ಬೆಂಗಳೂರು ವಿಮಾನ ನಿಲ್ದಾಣಕ್ಕೆ ಚಾಲುಕ್ಯರ, ರಾಷ್ಟ್ರಕೂಟರ ಹೆಸರಿಡಿ: ಪಾಪು
ಹುಬ್ಬಳ್ಳಿ, ಜೂನ್ 12: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣ ಎಂದು ಹೆಸರಿಟ್ಟಿದ್ದು ಅಷ್ಟೇನೂ ಸಮಂಜಸವಲ್ಲವೆಂದು ಹಿರಿಯ ಪತ್ರಕರ್ತ, ನಾಡೋಜ ಡಾ.ಪಾಟೀಲ ಪುಟ್ಟಪ್ಪ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಪಾಪು ಅವರು, ರಾಜ್ಯದಲ್ಲಿ ರಾಜಮನೆತನಗಳ ಆಡಳಿತವಿತ್ತು. ಕದಂಬರು, ಕಲಚೂರ್ಯರು, ಕಲ್ಯಾಣಿ ಚಾಲುಕ್ಯರು ಮತ್ತು ವಿಜಯನಗರದ ಅರಸರು ರಾಜ್ಯವನ್ನಾಳಿದ್ದಾರೆ.
ಆದರೆ, ಕರ್ನಾಟಕ ರಾಜ್ಯ ಅರವತ್ತು ವರ್ಷವಾಯಿತು ಅಸ್ತಿತ್ವಕ್ಕೆ ಬಂದು. ಮೈಸೂರು ಕಡೆಯವರಿಗೆ ಕರ್ನಾಟಕ ವಿಶಾಲ ವ್ಯಾಪ್ತಿಯ ಹೊಂದಿದೆ ಎಂಬುದೇ ಅರಿವಿಲ್ಲ. ಹೀಗಾಗಿ ರಾಜ್ಯವನ್ನಾಳಿದ ಚಾಲುಕ್ಯರ ಅಥವಾ ರಾಷ್ಟ್ರಕೂಟರ ಹೆಸರನ್ನು ಬಹುದೊಡ್ಡ ಸ್ಥಳಗಳಿಗೆ ಇಡದಿರುವುದು ಶೋಚನೀಯ ಎಂದಿದ್ದಾರೆ.

ಕೆಂಪೇಗೌಡ ಮಾಗಡಿ ಮತ್ತು ಮಾಲೂರು ಪ್ರದೇಶಗಳ್ನು ಆಳುತ್ತಿದ್ದ ಒಬ್ಬ ಚಿಕ್ಕ ಪಾಳೇಗಾರ. ಆದರೆ, ಚಾಲುಕ್ಯರು ಮತ್ತು ರಾಷ್ಟ್ರಕೂಟರು ದೇಶದ ಬಹುಪಾಲು ಭಾಗವನ್ನು ಆಳಿದ್ದಾರೆ. ಇನ್ನು ಇವರ ಆಡಳಿತದಲ್ಲಿ ಬಂಗಾಲ, ಅಸ್ಸಾಂಗಳು ಕೂಡ ಇದ್ದವು. ಇವುಗಳಲ್ಲಿ ಕರ್ನಾಟಕವೂ ಒಂದು.
ಆದರೆ, ಮೈಸೂರು ಭಾಗದವರು ರಾಜ್ಯವನ್ನು ತೈಲಪ, ಹೊಯ್ಸಳರ ನಾಡೆಂದುಕೊಂಡಿದ್ದಾರೆ. ಕವಿ ಕುವೆಂಪು ಕೂಡ ನಾಡಗೀತೆಯಲ್ಲಿ ಇವೆರಡೇ ಹೆಸರುಗಳನ್ನು ಬಳಸಿದ್ದಾರೆ.
ರಾಜ್ಯದ ರಾಜಕಾರಣಿಗಳಿಗೆ ಪುಟ್ಟ ಪಾಳೇಗಾರನಾದ ಕೆಂಪೇಗೌಡ ಮಾತ್ರ ಕಾಣುತ್ತಾನೆ. ಆದರೆ, ಕಲ್ಯಾಣ , ಕಲಬುರಗಿ, ಹಂಪಿಯ ಐತಿಹಾಸಿಕ ಹಿನ್ನೆಲೆಗಳು ಯಾಕೆ ಕಾಣುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯವನ್ನಾಳಿದ್ದ ಕದಂಬರ ರಾಜಧಾನಿ ಬನವಾಸಿ, ರಾಷ್ಟ್ರಕೂಟರ ರಾಜಧಾನಿಯಾಗಿದ್ದ ಮುಳಖೇಡಾ ಯಾಕೆ ಕಾಣುತ್ತಿಲ್ಲ. ರಾಜಧಾನಿಗಳಾಗಿದ್ದ ಈ ನಗರಗಳು ಈಗ ಗ್ರಾಮಗಳಾಗಿ ಪರಿವರ್ತನೆಗೊಂಡಿರುವುದಕ್ಕೆ ಈ ತಾರತಮ್ಯವೇ ಎಂದು ಪಾಪು ಪ್ರಶ್ನಿಸಿದರು. (ಒನ್ಇಂಡಿಯಾ ಸುದ್ದಿ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications