ದಲಿತರ ಮನೆಯಲ್ಲಿ ನಿಜಗುಣಾನಂದ ಶ್ರೀ ಊಟ, ಪೇಜಾವರ ಶ್ರೀ ವಿರುದ್ಧ ಕಿಡಿ
ಧಾರವಾಡ, ಜನವರಿ 13: ಮುಂಡರಗಿ ತೋಂಟದಾರ್ಯ ಶಾಖಾ ಮಠದ ನಿಜಗುಣಾನಂದ ಸ್ವಾಮೀಜಿ ದಲಿತರ ಮನೆಯಲ್ಲಿ ಊಟ ಮಾಡಿದ್ದಾರೆ. ಇದೇ ವೇಳೆ ಅವರು ದಲಿತರ ಬಗೆಗಿನ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಗಳ ನಡೆಯನ್ನು ಟೀಕಿಸಿದ್ದಾರೆ.
ಲಿಂಗಾಯತ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಸ್ವಾಮೀಜಿ ಇಂದು ಧಾರವಾಡದ ಮಾಳಾಪೂರದ ಹರಿಜನಕರೆಯಲ್ಲಿ ಇರುವ ನಾಗರಾಜ್ ಸಣ್ಣಮನಿ ಎನ್ನುವರ ಮನೆಯಲ್ಲಿ ಊಟ ಸೇವಿಸಿದ್ದಾರೆ.
ನಂತರ ಮಾತನಾಡಿದ ಅವರು, "ವೈದಿಕತೆ, ಬ್ರಾಹ್ಮಣತ್ವ ಹಾಗೂ ರಾಜಕೀಯ ಉಳಿಸಿಕೊಳ್ಳಲು ಪೇಜಾವರ ಶ್ರೀಗಳು ದಲಿತರ ಮನೆಗಳಿಗೆ ಹೊಗುತ್ತಾರೆ. ನಾವು ಲಿಂಗಾಯತ ಸ್ವಾಮೀಜಿಗಳು ಫ್ಯಾಷನ್ ಗಾಗಿ ದಲಿತರ ಮನೆಗಳಿಗೆ ಹೋಗುತ್ತಿಲ್ಲ," ಎಂದಿದ್ದಾರೆ.

"ಬಸವಣ್ಣ ವೇಶ್ಯೆಯನ್ನು ಅಪ್ಪಿಕೊಂಡಿದ್ದಾರೆ. ದಲಿತರು ಈ ದೇಶದ ಮೂಲ ನಿವಾಸಿಗಳು. ದಲಿತರು ಎಂದರೆ ದೇವರು. ಹೀಗಾಗಿ ನಾವು ದಲಿತರ ಮನೆಯಲ್ಲಿ ಊಟ ಮಾಡುತ್ತಿದ್ದೇವೆ. ದೇಶದ ಮೂಲ ನಿವಾಸಿಗಳು ಇಂದು ಅಸ್ಪೃಷ್ಯರಾಗಿದ್ದಾರೆ. ಈ ದೇಶದಲ್ಲಿ ಬದುಕಲು ಹಕ್ಕಿರುವುದು ದಲಿತರಿಗೆ," ಎಂದು ಹೇಳಿದ್ದಾರೆ.
ಇನ್ನು ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡಿದ ನಿಜಗುಣಾನಂದ ಶ್ರೀಗಳು, "ಧರ್ಮ ಎನ್ನುವುದು ಒತ್ತಾಯಪೂರ್ವಕ ಅಲ್ಲ. ಅದನ್ನ ಒತ್ತಾಯದಿಂದ ಮಾಡುವುದು ಅಲ್ಲ. ಲಿಂಗಾಯತ ಹೋರಾಟದ ಬಗ್ಗೆ ಇನ್ನು ನಾಲ್ಕೈದು ದಿನದಲ್ಲಿ ಹೇಳುತ್ತೇನೆ," ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ನಿಜಗುಣಾನಂದ ಸ್ವಾಮೀಜಿಗಳು, "ವೇಶ್ಯೆಯರನ್ನು ಮತ್ತು ದಲಿತರನ್ನು ಲಿಂಗಾಯತ ಧರ್ಮಕ್ಕೆ ಸೆರಿಸಿಕೊಳ್ಳುತ್ತೇವೆ," ಎಂದಿದ್ದರು. ಇದೀಗ ಅವರು ದಲಿತರ ಮನೆಗೆ ಹೋಗಿ ಆಹಾರ ಸೇವಿಸಿ ಬಂದಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications