ಹುಬ್ಬಳ್ಳಿ- ಧಾರವಾಡದಲ್ಲಿ ನಿಲ್ಲದ ಪುಂಡರ ಹಾವಳಿ: ಅಂಜುಮನ್ ಅಧ್ಯಕ್ಷನ ಮೇಲೆ ಅಟ್ಯಾಕ್
ಧಾರವಾಡ, ಆಗಸ್ಟ್ 11: ಹುಬ್ಬಳ್ಳಿ, ಧಾರವಾಡ ವ್ಯಾಪ್ತಿಯಲ್ಲಿ ಕೆಲವು ತಿಂಗಳುಗಳಿಂದ ಅಪರಾಧ ಚಟುವಟಿಕೆಗಳದ್ದೆ ಹಾವಳಿಯಾಗಿದೆ. ಪ್ರೀತಿಗಾಗಿ ಯುವತಿಯ ಕೊಲೆ, ಒಂದಷ್ಟು ಬೆದರಿಕೆ ಸೇರಿಮತೆ ಕಾನೂನು ಬಾಹಿರ ಕೃತ್ಯಗಳು ನಡೆದಿದ್ದವು. ಇದೆಲ್ಲ ಆದರೂ ಸಹ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಹೀಗಾಗಿ ಕಾನೂನು ಸುವ್ಯವಸ್ಥೆ ಸರಿ ಇದೆಯೇ ಎಂಬ ಅನುಮಾನ ಮೂಡಿದೆ. ಏಕಂದರೆ ಪುಂಡರು ಮತ್ತೆ ಅಟ್ಟಹಾಸ ಮೆರೆದಿದ್ದು, ಧಾರವಾಡ ಅಂಜುಮನ್ ಸಂಸ್ಥೆ ಅಧ್ಯಕ್ಷರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ ಮಾಡಿದ್ದಾರೆ.
10ಕ್ಕು ಹೆಚ್ಚು ಯುವಕರಿಂದ ಗುಂಪು ಧಾರವಾಡ ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಮನೆಗೆ ನುಗ್ಗಿ ಹಲ್ಲೆಗೆ ಕಳೆದ ರಾತ್ರಿ ಮುಂದಾಗಿತ್ತು. ಅಂಜುಮನ್ ಸಂಸ್ಥೆಯ ಕಚೇರಿಯಲ್ಲಿಯೂ ಹಲ್ಲೆಗೆ ಮುಂದಾಗಿದ್ದ ಗ್ಯಾಂಗ್, ಅಲ್ಲಿ ಇಸ್ಮಾಯಿಲ್ ಅವರು ಇಲ್ಲದ ಕಾರಣ ಮನೆಗೆ ನುಗ್ಗಿ ಗಲಾಟೆ, ಹಲ್ಲೆ ಮಾಡಿದ ಘಟನೆ ನಡೆದಿದೆ.

ಈ ಪುಂಡರ ಗ್ಯಾಂಗ್ ಚಾಕು ಹಿಡಿದುಕೊಂಡು ಏಕಾಎಕಿ ಇಸ್ಮಾಯಿಲ್ ಮನೆಗೆ ನುಗ್ಗಿದೆ. ಮನೆಯಲ್ಲಿ ಅವರು ಇಲ್ಲ ಕಾರಣ, ಉಳಿದ ಸದಸ್ಯರ ಮೇಲೆ ಮನ ಬಂದಂತೆ ನಿಂದಿಸಿ, ಅಸಭ್ಯವಾಗಿ ವರ್ತಿಸಿದ್ದಾರೆ. ಅಲ್ಲದೇ ಇಸ್ಮಾಯಿಲ್ ಕೊಲ್ಲಲು ಬಂದಿದ್ದೇವೆ ಎಂದು ಬಹಿರಂಗವಾಗಿ ಮನೆಯವರ ಮುಂದೆ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಇಸ್ಮಾಯಿಲ್ ಇಲ್ಲದ ಕಾರಣಕ್ಕೆ ಮನೆಯವರೊಂದಿಗೆ ಜಗಳ ತೆಗೆದಿದ್ದಾರೆ. ಇದರಿಂದ ಆತಂಕಗೊಂಡ ಕುಟುಂಬಸ್ಥರಿಂದ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಈ ಕುರಿತು ಇಂದು ರಾತ್ರಿ ಇಸ್ಮಾಯಿಲ್ ಅವರು ಸುದ್ದಿಗೋಷ್ಠಿ ಕರೆದಿದ್ದಾರೆ. ತಮಗೆ ರಕ್ಷಣೆ ಬೇಕು, ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಪೊಲೀಸರ ಬಳಿ ಅವರು ಮನವಿ ಮಾಡಿದ್ದಾರೆ.
ಒಟ್ಟು ಸುಮಾರು 18-20 ವರ್ಷದ ಹುಡುಗರು ಮನೆಗೆ ನುಗ್ಗಿ ನನ್ನ ಹುಡುಕಾಡಿದ್ದಾರೆ. ಹಲ್ಲೆಗೆ ಪ್ಲಾನ್ ಮಾಡಿಕೊಂಡು ಬಂದಿದ್ದಾರೆ. ಕೊಲ್ಲುವುದಾಗಿ ಮನೆಯವರ ಮುಂದೇ ಹೇಳಿದ್ದಾರೆ. ಈ ಪುಂಡ ಗ್ಯಾಂಗ್ ಮೊದಲಿಗೆ ಅಂಜುಮನ್ ಸಂಸ್ಥೆಯ ಕಚೇರಿ ಬಳಿ ನನಗಾಗಿ ತಡಕಾಡಿದೆ. ನಂತರ ಮನೆಗೆ ನುಗ್ಗಿದ್ದು, ನಾನು ಇಲ್ಲದ್ದಕ್ಕೆ ನನ್ನ ಕುಟುಂಬಸ್ಥರೊಂದಿಗೆ ಗಲಾಟೆ ಮಾಡಿಕೊಂಡಿದ್ದಾರೆ. ನನ್ನ ಕುಟುಂಬ ಭಯದಲ್ಲಿದೆ.
ಮುಸ್ಲಿಂ ನಾಯಕನಿಗೆ ಮುಸ್ಲಿಂ ಪುಂಡರಿಂದಲೇ ಸ್ಕೆಚ್
ನನ್ನ ಹೊಡೆಯಲು ಬಂದವರು ಮುಸ್ಲಿಂ ಹುಡುಗರು ಎಂಬುದು ಗೊತ್ತಾಗಿದೆ. ದುಷ್ಕರ್ಮಿಗಳಿಂದ ನಮಗೆ ಜೀವ ಬೆದರಿಕೆ ಇದೆ. ಮಣಕಿಲ್ಲಾ, ರಸೂಲಪುರ ಗಲ್ಲಿಯಲ್ಲಿ ಚಾಕು ಹಿಡಿದುಕೊಂಡು ನಿನ್ನೆ ಓಡಾಡಿದ್ದಾರೆ. ಪೊಲೀಸರು ಮತ್ತು ಪೊಲೀಸ್ ಕಮಿಷನರ್ ಮೇಲೆ ನಂಬಿಕೆ ಇದ್ದು, ಈ ಕುರಿತು ಸೂಕ್ತ ತನಿಖೆ ನಡೆಸಿ ನಮಗೆ ನ್ಯಾಯ ಕೊಡಿಸುವ ಜೊತೆಗೆ ರಕ್ಷಣೆ ನೀಡಬೇಕು ಎಂದಿದ್ದಾರೆ.

ಧಾರವಾಡ ಜಿಲ್ಲೆ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ. ನಾನು ಯಾರೊಂದಿಗೆ ವೈಯಕ್ತಿಕ ದ್ವೇಷ ಮಾಡಿಕೊಂಡಿಲ್ಲ. ಹೀಗಿದ್ದರು ಆ 18 ರಿಂದ 20 ವರ್ಷ ವಯೋಮಾನದ ಹುಡುಗರ ಗುಂಪು ಜೀವ ಬೆದರಿಕೆ ಹಾಕಿದೆ. ನಾಣು ಮನೆಯಲ್ಲೇ ಇದ್ದಿದ್ದರೆ ಏನೆಲ್ಲ ಅನಾಹುತಗಳು ಸಂಭವಿಸುತ್ತಿದ್ದವು ಎಂದು ನೆನೆಸಿಕೊಂಡರೆ ಭಯವಾಗುತ್ತದೆ.
ಒಂದಷ್ಟು ಬಡ ಕುಟುಂಬದ ಹುಡುಗರ ಕಷ್ಟಕ್ಕೆ ಸಹಾಯ ಮಾಡಿದ್ದೇನೆ. ಆ ಹುಡುಗರ ತಪ್ಪಿಲ್ಲದೇ ಇರಬಹುದು ಆದರೆ ಹಿಂದೆ ಇರೋರು ಯಾರು ಎಂದು ಪತ್ತೆ ಆಗಬೇಕು. ನನ್ನ ಬಳಿ ಇರುವ ಎಲ್ಲ ಮಾಹಿತಿ, ಕಾಲ್ ಡಿಟೇಲ್ಸ್ ಅನ್ನು ಪೊಲೀಸರಿಗೆ ನೀಡುತ್ತೇನೆ. ಸೂಕ್ತ ತನಿಖೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಮುಸ್ಲಿಂ ಹುಡುಗರಿಂದ ಹೊಡೆಸಲು ಪ್ಲಾನ್
ಈಗತಾನೇ ಹದಿ ಹರೆಯಕ್ಕೆ ಬಂದ ಮುಸ್ಲಿಂ ಹುಡುಗರಿಂದ ನನಗೆ ಸ್ಕೆಚ್ ಹಾಕಲಾಗಿದೆ. ನಶೆಯಲ್ಲಿರುವ ಹುಡುಗರಿಂದ ಹೊಡೆಸಬೇಕು ಪ್ಲಾನ್ ಮಾಡಿಕೊಳ್ಳಲಾಗಿದೆ. ನನ್ನ ಹೊಡೆಸಿದ ನಂತರ ಆ ಹುಡುಗರನ್ನು ಎನ್ಕೌಂಟರ್ ಮಾಡಿಸಬೇಕೆಂದು ಯೋಜಿಸಿದಂತಿದೆ. ಒಂದು ವೇಳೆ ನನ್ನ ಜೀವಕ್ಕೆ ಏನಾದರೂ ಆದರೆ ಇಂಥವರೆ ಕಾರಣ ಎಂದು ಮನೆಯಲ್ಲಿ ಹೇಳಿಟ್ಟಿದ್ದೇನೆ ಎಂದು ಇಸ್ಮಾಯಿಲ್ ತಿಳಿಸಿದ್ದಾರೆ.
ಅವಳಿನಗರ ಜನರಲ್ಲಿ ಆತಂಕ
ಹುಬ್ಬಳ್ಳಿ ಧಾರವಾಡ ಕಳೆದ ಮೂರು ನಾಲ್ಕು ತಿಂಗಳಲ್ಲಿ ಕೊಲೆ, ಕಳ್ಳತನ, ಅತ್ಯಾಚಾರದಂತ ಅಪರಾಧ ಕೃತ್ಯಗಳಿಂದಳೇ ಮುನ್ನೆಲೆಗೆ ಬರುತ್ತಿದೆ. ಈ ಕಾರಣದಿಂದ ಸರ್ಕಾರ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹೆಣಗಾಡುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿತ್ತು. ಇದಾಗಿ ಪೊಲೀಸರ ವರ್ಗಾವಣೆಯಂತಹ ಒಂದಷ್ಟು ಬದಲಾವಣೆಗಳಾದರೂ ಇಲ್ಲಿ ಯಾವುದು ಬದಲಾಗಿಲ್ಲ. ಇಲ್ಲಿನ ನಿವಾಸಿಗಳು ಆತಂಕದಲ್ಲಿಯೇ ಬದುಕಬೇಕಾದ ಅನಿವಾರ್ಯತೆ ಸೃಷ್ಟಿಯಾಗಿಬಿಟ್ಟಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications