ಧಾರವಾಡ: ಪಟಾಕಿ ಮಳಿಗೆಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ
ಧಾರವಾಡ, ಅಕ್ಟೋಬರ್, 12: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರ ನಿರ್ದೇಶನದ ಮೇರೆಗೆ ಧಾರವಾಡ ತಹಶೀಲ್ದಾರ್ ದೊಡ್ಡಪ್ಪ ಹೂಗಾರ ಹಾಗೂ ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ ನೇತೃತ್ವದಲ್ಲಿ ಕಂದಾಯ, ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆ ಅಧಿಕಾರಿಗಳ ತಂಡವು ತಡರಾತ್ರಿ ನಗರದ ಲೈಸನ್ಸ್ದಾರರ ಪಟಾಕಿ ಸಂಗ್ರಹ ಮತ್ತು ಮಾರಾಟದಾರರ ಉಗ್ರಾಣಗಳಿಗೆ ದಿಢೀರ್ ಭೇಟಿ ನೀಡಿದರು. ಅಲ್ಲದೆ ನಿಯಮಾನುಸಾರ ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು.
ಬೆಂಗಳೂರಿನ ಪಟಾಕಿ ಉಗ್ರಾಣದ ಅವಘಡದ ಹಿನ್ನೆಲೆ ರಾಜ್ಯ ಸರಕಾರವು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಎಲ್ಲಾ ಪಟಾಕಿ ಸಂಗ್ರಹ ಹಾಗೂ ಮಾರಾಟಗಾರರ ಉಗ್ರಾಣ, ಅಂಗಡಿಗಳನ್ನು ಪರಿಶೀಲಿಸಿ, ಪರವಾನಿಗೆಯಲ್ಲಿ ತಿಳಿಸಿರುವ ಷರತ್ತುಗಳನ್ನು ಪಾಲಿಸಿರುವ ಹಾಗೂ ನಿಯಮಾನುಸಾರ ಅಗತ್ಯ ಸುರಕ್ಷತಾ ಕ್ರಮ ಕೈಗೊಂಡಿರುವ ಕುರಿತು ಪರಿಶೀಲಿಸಿ, ಸೂಕ್ತ ಕ್ರಮಕೈಗೊಳ್ಳಲು ಆದೇಶಿದೆ.

ಅದರಂತೆಯೇ ನಿನ್ನೆ ರಾತ್ರಿ ಕಂದಾಯ, ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗಳ ಅಧಿಕಾರಿಗಳ ತಂಡವು ಧಾರವಾಡ ನಗರದ ಸವದತ್ತಿ ರಸ್ತೆಯ ಮೇದಾರ ಓಣಿಯಲ್ಲಿನ ಬಿ.ಜಿ.ಅತ್ತಾರ ಆ್ಯಂಡ್ ಬ್ರದರ್ಸ್ ಪಟಾಕಿ ಸಂಗ್ರಹ, ಮಾರಾಟ ಉಗ್ರಾಣ, ಸಪ್ತಾಪುರ ರಸ್ತೆ ಶ್ರೀನಗರ ಕ್ರಾಸ್ನಲ್ಲಿನ ವಿ.ಎಚ್.ಕಂದಕೂರ ಉಗ್ರಾಣ, ರಾಮಾಶ್ರಯ ಬುಕ್ ಡಿಪೋ ರಸ್ತೆಯ ಎಸ್.ಕೆ.ಆಕಳವಾಡಿ ಉಗ್ರಾಣ, ಮದಿಹಾಳ ರಸ್ತೆಯ ಎಸ್.ಕೆ.ಜೋಶಿ ಉಗ್ರಾಣ, ಕೆಲಗೇರಿ ರಸ್ತೆಯ ಎಸ್.ಜಿ.ಬೆಣ್ಣಿ ಉಗ್ರಾಣಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ಕೈಗೊಂಡಿತು.
ಧಾರವಾಡ ನಗರದ ಈ ಲೈಸೆನ್ಸ್ದಾರರು ವಿವಿಧ ರೀತಿಯ ಪಟಾಕಿ ಮಾರಾಟ ಮತ್ತು ಸಂಗ್ರಹದ ಪರವಾನಿಗೆ ಪಡೆದಿದ್ದಾರೆ. ಸರ್ಕಾರ ಹಾಗೂ ಸಂಭಂದಿಸಿದ ಇಲಾಖೆಗಳ ಷರತ್ತುಗಳ ಅನ್ವಯ ಪಟಾಕಿ ದಾಸ್ತಾನು ಉಗ್ರಾಣಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ. ವಿಜಯ ದೊಡವಾಡ ಹಾಗೂ ಡಿ.ಎಸ್.ಆಕಳವಾಡಿ ಎಂಬ ಇಬ್ಬರು ಲೈಸೆನ್ಸ್ ಹೊಂದಿದ್ದು, ಆದರೆ ನವೀಕರಣ ಮಾಡಿಕೊಂಡಿಲ್ಲ. ಮತ್ತು ಪಟಾಕಿ ದಾಸ್ತಾನು ಸಹ ಹೊಂದಿರುವದಿಲ್ಲ ಎಂಬುದು ತಪಾಸಣೆಯಲ್ಲಿ ತಿಳಿದುಬಂದಿತು ಎಂದು ತಹಶೀಲ್ದಾರ ದೊಡ್ಡಪ್ಪ ಹೂಗಾರ ತಿಳಿಸಿದ್ದಾರೆ.
ಅಧಿಕಾರಿಗಳ ತಂಡವು ಪ್ರತಿ ಉಗ್ರಾಣವನ್ನು ನಿಯಮಾನುಸಾರ ಕೂಲಂಕಷವಾಗಿ ಪರಿಶೀಲಿಸಿ, ಪರವಾನಿಗೆದಾರರಿಗೆ ಯಾವುದೇ ಅವಗಡ ಆಗದಂತೆ ಮುನ್ನೆಚ್ಚರಿಕೆವಹಿಸಿ, ಸೂಕ್ತವಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ ಎಂದು ಎಸ್ಪಿ ಪ್ರಶಾಂತ್ ಸಿದ್ದನಗೌಡರ ತಿಳಿಸಿದ್ದಾರೆ.
ಜಂಟಿ ತಪಾಸಣಾ ತಂಡದಲ್ಲಿ ಇನ್ಸ್ಪೆಕ್ಟರ್ಗಳಾದ ದಯಾನಂದ ಶೇಗುಣಸಿ, ನಾಗಯ್ಯ ಕಾಡದೇವರಮಠ, ಸಂಗಮೇಶ ದಿಡಗಿನಾಳ, ಅಗ್ನಿಶಾಮಕ ಅಧಿಕಾರಿ ಅವಿನಾಶ ಹಾಗೂ ಕಂದಾಯ ನಿರೀಕ್ಷಕ ಗುರು ಸುಣಗಾರ, ಗ್ರಾಮ ಆಡಳಿತ ಅಧಿಕಾರಿಗಳಾದ ಕರಿಯಪ್ಪ ಗುಡ್ಡದ, ವಿಠ್ಠಲ ಕೀಲಿ ಹಾಗೂ ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ ಇದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications