ಠೇವಣಿ ಹಣ ಮರಳಿಸದ ಅಂಚೆ ಇಲಾಖೆಗೆ ದಂಡ
ಧಾರವಾಡ ಜನವರಿ 19: ಧಾರವಾಡದ ಯು.ಬಿ.ಹಿಲ್ ನಿವಾಸಿ ಅಶೋಕ ಹುದ್ದಾರ ಎಂಬುವವರು ಧಾರವಾಡದ ಹೆಡ್ಪೋಸ್ಟ್ ಕಚೇರಿಯಲ್ಲಿ 15 ವರ್ಷಗಳ ಅವಧಿಯ ಎಚ್.ಯು.ಎಫ್, ಪಿ.ಪಿ.ಎಫ್ ಅಕೌಂಟ್ ತೆರೆದು ಸದರಿ ಯೋಜನೆಯಡಿ ಹಣವನ್ನು ತೊಡಗಿಸಿದ್ದರು.
ಸದರಿ ಯೋಜನೆಯು 31/03/2015 ರಂದು ಮುಕ್ತಾಯವಾಗಿತ್ತು. ತದನಂತರ ದೂರುದಾರ ಸದರಿ ಯೋಜನೆಯನ್ನು ಮತ್ತೆ 5 ವರ್ಷಗಳ ಅವಧಿಗೆ ಅಂದರೆ 01/04/2015 ರಿಂದ 31/03/2020ರವರೆಗೆ ಮುಂದುವರೆಸಿದ್ದರು.
ಆ ಯೋಜನೆ 31/03/2020 ರಂದು ಮುಕ್ತಾಯವಾಗಿದ್ದರೂ ಅಲ್ಲಿಯವರೆಗಿನ ಅವರ ವಂತಿಗೆ ಹಣ ಮತ್ತು ಅದರ ಮೇಲಿನ ಬಡ್ಡಿ ಲೆಕ್ಕ ಹಾಕಿ ಅಂಚೆ ಇಲಾಖೆಯವರು ತನಗೆ ಹಣವನ್ನು ಹಿಂದಿರುಗಿಸದೇ ಸತಾಯಿಸಿ ತೊಂದರೆ ನೀಡಿ, ಸೇವಾ ನ್ಯೂನ್ಯತೆ ಎಸಗಿದ್ದಾರೆ ಎಂದು ದೂರುದಾರ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಅಂಚೆ ಇಲಾಖೆಯವರು ಸದರಿ ದೂರಿಗೆ ಆಕ್ಷೇಪಣೆ ಎತ್ತಿ ಕೇಂದ್ರ ಸರ್ಕಾರದ ಸುತ್ತೋಲೆಯಂತೆ ಹೆಚ್.ಯು.ಎಫ್, ಪಿ.ಪಿ.ಎಫ್ ಯೋಜನೆಯನ್ನು ಮುಂದುವರೆಸಲು ಅವಕಾಶ ಇರುವುದಿಲ್ಲ. ಕಾರಣ 2015ರ ನಂತರ ಅವಧಿ ಮುಕ್ತಾಯವಾಗಿರುವುದರಿಂದ ಆ ನಂತರದ ಅವಧಿಗೆ ಬಡ್ಡಿ ಕೊಡಲು ಬರುವುದಿಲ್ಲ ಎಂದಿದ್ದರು.
ದೂರುದಾರನಿಗೆ 2015ರವರೆಗಿನ ಹಣ ಮತ್ತು ನಂತರದ ಅವಧಿಯ ಅವರ ವಂತಿಗೆ ಹಣವನ್ನು ಮಾತ್ರ ಅವರಿಗೆ ವಾಪಸ್ಸು ಕೊಡಬಹುದು ಅಂತಾ ಅಂಚೆ ಇಲಾಖೆಯವರು ಆಕ್ಷೇಪಿಸಿದ್ದರು. ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ, ಸದಸ್ಯರಾದ ವಿಶಾಲಾಕ್ಷಿ ಅ. ಬೋಳಶೆಟ್ಟಿ ಹಾಗೂ ಪ್ರಭು. ಸಿ ಹಿರೇಮಠ ಅಂಚೆ ಇಲಾಖೆಯ ಎಲ್ಲ ಆಕ್ಷೇಪಣೆಗಳನ್ನು ತಳ್ಳಿಹಾಕಿ, 2015ರ ನಂತರ ದೂರುದಾರರ ಹಣವನ್ನು ಜನರಲ್ ಪಿಪಿಎಫ್ ಯೋಜನೆಯಡಿ ಅಂಚೆ ಇಲಾಖೆಯವರು ಮುಂದುವರೆಸಿ ಆ ಹಣವನ್ನು ಬೇರೆ ಕಡೆ ವಿನಿಯೋಗಿಸಿ ಲಾಭ ಪಡೆದು ಈಗ ದೂರುದಾರನಿಗೆ ಬಡ್ಡಿಕೊಡಲು ನಿರಾಕರಿಸುತ್ತಿರುವುದು ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.
28/03/2000 ರಿಂದ ಇಲ್ಲಿಯವರೆಗೆ ದೂರುದಾರನ ವಂತಿಗೆ ಮೇಲೆ ಬಡ್ಡಿ ಲೆಕ್ಕ ಹಾಕಿ ಅಂಚೆ ಇಲಾಖೆಯವರು ಅವರಿಗೆ ಒಟ್ಟು 28,34,686 ರೂಪಾಯಿಯನ್ನು ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಆದೇಶಿಸಿದೆ. ಸೇವಾ ನ್ಯೂನ್ಯತೆಯಿಂದ ದೂರುದಾರನಿಗೆ ಆಗಿರುವ ತೊಂದರೆ ಮತ್ತು ಹಿಂಸೆಗಾಗಿ 50,000 ರೂಪಾಯಿಗಳ ಪರಿಹಾರ ಹಾಗೂ 10,000 ರೂಪಾಯಿಗಳನ್ನು ಪ್ರಕರಣದ ಖರ್ಚು ವೆಚ್ಚ ಅಂತಾ ಕೊಡಲು ಅಂಚೆ ಇಲಾಖೆಗೆ ನಿರ್ದೇಶನ ನೀಡಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications