ದಲಿತರ ಮನೆಯಲ್ಲಿ ನಿಜಗುಣಾನಂದ ಶ್ರೀ ಊಟ, ಪೇಜಾವರ ಶ್ರೀ ವಿರುದ್ಧ ಕಿಡಿ
ಧಾರವಾಡ, ಜನವರಿ 13: ಮುಂಡರಗಿ ತೋಂಟದಾರ್ಯ ಶಾಖಾ ಮಠದ ನಿಜಗುಣಾನಂದ ಸ್ವಾಮೀಜಿ ದಲಿತರ ಮನೆಯಲ್ಲಿ ಊಟ ಮಾಡಿದ್ದಾರೆ. ಇದೇ ವೇಳೆ ಅವರು ದಲಿತರ ಬಗೆಗಿನ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಗಳ ನಡೆಯನ್ನು ಟೀಕಿಸಿದ್ದಾರೆ.
ಲಿಂಗಾಯತ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಸ್ವಾಮೀಜಿ ಇಂದು ಧಾರವಾಡದ ಮಾಳಾಪೂರದ ಹರಿಜನಕರೆಯಲ್ಲಿ ಇರುವ ನಾಗರಾಜ್ ಸಣ್ಣಮನಿ ಎನ್ನುವರ ಮನೆಯಲ್ಲಿ ಊಟ ಸೇವಿಸಿದ್ದಾರೆ.
ನಂತರ ಮಾತನಾಡಿದ ಅವರು, "ವೈದಿಕತೆ, ಬ್ರಾಹ್ಮಣತ್ವ ಹಾಗೂ ರಾಜಕೀಯ ಉಳಿಸಿಕೊಳ್ಳಲು ಪೇಜಾವರ ಶ್ರೀಗಳು ದಲಿತರ ಮನೆಗಳಿಗೆ ಹೊಗುತ್ತಾರೆ. ನಾವು ಲಿಂಗಾಯತ ಸ್ವಾಮೀಜಿಗಳು ಫ್ಯಾಷನ್ ಗಾಗಿ ದಲಿತರ ಮನೆಗಳಿಗೆ ಹೋಗುತ್ತಿಲ್ಲ," ಎಂದಿದ್ದಾರೆ.

"ಬಸವಣ್ಣ ವೇಶ್ಯೆಯನ್ನು ಅಪ್ಪಿಕೊಂಡಿದ್ದಾರೆ. ದಲಿತರು ಈ ದೇಶದ ಮೂಲ ನಿವಾಸಿಗಳು. ದಲಿತರು ಎಂದರೆ ದೇವರು. ಹೀಗಾಗಿ ನಾವು ದಲಿತರ ಮನೆಯಲ್ಲಿ ಊಟ ಮಾಡುತ್ತಿದ್ದೇವೆ. ದೇಶದ ಮೂಲ ನಿವಾಸಿಗಳು ಇಂದು ಅಸ್ಪೃಷ್ಯರಾಗಿದ್ದಾರೆ. ಈ ದೇಶದಲ್ಲಿ ಬದುಕಲು ಹಕ್ಕಿರುವುದು ದಲಿತರಿಗೆ," ಎಂದು ಹೇಳಿದ್ದಾರೆ.
ಇನ್ನು ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡಿದ ನಿಜಗುಣಾನಂದ ಶ್ರೀಗಳು, "ಧರ್ಮ ಎನ್ನುವುದು ಒತ್ತಾಯಪೂರ್ವಕ ಅಲ್ಲ. ಅದನ್ನ ಒತ್ತಾಯದಿಂದ ಮಾಡುವುದು ಅಲ್ಲ. ಲಿಂಗಾಯತ ಹೋರಾಟದ ಬಗ್ಗೆ ಇನ್ನು ನಾಲ್ಕೈದು ದಿನದಲ್ಲಿ ಹೇಳುತ್ತೇನೆ," ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ನಿಜಗುಣಾನಂದ ಸ್ವಾಮೀಜಿಗಳು, "ವೇಶ್ಯೆಯರನ್ನು ಮತ್ತು ದಲಿತರನ್ನು ಲಿಂಗಾಯತ ಧರ್ಮಕ್ಕೆ ಸೆರಿಸಿಕೊಳ್ಳುತ್ತೇವೆ," ಎಂದಿದ್ದರು. ಇದೀಗ ಅವರು ದಲಿತರ ಮನೆಗೆ ಹೋಗಿ ಆಹಾರ ಸೇವಿಸಿ ಬಂದಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications