ಸಂತೋಷ್ ಲಾಡ್ ಸಭೆಗೆ ಬಂದ APMC ಅಧಿಕಾರಿಗಳಿಗೆ ಪಜೀತಿ, ಅರ್ಧಕ್ಕೆ ನಿಂತ ಲಿಫ್ಟ್!
ಧಾರವಾಡ, ಜೂನ್ 25: ರಾಜ್ಯ ಸರ್ಕಾರ ಅನುದಾನ ದುರ್ಬಳಕೆ ಆಗಬಾರದು ಸದ್ಳಳಕೆ ಆಗಬೇಕು. ಹೈಟೆಕ್ ನರ್ಸರಿ ಎಂದರೆ ಅದು ಸಿಂಗಾಪೂರ್ನಾ? ಎಂದು ಪ್ರಶ್ನಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಅರಣ್ಯ ಇಲಾಖೆಯ ಅಧಿಕಾರಿಗೆ ಖಡಕ್ ವಾರ್ನಿಂಗ್ ಕೊಟ್ಟರು.
ಮಂಗಳವಾರ ಧಾರವಾಡದಲ್ಲಿ ನಡೆದ ನಾಲ್ಕನೇಯ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಉಸ್ತುವಾರಿ ಸಚಿವರು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಪುಲ್ ಕ್ಲಾಸ್ ತೆಗೆದುಕ್ಕೊಂಡ ಘಟನೆ ನಡೆಯಿತು. 94 ಲಕ್ಷ ಅನುದಾನದಲ್ಲಿ ಹೈಟೆಕ್ ನರ್ಸರಿ ನಿರ್ಮಾಣ ಮಾಡಲು ಸರ್ಕಾರದಿಂದ ಅನುದಾನ ಬಿಡುಗಡೆಯಾಗಿತ್ತು.

ಅನುದಾನವನ್ನು ಬಳಕೆ ಮಾಡದೆ ಇರುವುದಕ್ಕೆ ಸಚಿವ ಲಾಡ್ ಗರಂ ಆದರು. ಅರಣ್ಯ ಇಲಾಖೆಯ ಅನುದಾನವನ್ನು ಸರಿಯಾಗಿ ಬಳಕೆ ಮಾಡಿಕ್ಕೊಳ್ಳದಿರುವುದು ಗೊತ್ತಾಗಿದೆ. ಅಲ್ಲದೇ ಹೈಟೆಕ್ ನರ್ಸರಿ ಹೈಟೆಕ್ ನರ್ಸರಿ ಎಂದು ಹೇಳುತ್ತಿದ್ದ ಜಿಲ್ಲಾ ಅರಣ್ಯ ಅಧಿಕಾರ ವಿವೇಕ್ ಕವರಿ ಅವರಿಗೆ ಸಂತೋಷ್ ಲಾಡ್ ಖಡಕ್ ವಾರ್ನಿಂಗ್ ಕೊಟ್ಟರು. ಹೈಟೆಕ್ ನರ್ಸರಿ ಎಂದರೆ ಸಿಂಗಾಪೂರನಾ? ಎಂದು ಪ್ರಶ್ನಿಸಿದ ಸಚಿವರಿಗೆ ಅಧಿಕಾರಿಗಳು ಉತ್ತರಿಸುವಾಗ ತಡವರಿಸಿದರು.
ನರ್ಸರಿ ನಿರ್ಮಾಣದ ಕಾಮಗಾರಿ ಪ್ರಗತಿ ಬಗ್ಗೆ ಪ್ರಶ್ನಿಸಿದರೆ ಅಧಿಕಾರಿಗಳಿಂದ ಯಾವುದಕ್ಕೂ ಉತ್ತರ ಬರಲಿಲ್ಲ ಆಗ ಸಂತೋಷ್ ಲಾಡ್ ಮತ್ತಷ್ಟು ಗರಂ ಆದರು. ಇದೇ ವೇಳೆ ಹಲವು ವಿಷಯಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಸೂಚನೆ ಕೊಟ್ಟರು.

ಲಿಫ್ಟ್ನಲ್ಲಿ ಸಿಲುಕಿಕೊಂಡ ಅಧಿಕಾರಿಗಳು
ಧಾರವಾಡ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಮಾಸಿಕ ಕೆಡಿಪಿ ಸಭೆಗೆ ಹಾಜರಾಗಲು ಬಂದಿದ್ದ ಎಪಿಎಂಸಿ ಅಧಿಕಾರಿಗಳು ಲಿಫ್ಟ್ನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ.
ಜಿಲ್ಲಾ ಪಂಚಾಯಿತಿ ಎರಡನೇ ಮಹಡಿಯಲ್ಲಿ ಕೆಡಿಪಿ ಸಭೆ ನಡೆದಿತ್ತು. ಈ ಸಭೆಗೆ ಲಿಫ್ಟ್ ಮೂಲಕ ಬರುತ್ತಿದ್ದ ಎಪಿಎಂಸಿಯ ಇಬ್ಬರು ಮಹಿಳಾ ಅಧಿಕಾರಿಗಳು ಹಾಗೂ ಮೂವರು ಪುರುಷರು ಲಿಫ್ಟ್ನಲ್ಲೇ ಲಾಕ್ ಆಗಿ ಪರದಾಡಿದ್ದಾರೆ. 15 ನಿಮಿಷಗಳ ಕಾಲ ಲಿಫ್ಟ್ನಲ್ಲೇ ಅಧಿಕಾರಿಗಳು ಪರದಾಡಿದ್ದಾರೆ.
ಆನಂತರ ಸ್ಥಳಕ್ಕೆ ಲಿಫ್ಟ್ ಮೆಕ್ಯಾನಿಕ್ನ್ನು ಕರೆಯಿಸಿ ಲಿಫ್ಟ್ ಕೆಳಗೆ ಇಳಿಸಲಾಗಿದೆ. ಆ ಮೂಲಕ ಚೇರ್ ಇಟ್ಟು ಮೂವರನ್ನು ಕೆಳಗಡೆ ಇಳಿಸಲಾಗಿದೆ. ಅಗತ್ಯಕ್ಕಿಂತ ಹೆಚ್ಚಿನ ಭಾರ ಆಗಿದ್ದರಿಂದ ಲಿಫ್ಟ್ ಲಾಕ್ ಆಗಿತ್ತು. 15 ನಿಮಿಷಗಳ ನಂತರ ಅಧಿಕಾರಿಗಳು ಸಭೆಗೆ ಹಾಜರಾಗಬೇಕಾಯಿತು. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications