15 ಸಾವಿರ ಮೃತದೇಹಗಳ ವಿಧಿ ವಿಧಾನ ನಡೆಸಿದ್ದ ಮುಸ್ತಾಕ್ ನಿಧನ
ಧಾರವಾಡ, ಮೇ 22: ಕಳೆದ 21 ವರ್ಷಗಳಲ್ಲಿ ಸುಮಾರು 15 ಸಾವಿರ ಮೃತದೇಹಗಳನ್ನು ಸಾಗಿಸಿ ವಿಧಿ ವಿಧಾನ ನಡೆಸಿದ್ದ ಮುಸ್ತಾಕ್ ಅಹ್ಮದ್ ಖಾತ್ರಿ ಇತ್ತೀಚೆಗೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಧಾರವಾಡ ತಾಲೂಕು ಬ್ರಾಹ್ಮಣ ಸಭಾವು ಮುಸ್ತಾಕ್ ಅಹ್ಮದ್ ಖಾತ್ರಿಗೆ 'ಮರಳಿ ಮಣ್ಣಿಗೆ' ಎಂಬ ಆಂಬುಲೆನ್ಸ್ ಒಂದನ್ನು ಕೊಡುಗೆಯಾಗಿ ನೀಡಿದ್ದು ಈ ಆಂಬುಲೆನ್ಸ್ ಮೂಲಕ ಮುಸ್ತಾಕ್ ಅಹ್ಮದ್ ಅಲಿ ಅವರು ಸುಮಾರು 21 ವರ್ಷಗಳಲ್ಲಿ 15 ಸಾವಿರ ಮೃತ ದೇಹಗಳನ್ನು ಸಾಗಿಸಿ ಅಂತ್ಯ ಸಂಸ್ಕಾರ ನಡೆಸಿದ್ದರು.
ಈ ಕೊರೊನಾ ಕಾಲಘಟ್ಟದಲ್ಲಿ ಅದೆಷ್ಟೋ ಮೃತದೇಹಗಳ ಅಂತಿಮ ಸಂಸ್ಕಾರ ನಡೆಸಲು ಕುಟುಂಬಸ್ಥರೇ ಹಿಂದೆ ಮುಂದೆ ನೋಡುತ್ತಾರೆ. ಅಂತಹ ಸಂದರ್ಭದಲ್ಲಿ ಮುಸ್ತಾಕ್ ದಿನಕ್ಕೆ 4-5 ಕೊರೊನಾ ಸೋಂಕಿತರ ಮೃತದೇಹವನ್ನು ಆಯಾ ಧರ್ಮದ ವಿಧಿ, ವಿಧಾನ ಪಾಲಿಸಿ, ಕೊರೊನಾ ಮಾರ್ಗಸೂಚಿಗನುಸಾರವಾಗಿ ಮಾಡಿದ್ದಾರೆ ಎಂದು ವರದಿಯಾಗಿದೆ. ಮುಸ್ತಾಕ್ರ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು.

ಕಳೆದ 21 ವರ್ಷಗಳಿಂದ ಮುಸ್ತಾಕ್ ಅಂಬ್ಯುಲೆನ್ಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಮುಸ್ತಾಕ್ ಯಾವುದೇ ಧರ್ಮ ಭೇದವಿಲ್ಲದೆ ಎಲ್ಲ ಧರ್ಮದ ಜನರ ಮೃತ ದೇಹಗಳ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
ಹಲವಾರು ವರ್ಷಗಳಿಂದ ಅಂತಿಮ ಸಂಸ್ಕಾರ ಮಾಡಿಕೊಂಡು ಬಂದಿದ್ದ ಮುಸ್ತಾಕ್ಗೆ ಎಲ್ಲ ಧರ್ಮಗಳ ಧಾರ್ಮಿಕ ವಿಧಿ ವಿಧಾನಗಳ ಬಗ್ಗೆ ತಿಳಿದಿದ್ದು, ಮೃತರ ಧರ್ಮಕ್ಕೆ ಅನುಸಾರವಾಗಿ ವಿಧಿ, ವಿಧಾನದ ಮೂಲಕ ಅಂತಿಮ ಸಂಸ್ಕಾರ ನೆರವೇರಿಸುತ್ತಿದ್ದರು.
(ಒನ್ಇಂಡಿಯಾ ಸುದ್ದಿ)
Recommended Video
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications