ತಮ್ಮ ಸಂಕಟವನ್ನಷ್ಟೇ ಹೇಳಿಕೊಳ್ಳುವ ಮೋದಿ, ಜನರ ಕಷ್ಟ ಕೇಳುವುದಿಲ್ಲ: ಪ್ರಿಯಾಂಕಾ ಗಾಂಧಿ
ನವಲಗುಂದ, ಏಪ್ರಿಲ್ 30: ಜನರ ಸಮಸ್ಯೆಗಳನ್ನು ಆಲಿಸುವ ಬದಲು ತಮ್ಮ ನೋವನ್ನು ಜನರ ಮುಂದೆ ಹೇಳುವ ಏಕೈಕ ಪ್ರಧಾನಿ ನರೇಂದ್ರ ಮೋದಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಶನಿವಾರ ಹೇಳಿದ್ದಾರೆ. ಪ್ರಿಯಾಂಕಾ ಗಾಂಧಿ ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ್ದಾರೆ.
ಇಂದಿರಾಗಾಂಧಿ, ರಾಜೀವ್ ಗಾಂಧಿ, ಪಿವಿ ನರಸಿಂಹರಾವ್, ಅಟಲ್ ಬಿಹಾರಿ ವಾಜಪೇಯಿ ಮತ್ತು ಮನಮೋಹನ್ ಸಿಂಗ್ರಂತಹ ಅನೇಕ ಪ್ರಧಾನಿಗಳನ್ನು ನೋಡಿದ್ದೇನೆ. ಆದರೆ, ಅವರೆಲ್ಲರೂ ಜನರ ಕಷ್ಟಗಳನ್ನು ಕೇಳುತ್ತಿದ್ದರು. ಮೋದಿ ಅವರು ಜನರ ಕಷ್ಟಗಳನ್ನು ಕೇಳುವ ಬದಲು ಅವರಿಗೆ ತಮ್ಮ ಸಂಕಟವನ್ನು ಜನರಿಗೆ ವಿವರಿಸುತ್ತಾರೆ. ಇಂತಹ ಮೊದಲ ಪ್ರಧಾನಿಯನ್ನು ನಾನು ನೋಡಿದ್ದೇನೆ ಎಂದು ಅವರು ತಿಳಿಸಿದರು. ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಅವರ 45 ನಿಮಿಷಗಳ ಭಾಷಣ ಮಾಡಿದರು.

ಕೇಸರಿ ಪಕ್ಷವು ಕರ್ನಾಟಕದಿಂದ 1.5 ಲಕ್ಷ ಕೋಟಿ ರೂ.ಗಳನ್ನು ಲೂಟಿ ಮಾಡಿದ್ದು, ರಾಜ್ಯದಲ್ಲಿನ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಬ್ರೇಕ್ ಹಾಕಿದೆ ಎಂದು ಆರೋಪಿಸಿದರು. 'ಸರ್ಕಾರವು ಸಮಸ್ಯೆಗಳನ್ನು ಪರಿಹರಿಸುವ ಬದಲು ಸಾರ್ವಜನಿಕ ಹಣವನ್ನು ಮಾತ್ರ ಲೂಟಿ ಮಾಡಿದೆ. ಮೋದಿ ಅವರು ಸಮಸ್ಯೆಗಳಿಗೆ ಪರಿಹಾರವನ್ನು ನೀಡುವ ಬದಲು ಸಮಸ್ಯೆಯಾಗಿ ಮಾರ್ಪಟ್ಟಿದ್ದಾರೆ' ಎಂದು ಅವರು ಹೇಳಿದರು.
ಬಿಜೆಪಿ ಸರ್ಕಾರದ ಅತಿರೇಕದ ಭ್ರಷ್ಟಾಚಾರದಿಂದ ಗುತ್ತಿಗೆದಾರರು, ರೈತರು ಮತ್ತು ಉದ್ಯೋಗಾಕಾಂಕ್ಷಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಅವರು ತಿಳಿಸಿದರು.
'ಈ ವಿಚಾರವಾಗಿ ಪ್ರಧಾನಿ ಅವರಿಗೆ ಹಲವಾರು ಪತ್ರಗಳನ್ನು ಬರೆಯಲಾಗಿದೆ. ಆದರೆ ಅವರು ಮೌನವಾಗಿದ್ದಾರೆ' ಎಂದು ಅವರು ಹೇಳಿದರು.

ಮೋದಿ ಭ್ರಷ್ಟರಿಗೆ ಫೋನ್ ಮಾಡುತ್ತಾರೆ ಮತ್ತು ಪ್ರಾಮಾಣಿಕರನ್ನು ಓಡಿಸುತ್ತಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡ ಬಲಿಪಶು ಎಂದು ತಿಳಿಸಿದರು.
ಜಗದೀಶ್ ಶೆಟ್ಟರ್ ಅವರನ್ನು ಗೌರವಿಸಲಾಗಲಿಲ್ಲ ಮತ್ತು ಪಕ್ಷವನ್ನು ತೊರೆಯುವಂತೆ ಒತ್ತಾಯಿಸಲಾಯಿತು ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.
ಕೆಎಂಎಫ್-ಅಮುಲ್ ವಿವಾದದ ಕುರಿತು ಮಾತನಾಡಿದ ಪ್ರಿಯಾಂಕಾ ಗಾಂಧಿ, 'ಕಾಂಗ್ರೆಸ್ ಎರಡು ಘಟಕಗಳ ವಿಲೀನವನ್ನು ಎಂದಿಗೂ ಅನುಮತಿಸುವುದಿಲ್ಲ' ಎಂದು ತಿಳಿಸಿದರು. ಇದಕ್ಕೂ ಮುನ್ನ ಕುಂದಗೋಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರ ಪ್ರಿಯಾಂಕಾ ಪ್ರಚಾರ ನಡೆಸಿದರು.












Click it and Unblock the Notifications