್ಸವ: ಇಲ್ಲಿದೆ ವಿವರ
ಧಾರವಾಡ, ಫೆಬ್ರವರಿ 10: ಫೆಬ್ರವರಿ 14ರಿಂದ ಫೆಬ್ರವರಿ 19ರವರೆಗೆ ಆರು ದಿನ ಧಾರವಾಡದ ಪಂ. ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಬಹುಭಾಷಾ ನಾಟಕೋತ್ಸವ ಆಯೋಜಿಸಿದೆ ಎಂದು ರಂಗಾಯಣದ ನಿರ್ದೇಶಕ ರಾಜು ತಾಳಿಕೋಟಿ ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕನ್ನಡದ ಜೊತೆಗೆ ಹಿಂದಿ, ಮರಾಠಿ, ಮಲೆಯಾಳಂ ಭಾಷೆಯ ನಾಟಕಗಳ ಮೂಲಕ ಹೆಣ್ಣಿನ ಅಸ್ಮಿತೆಯ ಹೋರಾಟ, ಕಲಾವಿದನ ಅಸ್ಮಿತೆಯ ಬಿಕ್ಕಟ್ಟು, ಮನುಷ್ಯ ನಾಗುವುದೆಂದರೆ ಸಹಜ-ಸರಳ ವಾಗಿರುವುದು ಎಂಬ ಸಂದೇಶ ನೀಡುವ ನಾಟಕಗಳನ್ನು ಆಯ್ದುಗೊಳ್ಳಲಾಗಿದೆ. ನಾಟಕೋತ್ಸವಕ್ಕೆ ಖ್ಯಾತ ನಾಟಕಕಾರ, ಸಾಹಿತಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ ಫೆಬ್ರವರಿ 14ರಂದು ಸಂಜೆ 6ಕ್ಕೆ ಉದ್ಘಾಟಿಸಲಿದ್ದಾರೆ ಎಂದರು.

ಜಡಭರತ ಎಂದ ಖ್ಯಾತನಾಮ ಜಿ.ಬಿ. ಜೋಶಿ ಅವರು ಕನ್ನಡ ಪ್ರಮುಖ ನಾಟಕಕಾರರಲ್ಲಿ ಒಬ್ಬರು. ಅವರ ಸತ್ತವರ ನೆರಳು ನಾಟಕವನ್ನು ಬಿ.ವಿ. ಕಾರಂತರು ಹೊರತುಪಡಿಸಿ ಮತ್ತಾರು ನಿರ್ದೇಶಿಸಲು ಸಾಧ್ಯವಾಗಿಲ್ಲ. ಈ ನಾಟಕವನ್ನು ಇದೀಗ ಕಾರಂತರ ಶಿಷ್ಯರಲ್ಲಿ ಒಬ್ಬರು ಪ್ರಯತ್ನಿಸಿದ್ದಾರೆ. ರಂಗಾಯಣದ ಬಹುಭಾಷಾ ನಾಟಕೋತ್ಸವದಲ್ಲಿ ಫೆಬ್ರವರಿ 17ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಟ್ಟು 20 ಪ್ರದರ್ಶನ ಹಮ್ಮಿಕೊಳ್ಳಲು ಯೋಜಿಸಲಾಗಿದೆ.
ಶ್ವೇತಾ ಶ್ರೀನಿವಾಸ ನಿರ್ದೇಶನದ 'ಇದ್ದಾಗ ನಿಮ್ದು ಕದ್ದಾಗ ನಮ್ಮು' ಕನ್ನಡ ನಾಟಕವನ್ನು ಬೆಂಗಳೂರಿನ ಶ್ರೀನಿವಾಸ ತಂಡವು ಪ್ರದರ್ಶಿಸಲಿದೆ. ಫೆ. 19ರಂದು ಸಿದ್ಧಲಿಂಗ ಪಟ್ಟಣಶೆಟ್ಟಿ ಅವರ ಆಶೀಫ್ ಕ್ಷತ್ರೀಯ ಮತ್ತು ಶ್ವೇತಾ ಶ್ರೀನಿವಾಸ ನಿರ್ದೇಶ ನದ ಧರ್ಮ ನಟಿ ಕನ್ನಡ ನಾಟಕವನ್ನು ಬೆಂಗಳೂರಿನ ರಂಗರಥ ಟ್ರಸ್ಟ್ ಪ್ರಸ್ತುತಪಡಿಸಲಿದೆ ಎಂದು ತಾಳಿಕೋಟಿ ತಿಳಿಸಿದರು.
ರಂಗಾಯಣದ ಆಡಳಿತಾಧಿಕಾರಿ ಶಶಿಕಲಾ ಹುಡೇದ ಮಾತನಾಡಿ, ನಾಟಕ ಕಟ್ಟುವಲ್ಲಿ ಬಹುದೊಡ್ಡ ಶ್ರಮವಿದೆ. ಆದ್ದರಿಂದ ಪ್ರತಿ ನಾಟಕಕ್ಕೂ 100 ಪ್ರವೇಶ ದರ ಹಾಗೂ ಆರು ನಾಟಕಗಳಿಗಾಗಿ 500 ರೂಪಾಯಿ ದರ ನಿಗದಿ ಪಡಿಸಲಾಗಿದೆ. ಎಲ್ಲ ನಾಟಕಗಳು ಪ್ರತಿದಿನ ಸಂಜೆ 6.30ಕ್ಕೆ ಪ್ರದರ್ಶನಗೊಳ್ಳಲಿವೆ. ನಾಟಕದ ಪೂರ್ವದಲ್ಲಿ ಪ್ರತಿದಿನ ಮಧುರವೇಣಿ ನೃತ್ಯಾಲಯ ವಿದ್ಯಾರ್ಥಿಗಳಿಂದ ಶಾಸ್ತ್ರೀಯ ನೃತ್ಯ ಪ್ರದರ್ಶನವಿರುತ್ತದೆ ಎನ್ನುವ ಮಾಹಿತಿ ನೀಡಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications