ಸರ್ಕಾರಿ ಶಾಲೆ, ಕಾಲೇಜುಗಳಿಗೆ ಬಣ್ಣದರ್ಪಣೆ: ಜೋಶಿ, ಜಗ್ಗೇಶ್ ಚಾಲನೆ
ಧಾರವಾಡ, ಅಕ್ಟೋಬರ್, 28: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿರುವ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ ಬಣ್ಣ ಹಚ್ಚುವ 'ಬಣ್ಣದರ್ಪಣೆ'ಕಾರ್ಯಕ್ರಮಕ್ಕೆ ಅಕ್ಟೋಬರ್ 29ರ ಶನಿವಾರದಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಸಂಸದ, ನಟ ಜಗ್ಗೇಶ್ ಚಾಲನೆ ನೀಡಲಿದ್ದಾರೆ.
ಈ ಕುರಿತು ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ. ಕಳೆಗುಂದಿರುವ ಸರ್ಕಾರಿ ಶಾಲಾ - ಕಾಲೇಜುಗಳ ಗೋಡೆಗಳಿಗೆ ಹೊಸ ಕಳೆ ತರುವ ಉದ್ದೇಶದಿಂದ ಈ 'ಬಣ್ಣದರ್ಪಣೆ' ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಕುಂದಗೋಳ ತಾಲೂಕಿನ ಹರಭಟ್ಟ ಹೈಸ್ಕೂಲ್ನಲ್ಲಿ ಶನಿವಾರ ಸಂಜೆ 6 ಗಂಟೆಗೆ ಅಭಿಯಾನಕ್ಕೆ ಪ್ರಹ್ಲಾದ್ ಜೋಶಿ ಚಾಲನೆ ನೀಡಲಿದ್ದು, ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಉದ್ಘಾಟನೆ ಮಾಡಲಿದ್ದಾರೆ.
ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವ ಪ್ರಹ್ಲಾದ್ ಜೋಶಿಯವರ ಪರಿಕಲ್ಪನೆಯಲ್ಲಿ ಸರ್ಕಾರಿ ಶಾಲೆ ಕಾಲೇಜುಗಳಿಗೆ ಬಣ್ಣ ಹಚ್ಚು 'ಬಣ್ಣದರ್ಪಣೆ' ಕಾರ್ಯಕ್ರಮ ಇದಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿರುವ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳು ವಿವಿಧ ಬಣ್ಣಗಳಿಂದ ಕಂಗೊಳಿಸಲಿವೆ. ಅದಕ್ಕಾಗಿ ಅಭಿಯಾನಕ್ಕೆ ಎಲ್ಲರೂ ಕೈ ಜೋಡಿಸುವಂತೆ ಅವರು ಟ್ವಿಟ್ಟರ್ನಲ್ಲಿ ಮನವಿ ಮಾಡಿದ್ದಾರೆ.
"ಬಣ್ಣ ನಮ್ಮದು - ಸಮಯ ಮತ್ತು ಸೇವೆ ನಿಮ್ಮದು"
— Pralhad Joshi (@JoshiPralhad) October 27, 2022
"ಬಣ್ಣದರ್ಪಣೆ" ಎಂಬ ವಿಶೇಷ ಅಭಿಯಾನದಡಿ ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸರಕಾರಿ ಶಾಲಾ ಕಾಲೇಜುಗಳಿಗೆ ಜೀವ ತುಂಬುವ ನಿಟ್ಟಿನಲ್ಲಿ, ಬಣ್ಣ ಹಚ್ಚುವ ಸೇವಾ ಕಾರ್ಯ ನಡೆಯಲಿದೆ.#ಬಣ್ಣದರ್ಪಣೆ #ಬಣ್ಣನಮ್ಮದು_ಸೇವೆನಿಮ್ಮದು pic.twitter.com/cWYbDbC5ut
"ಬಣ್ಣ ನಮ್ಮದು - ಸಮಯ ಮತ್ತು ಸೇವೆ ನಿಮ್ಮದು"
— Pralhad Joshi (@JoshiPralhad) October 27, 2022
"ಬಣ್ಣದರ್ಪಣೆ" ಎಂಬ ವಿಶೇಷ ಅಭಿಯಾನದಡಿ ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸರಕಾರಿ ಶಾಲಾ ಕಾಲೇಜುಗಳಿಗೆ ಜೀವ ತುಂಬುವ ನಿಟ್ಟಿನಲ್ಲಿ, ಬಣ್ಣ ಹಚ್ಚುವ ಸೇವಾ ಕಾರ್ಯ ನಡೆಯಲಿದೆ.#ಬಣ್ಣದರ್ಪಣೆ #ಬಣ್ಣನಮ್ಮದು_ಸೇವೆನಿಮ್ಮದು pic.twitter.com/cWYbDbC5ut

