ಅಣ್ಣಿಗೇರಿಯ ರೈತ ವಿಜ್ಞಾನಿ ಅಬ್ದುಲ್ ಖಾದರ್ ನಡಕಟ್ಟಿನಗೆ ಪದ್ಮಶ್ರೀ ಗೌರವ
ಧಾರವಾಡ, ಜನವರಿ 26: 73ನೇ ಗಣರಾಜ್ಯೋತ್ಸವದ ಮುನ್ನಾ ದಿನ ಕೇಂದ್ರ ಸರ್ಕಾರ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಕವಿ ದಿ.ಸಿದ್ದಲಿಂಗಯ್ಯ ಸೇರಿದಂತೆ ಕರ್ನಾಟಕದ ಐವರು ಸಾಧಕರಿಗೆ ಪ್ರಶಸ್ತಿ ಲಭಿಸಿದೆ.
ಸಾಮಾನ್ಯ ಕುಟುಂಬದಲ್ಲಿ ಹುಟ್ಟಿ, ರೈತನ ಮಗನಾಗಿ ಬೆಳೆದು, ತನ್ನ 19ನೇ ವಯಸ್ಸಿನಲ್ಲೇ ಕೃಷಿ ಉಪಕರಣದಲ್ಲಿ ಸಂಶೋಧನೆ ಮಾಡುವ ಮೂಲಕ ಇಡೀ ನಾಡಿನ ಗಮನ ಸೆಳೆದ ಧಾರವಾಡ ಜಿಲ್ಲೆ ಅಣ್ಣಿಗೇರಿಯ ವಿಶ್ವಶಾಂತಿ ಕೃಷಿ ಸಂಶೋಧಕ ಅಬ್ದುಲ್ ಖಾದರ್ ನಡಕಟ್ಟಿನ ಅವರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿದೆ.
ಅಬ್ದುಲ್ ಖಾದರ್ ನಡಕಟ್ಟಿನ 1953ರಲ್ಲಿ ಅಣ್ಣಿಗೇರಿಯಲ್ಲಿ ಜನಿಸಿದ್ದು, ಎಸ್ಎಸ್ಎಲ್ಸಿವರೆಗೆ ಶಿಕ್ಷಣ ಮುಗಿಸಿದರು. ನಂತರ ತಂತ್ರಜ್ಞಾನದ ಕಡೆ ವಿಶೇಷ ಆಸಕ್ತಿ ಹೊಂದಿದ ಅವರು, 19 ವರ್ಷದವರಿದ್ದಾಗಲೇ ಯಂತ್ರಗಳನ್ನು ಕಂಡು ಹಿಡಿದು ಸೈ ಎನಿಸಿಕೊಂಡಿದ್ದರು.

ಕೃಷಿ ಕುಟುಂಬದಲ್ಲಿ ಹುಟ್ಟಿದ ಅಬ್ದುಲ್ಖಾದರ್ ನಡಕಟ್ಟಿನ ಅವರು ರೈತರಿಗೆ ನೆರವಾಗಬೇಕೆಂಬ ಆಸೆಯನ್ನು ಹೊಂದಿದ್ದರು. ಅಂದಿನ ಪರಿಸ್ಥಿತಿ ಅವರನ್ನು ಸಮಾಜಮುಖಿಯಾಗಿ ಪರಿವರ್ತನೆಗೊಳ್ಳಲು ಬಿಡಲಿಲ್ಲ.
ಹಠ ಬಿಡದ ಅಬ್ದುಲ್ ಖಾದರ್ ನಡಕಟ್ಟಿನ ಅಂದಿನ ಸರಕಾರಕ್ಕೆ ತನ್ನ ಪರಿಸ್ಥಿತಿಯನ್ನು ತಿಳಿಸಿ ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಬೆನ್ನತ್ತಿ ರೈತರಿಗೆ ಕೊಡಮಾಡುವ ಸಬ್ಸಿಡಿಯಿಂದ, ರೈತರಿಗೆ ಯಂತ್ರೋಪಕರಣಗಳನ್ನು ಕೊಟ್ಟು ಅಣ್ಣಿಗೇರಿಯ ಕೀರ್ತಿಯನ್ನು ದೆಹಲಿಯವರೆಗೂ ಪಸರಿಸಿದ್ದಲ್ಲದೇ, ದೇಶ-ವಿದೇಶಗಳಲ್ಲೂ ನಡಕಟ್ಟಿನ ಕೂರಿಗೆ (ಬಿತ್ತುವ ಯಂತ್ರ) ತಲೆ ಎತ್ತುವ ಹಾಗೆ ಆಗಿದೆ.
ಒಟ್ಟು 24 ಕೃಷಿ ಉಪಕರಣಗಳು!
ನಡಕಟ್ಟಿನ ಕೂರಿಗೆ, ಹುಣಿಸೆ ಹಣ್ಣಿನಿಂದ ಬೀಜ ಬೇರ್ಪಡಿಸುವ ಯಂತ್ರ, ಡೀಸೆಲ್ ಉಳಿತಾಯ ಮಾಡುವ ನಡಕಟ್ಟಿನ ಗಾಲಿ ಕುಂಠಿ, ಕುಡಾ ಹದಗೊಳಿಸುವ ಯಂತ್ರ, ಕಬ್ಬು ಬಿತ್ತುವ ಯಂತ್ರ, ಎಳನೀರು ಕಡಿದು ಚೆಲ್ಲಿದ ಗೊರಟುಗಳನ್ನು ಪುಡಿ ಮಾಡುವ ಯಂತ್ರ, ಎಡೆ ಹೊಡಿಯುವ, ಔಷಧಿ ಸಿಂಪಡನೆ ಮಾಡುವ ಯಂತ್ರ .. ಹೀಗೆ ಹಲವು ಯಂತ್ರಗಳನ್ನು ಸಂಶೋಧಿಸಿ ತಯಾರಿಸಿ ರೈತರಿಗೆ ನೆರವಾಗಿದ್ದಾರೆ.

"ನನಗೆ ರೈತರ ಆಶೀರ್ವಾದ, ಭಗವಂತನ ಕೃಪೆ ಯಾವುದೂ ಕೂಡಾ ಸುಳ್ಳು ಆಗಲಿಲ್ಲ. ಅಣ್ಣಿಗೇರಿಯ ಹೆಸರು ದಿಲ್ಲಿವರೆಗೂ ಕೊಂಡೊಯ್ದು ದೇಶವೇ ತಿರುಗಿ ನೋಡುವ ಹಾಗೆ ಮಾಡಿದ ನನ್ನ ರೈತ ಸಂಕುಲಕ್ಕೆ ನನ್ನ ಸಾಷ್ಟಾಂಗ ನಮನಗಳು," ಎಂದು ಅಬ್ದುಲ್ ಖಾದರ್ ನಡಕಟ್ಟಿನ ತಿಳಿಸಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಭಿನಂದನೆ
ದೇಶದ ಅತ್ಯುನ್ನತ ನಾಗರಿಕ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ಕೂರಿಗೆ ತಜ್ಞ ಅಬ್ದುಲ್ ಖಾದರ್ ನಡಕಟ್ಟಿನ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿನಂದಿಸಿದ್ದಾರೆ. ನನ್ನದೇ ಮತಕ್ಷೇತ್ರದ ಕೃಷಿ ಸಂಶೋಧಕನಿಗೆ ಪ್ರಶಸ್ತಿ ಲಭಿಸಿರುವುದು ದೇಶಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.
ಪ್ರಶಸ್ತಿ ಪಡೆದ ಕರ್ನಾಟಕದ ಇತರ ಸಾಧಕರು
ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ಸುಬ್ಬಣ್ಣ ಅಯ್ಯಪ್ಪನ್ (ವಿಜ್ಞಾನ ಮತ್ತು ಇಂಜಿನಿಯರಿಂಗ್), ಎಚ್. ಆರ್. ಕೇಶವಮೂರ್ತಿ (ಕಲೆ), ಅಬ್ದುಲ್ ಖಾದರ್ ನಡಕಟ್ಟಿನ, ಅಮೈ ಮಹಾಲಿಂಗ ನಾಯ್ಕ (ಕೃಷಿ), ಡಾ. ಸಿದ್ದಲಿಂಗಯ್ಯ (ಸಾಹಿತ್ಯ ಮತ್ತು ಶಿಕ್ಷಣ) ಕ್ಷೇತ್ರದಲ್ಲಿ ಪ್ರಶಸ್ತಿ ಪಡೆದಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications