Get Updates
Get notified of breaking news, exclusive insights, and must-see stories!

ಹುಬ್ಬಳ್ಳಿಯಲ್ಲಿ ಯುವಜನೋತ್ಸವ 2023: ಹೊರರಾಜ್ಯಗಳ ವಿದ್ಯಾರ್ಥಿಗಳಿಗೆ ಭರ್ಜರಿ ಸ್ವಾಗತ

ಧಾರವಾಡ, ಜನವರಿ, 09: ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಜನವರಿ 12 ರಿಂದ 16ರವರೆಗೂ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಇದರ ಅಂಗವಾಗಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಜರುಗುವ ಕಾರ್ಯಕ್ರಮಗಳಿಗೆ ಶಾಸಕ ಅಮೃತ ದೇಸಾಯಿ ಅವರನ್ನು ಗೌರವಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಈ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಈಗಾಗಲೇ ವಿವಿಧ ರಾಜ್ಯಗಳಿಂದ ಯುವಕರು ಆಗಮಿಸಿದ್ದು, ಅವರು ಕೃಷಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದಾರೆ. ಈಗಾಗಲೇ ಶಾಸಕ ಅಮೃತ ದೇಸಾಯಿ ಅವರು, ಯುವ ಜನೋತ್ಸವಕ್ಕೆ ಬಂದಿರುವ ಯುವಕರನ್ನು ಭೇಟಿ ಮಾಡಿ ಸ್ವಾಗತಿಸಿದರು.
ಕೃಷಿ ವಿಶ್ವವಿದ್ಯಾಲಯದ ಹಾಸ್ಟೆಲ್‌ಗಳಲ್ಲಿ ಉಳಿದುಕೊಂಡಿರುವವರಿಗೆ ವಸತಿ, ಊಟ ಹಾಗೂ ಕಾರ್ಯಕ್ರಮದ ವ್ಯವಸ್ಥೆಯ ಕುರಿತು ಅಧಿಕಾರಿಗಳ ಜೊತೆ ಶಾಸಕರು ಚರ್ಚೆ ಮಾಡಿದರು.

5 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮ

ಐದು ದಿನಗಳ ಕಾಲ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸಾವಿರಾರು ಯುವಕರು, ಪ್ರೇಕ್ಷಕರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಯ ಕುರಿತು ಮಾಹಿತಿ ಪಡೆದು ಎಲ್ಲಾ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

National Youth festival 2023 in Hubballi: Students Arrival from many states

ಅತಿಥಿಗಳನ್ನ ಸ್ವಾಗತಿಸಲು ವಿಶೇಷ ಸಿದ್ಧತೆ

ಕರ್ನಾಟಕದ ಭವ್ಯ ಪರಂಪರೆಯನ್ನು ಮತ್ತು ಉತ್ತರ ಕರ್ನಾಟಕದ ವಿಶೇಷತೆಗಳನ್ನು ಪರಿಚಯಿಸುವ ದೃಷ್ಟಿಯಿಂದ ಧಾರವಾಡ ಜಿಲ್ಲಾಡಳಿತವು ಅತಿಥಿಗಳನ್ನು ಸ್ವಾಗತಿಸಲು ವಿಶೇಷ ಸಿದ್ಧತೆಗಳನ್ನು ಮಾಡಿಕೊಂಡಿದೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಮಾರ್ಗದರ್ಶನದಲ್ಲಿ ಇದರ ಜವಾಬ್ದಾರಿ ನಿರ್ವಹಿಸುತ್ತಿರುವ ಹುಡಾ ಆಯುಕ್ತ ಡಾ.ಸಂತೋಷಕುಮಾರ್‌ ಬಿರಾದಾರ ನೇತೃತ್ವದ ಹುಡಾ ಮತ್ತು ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿರುವ ಸ್ವಾಗತ ಸಮಿತಿಯು ಕಳೆದ ಒಂದು ವಾರದಿಂದ ಶ್ರಮಿಸುತ್ತಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮೇಶ ಬೊಮ್ಮಕ್ಕನವರ ಹಾಗೂ ಗಿರೀಶ ಪದಕಿ ನಿರಂತರವಾಗಿ ಮಾರ್ಗದರ್ಶನ ಮಾಡುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+