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಅಭಿಯಾನ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಕ್ಷಮತಾ ಸೇವಾ ಸಂಸ್ಥೆಯ ಮೂಲಕ ಧಾರವಾಡ ಲೋಕಸಭಾ ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ ಬಣ್ಣ ಹಚ್ಚುವ ಉದ್ದೇಶವನ್ನು ಬಣ್ಣದರ್ಪಣೆ ಅಭಿಯಾನ ಹೊಂದಿದೆ. 'ಬಣ್ಣ ನಮ್ಮದು ಸೇವೆ ನಿಮ್ಮದು' ಧ್ಯೇಯ ವಾಕ್ಯದಡಿ ಈ ಕಾರ್ಯಕ್ರಮ ನಡೆಯುತ್ತಿದೆ. ಸರ್ಕಾರಿ ಶಾಲೆ, ಕಾಲೇಜುಗಳ ಒಳಿತಿಗಾಗೆ ನಡೆಯುತ್ತಿರುವ ಸಾಮಾಜಿಕ ಸೇವೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

'ಬಣ್ಣ ನಮ್ಮದು ಸೇವೆ ನಿಮ್ಮದು' : ಜೋಶಿ ಕರೆ
ಸಚಿವರು ಕ್ಷಮತಾ ಸೇವಾ ಸಂಸ್ಥೆ ಅಡಿಯಲ್ಲಿ ಸರ್ಕಾರಿ ಶಾಲಾ ಕಾಲೇಜುಗಳಿಗೆ ಬಣ್ಣ ಹಚ್ಚಲು ಉಚಿತವಾಗಿ ಬಣ್ಣ ವಿತರಿಸಲಾಗುತ್ತಿದೆ. ಸರ್ಕಾರಿ ವಿದ್ಯಾಮಂದಿರಗಳು ಕಳೆಗುಂದಬಾರದು ಎಂಬ ದೃಷ್ಠಿಯಿಂದ ಸಚಿವರು ಈ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಸಂಘ ಸಂಸ್ಥೆಗಳು, ಸೇವಾ ಸಂಘಟನೆಗಳು, ಸ್ಥಳೀಯ ಜನಪ್ರತಿನಿಧಿಗಳು ಯಾರೇ ಮುಂದೆ ಬಂದರು ಅವು ಉಚಿತವಾಗಿ ಬಣ್ಣ ಪಡೆದು, ಸರ್ಕಾರಿ ಶಾಲಾ ಕಾಲೇಜುಗಳಿಗೆ ಹೊಸ ಬಣ್ಣ ಹಚ್ಚಬಹುದು. ಹೀಗೆಂದು ಜೋಶಿ ಅವರು 'ಬಣ್ಣ ನಮ್ಮದು ಸೇವೆ ನಿಮ್ಮದು' ಎಂಬ ಹ್ಯಾಶ್ ಟ್ಯಾಗ್ ಹಾಕಿ ಟ್ವಿಟ್ಟರ್ನಲ್ಲಿ ಕರೆ ನೀಡಿದ್ದಾರೆ.

1,130 ಸರ್ಕಾರಿ ಶಾಲಾ ಕಾಲೇಜುಗಳಿಗೆ ಬಣ್ಣದ ಗುರಿ
ಸುಮಾರು ಒಂದು ವರ್ಷದ ವರೆಗೆ ಸರ್ಕಾರಿ ಶಾಲಾ ಕಾಲೇಜುಗಳಿಗೆ ಬಣ್ಣ ಹಚ್ಚುವ, ಬಣ್ಣದರ್ಪಣೆ ಅಭಿಯಾನ ಮುಂದುವರಿಯಲಿದೆ. ಪ್ರತಿ ತಿಂಗಳು 100 ಶಾಲೆಗಳಿಗೆ ಬಣ್ಣ ಹಚ್ಚುವ ಗುರಿ ಹೊಂದಲಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1,130 ಸರ್ಕಾರಿ ಶಾಲಾ ಕಾಲೇಜುಗಳನ್ನು ಅಭಿಯಾನಕ್ಕೆ ಒಳಪಡಿಸಲು ಗುರುತಿಸಲಾಗಿದೆ. ವರ್ಷದೊಳಗೆ ಎಲ್ಲಾ ಶಾಲಾ-ಕಾಲೇಜುಗಳು ಹೊಸ ಬಣ್ಣದೊಂದಿಗೆ ಕಂಗೊಳಿಸುವಂತೆ ಮಾಡುವ ಸಂಕಲ್ಪ ಹೊಂದಿದ್ದೇವೆ ಎಂದು ಜೋಶಿ ತಿಳಿಸಿದ್ದಾರೆ.

ಯಾರೆಲ್ಲ ಈ ಅಭಿಯಾನದಲ್ಲಿ ಭಾಗವಹಿಸಬಹುದು?
ಶಿಕ್ಷಕರು, ಎಸ್.ಡಿ.ಎಮ್.ಸಿ. ಸದಸ್ಯರು, ಶಾಲೆಯ ಹಳೆಯ ವಿಧ್ಯಾರ್ಥಿಗಳು, ಸ್ವ ಸಹಾಯ ಸಂಘಗಳು, ಸೇವಾ ಸಂಸ್ಥೆಗಳು, ಸ್ತ್ರೀ ಶಕ್ತಿ ಸಂಘಗಳು, ಯುವಕ ಮಂಡಳಿ ಮತ್ತು ಸಂಘ ಸಂಸ್ಥೆಗಳು, ದೇವಸ್ಥಾನ ಕಮಿಟಿಗಳು, ಭಜನಾ ಸಂಘಗಳು ಹಾಗೂ ಯಾವುದೇ ಆಸಕ್ತ ತಂಡಗಳು ಈ ಬಣ್ಣದರ್ಪಣೆ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications