ನೀರು ಹಂಚಿಕೆ ವಿವಾದಕ್ಕೆ ರಿಯಲ್ ಸ್ಟಾರ್ ಉಪ್ಪಿಯಿಂದ ಪರಿಹಾರ
ಹುಬ್ಬಳ್ಳಿ, ಸೆ.13: ಕಳಸಾ-ಬಂಡೂರಿ ನಾಲಾ ಯೋಜನೆಗೆ ಆಗ್ರಹಿಸಿ ಉತ್ತರ ಕರ್ನಾಟಕದಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಕನ್ನಡ ಚಿತ್ರರಂಗದ ತಾರೆಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ನಡುವೆ ಹಲವು ವರ್ಷಗಳಿಂದ ಬೆಳೆದು ಬಂದಿರುವ ಈ ಜಲ ವಿವಾದಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಅವರು ತಮ್ಮದೇ ರೀತಿಯಲ್ಲಿ ಪರಿಹಾರ ಸೂಚಿಸಿದ್ದಾರೆ.
ಉಪೇಂದ್ರ ಅವರು ಖಾಸಗಿ ಸುದ್ದಿ ವಾಹಿನಿ ಜೊತೆ ಮಾತನಾಡುತ್ತಾ, 'ಇಡೀ ಕರ್ನಾಟಕವೇ ಅವರ (ರೈತರು) ಹಿಂದೆ ಇದೆ. ದೊಡ್ಡವರು ಈ ಸಮಸ್ಯೆ ಬಗೆ ಹರಿಸಲು ಯತ್ನಿಸುತ್ತಿದ್ದಾರೆ. ನಾವು ಶಾಂತಿಯುತವಾಗಿ ಹೋರಾಟ ನಡೆಸಲು ಬಂದಿದ್ದೇವೆ ಎಂದರು. [ರೈತರಿಗಾಗಿ, ನೀರಿಗಾಗಿ ಕನ್ನಡ ಸಿನಿತಾರೆಯರ ಮೆರವಣಿಗೆ]
ಕಾವೇರಿ ನದಿ ವಿವಾದ ಬಗೆಹರಿಸಲು ಪರಿಹಾರ ಸೂಚಿಸಿದ ಉಪೇಂದ್ರ ಅವರು ಎಚ್ 2ಒ ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಉತ್ತರ ನೀಡಿದ್ದನ್ನು ಸ್ಮರಿಸಿದರು. ಪ್ರಕೃತಿ ಕೈ ಹಿಡಿದರೆ ಎಲ್ಲಾ ಸಮಸ್ಯೆ ದೂರಾಗುತ್ತದೆ. ನಾವು ಇದನ್ನು ನ್ಯಾಯಾಲಯದ ಹೊರಗೆ ಬಗೆಹರಿಸಿಕೊಂಡರೂ ಸರಿ, ಹಂಚಿ ತಿನ್ನುವುದರಲ್ಲಿ ಇರುವ ಸುಖ ಏನು ಎಂಬುದು ಎಲ್ಲರಿಗೂ ಗೊತ್ತಿದೆ. [ಏನಿದು ಕಳಸಾ-ಬಂಡೂರಿ ಯೋಜನೆ?]

ನದಿ ಜೋಡಣೆ ಬಗ್ಗೆ ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ನದಿಗಳ ಜೋಡಣೆಯಾದರೆ ಸಮಸ್ಯೆ ಇರಲ್ಲ. ನೀರು ಹಂಚಿಕೆ ಸಮಸ್ಯೆಗೆ ಇದೇ ಸೂಕ್ತ ಪರಿಹಾರ. ನಾವು ನಗರೀಕರಣಕ್ಕೆ ಮಾರು ಹೋಗುತ್ತಿದ್ದೇವೆ. ನಮ್ಮ ಪ್ರಕೃತಿ, ನಮ್ಮ ರೈತರು ನಮ್ಮ ಮೂಲ. 'ಇಂಟರ್ ಸ್ಟೆಲ್ಲರ್' ಚಿತ್ರದಲ್ಲಿ ಕೃಷಿ ನಾಶ, ಮನುಷ್ಯರ ಬದುಕು ನಾಶದ ಬಗ್ಗೆ ಚೆನ್ನಾಗಿ ತಿಳಿಸಿದ್ದಾರೆ ಎಂದು ಹೇಳಿದರು. [ಕಳಸಾ ಬಂಡೂರಿಗಾಗಿ ಸೆ.26ರಂದು ಕರ್ನಾಟಕ ಬಂದ್]
ಶಿವರಾಜ್ ಕುಮಾರ್ ನೇತೃತ್ವ: 'ನೆಲ, ಜಲ, ಭಾಷೆಯ ಹೋರಾಟಕ್ಕೆ ಸದಾ ಸಿದ್ಧವಾಗಿದ್ದೇನೆ. ಯಾವಾಗ ಬೇಕಾದರೂ ಹೋರಾಟಕ್ಕೆ ಕರೆದರೂ ಹೋಗಲು ಸಿದ್ಧನಿದ್ದೇನೆ' ಎಂದು ಬೆಂಗಳೂರಿನಲ್ಲಿ ನಟ ಶಿವರಾಜ್ ಕುಮಾರ್ ಹೇಳಿದ್ದಾರೆ [ನಿಮಗಿದು ತಿಳಿದಿರಲಿ: ಕಳಸಾ ಬಂಡೂರಿ ಕುಡಿಯುವ ನೀರು ಹೋರಾಟ]
ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ರಾಕ್ಲೈನ್ ವೆಂಕಟೇಶ್, ವಿಜಯಲಕ್ಷ್ಮೀ ಸಿಂಗ್, ದೊಡ್ಡಣ್ಣ, ಸುಂದರ್ ರಾಜ್, ಬಿ.ಸರೋಜಾ ದೇವಿ, ಭಾರತಿ ವಿಷ್ಣುವರ್ಧನ್, ಪೂಜಾಗಾಂಧಿ, ಅನುಪ್ರಭಾಕರ್, ವಿಜಯ್ ರಾಘವೇಂದ್ರ, ಸಾ.ರಾ.ಗೋವಿಂದು, ನೀನಾಸಂ ಸತೀಶ್ ಮುಂತಾದವರು ಹುಬ್ಬಳ್ಳಿಗೆ ಬಂದಿದ್ದಾರೆ.[ರೈತರಿಗೆ ಚಿತ್ರರಂಗದ ಬೆಂಬಲ, ಭಾಷಣಕ್ಕೆ ಟ್ವೀಟ್ ಪ್ರತಿಕ್ರಿಯೆ]
ಹುಬ್ಬಳ್ಳಿ-ಧಾರವಾಡ, ಗದಗ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಕುಡಿಯುವ ನೀರಿನ ಅಭಾವ ನೀಗಿಸಲು ಕಳಸಾ-ಬಂಡೂರಿ ನಾಲೆಗಳನ್ನು ಮಲಪ್ರಭೆಗೆ ಜೋಡಿಸುವ ಯೋಜನೆ ಇದಾಗಿದೆ. ಗೋವಾ ಸರ್ಕಾರ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದು, ವಿವಾದ ನ್ಯಾಯಾಧೀಕರಣದ ಮುಂದಿದೆ. ಯೋಜನೆ ಜಾರಿಯಾಗಲೇಬೇಕು ಎಂದು ಒತ್ತಾಯಿಸಿ ನಿರಂತರವಾಗಿ ಪ್ರತಿಭಟನೆ ನಡೆಯುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications