ಸಂತೋಷ್ ಲಾಡ್ ಸಭೆಗೆ ಬಂದ APMC ಅಧಿಕಾರಿಗಳಿಗೆ ಪಜೀತಿ, ಅರ್ಧಕ್ಕೆ ನಿಂತ ಲಿಫ್ಟ್!
ಧಾರವಾಡ, ಜೂನ್ 25: ರಾಜ್ಯ ಸರ್ಕಾರ ಅನುದಾನ ದುರ್ಬಳಕೆ ಆಗಬಾರದು ಸದ್ಳಳಕೆ ಆಗಬೇಕು. ಹೈಟೆಕ್ ನರ್ಸರಿ ಎಂದರೆ ಅದು ಸಿಂಗಾಪೂರ್ನಾ? ಎಂದು ಪ್ರಶ್ನಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಅರಣ್ಯ ಇಲಾಖೆಯ ಅಧಿಕಾರಿಗೆ ಖಡಕ್ ವಾರ್ನಿಂಗ್ ಕೊಟ್ಟರು.
ಮಂಗಳವಾರ ಧಾರವಾಡದಲ್ಲಿ ನಡೆದ ನಾಲ್ಕನೇಯ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಉಸ್ತುವಾರಿ ಸಚಿವರು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಪುಲ್ ಕ್ಲಾಸ್ ತೆಗೆದುಕ್ಕೊಂಡ ಘಟನೆ ನಡೆಯಿತು. 94 ಲಕ್ಷ ಅನುದಾನದಲ್ಲಿ ಹೈಟೆಕ್ ನರ್ಸರಿ ನಿರ್ಮಾಣ ಮಾಡಲು ಸರ್ಕಾರದಿಂದ ಅನುದಾನ ಬಿಡುಗಡೆಯಾಗಿತ್ತು.

ಅನುದಾನವನ್ನು ಬಳಕೆ ಮಾಡದೆ ಇರುವುದಕ್ಕೆ ಸಚಿವ ಲಾಡ್ ಗರಂ ಆದರು. ಅರಣ್ಯ ಇಲಾಖೆಯ ಅನುದಾನವನ್ನು ಸರಿಯಾಗಿ ಬಳಕೆ ಮಾಡಿಕ್ಕೊಳ್ಳದಿರುವುದು ಗೊತ್ತಾಗಿದೆ. ಅಲ್ಲದೇ ಹೈಟೆಕ್ ನರ್ಸರಿ ಹೈಟೆಕ್ ನರ್ಸರಿ ಎಂದು ಹೇಳುತ್ತಿದ್ದ ಜಿಲ್ಲಾ ಅರಣ್ಯ ಅಧಿಕಾರ ವಿವೇಕ್ ಕವರಿ ಅವರಿಗೆ ಸಂತೋಷ್ ಲಾಡ್ ಖಡಕ್ ವಾರ್ನಿಂಗ್ ಕೊಟ್ಟರು. ಹೈಟೆಕ್ ನರ್ಸರಿ ಎಂದರೆ ಸಿಂಗಾಪೂರನಾ? ಎಂದು ಪ್ರಶ್ನಿಸಿದ ಸಚಿವರಿಗೆ ಅಧಿಕಾರಿಗಳು ಉತ್ತರಿಸುವಾಗ ತಡವರಿಸಿದರು.
ನರ್ಸರಿ ನಿರ್ಮಾಣದ ಕಾಮಗಾರಿ ಪ್ರಗತಿ ಬಗ್ಗೆ ಪ್ರಶ್ನಿಸಿದರೆ ಅಧಿಕಾರಿಗಳಿಂದ ಯಾವುದಕ್ಕೂ ಉತ್ತರ ಬರಲಿಲ್ಲ ಆಗ ಸಂತೋಷ್ ಲಾಡ್ ಮತ್ತಷ್ಟು ಗರಂ ಆದರು. ಇದೇ ವೇಳೆ ಹಲವು ವಿಷಯಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಸೂಚನೆ ಕೊಟ್ಟರು.

ಲಿಫ್ಟ್ನಲ್ಲಿ ಸಿಲುಕಿಕೊಂಡ ಅಧಿಕಾರಿಗಳು
ಧಾರವಾಡ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಮಾಸಿಕ ಕೆಡಿಪಿ ಸಭೆಗೆ ಹಾಜರಾಗಲು ಬಂದಿದ್ದ ಎಪಿಎಂಸಿ ಅಧಿಕಾರಿಗಳು ಲಿಫ್ಟ್ನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ.
ಜಿಲ್ಲಾ ಪಂಚಾಯಿತಿ ಎರಡನೇ ಮಹಡಿಯಲ್ಲಿ ಕೆಡಿಪಿ ಸಭೆ ನಡೆದಿತ್ತು. ಈ ಸಭೆಗೆ ಲಿಫ್ಟ್ ಮೂಲಕ ಬರುತ್ತಿದ್ದ ಎಪಿಎಂಸಿಯ ಇಬ್ಬರು ಮಹಿಳಾ ಅಧಿಕಾರಿಗಳು ಹಾಗೂ ಮೂವರು ಪುರುಷರು ಲಿಫ್ಟ್ನಲ್ಲೇ ಲಾಕ್ ಆಗಿ ಪರದಾಡಿದ್ದಾರೆ. 15 ನಿಮಿಷಗಳ ಕಾಲ ಲಿಫ್ಟ್ನಲ್ಲೇ ಅಧಿಕಾರಿಗಳು ಪರದಾಡಿದ್ದಾರೆ.
ಆನಂತರ ಸ್ಥಳಕ್ಕೆ ಲಿಫ್ಟ್ ಮೆಕ್ಯಾನಿಕ್ನ್ನು ಕರೆಯಿಸಿ ಲಿಫ್ಟ್ ಕೆಳಗೆ ಇಳಿಸಲಾಗಿದೆ. ಆ ಮೂಲಕ ಚೇರ್ ಇಟ್ಟು ಮೂವರನ್ನು ಕೆಳಗಡೆ ಇಳಿಸಲಾಗಿದೆ. ಅಗತ್ಯಕ್ಕಿಂತ ಹೆಚ್ಚಿನ ಭಾರ ಆಗಿದ್ದರಿಂದ ಲಿಫ್ಟ್ ಲಾಕ್ ಆಗಿತ್ತು. 15 ನಿಮಿಷಗಳ ನಂತರ ಅಧಿಕಾರಿಗಳು ಸಭೆಗೆ ಹಾಜರಾಗಬೇಕಾಯಿತು. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications