ಧಾರವಾಡ; ಕ್ರಷರ್ನಲ್ಲಿ ಸಂಗ್ರಹಿಸಿದ್ದ ಅಕ್ರಮ ಸ್ಫೋಟಕ ವಶಕ್ಕೆ
ಧಾರವಾಡ, ಮಾರ್ಚ್ 17; ಕ್ರಷರ್ ಮೇಲೆ ದಾಳಿ ನಡೆಸಿದ ಧಾರವಾಡ ಪೊಲೀಸರು 1,650 ಜಿಲೆಟಿನ್ ಕಡ್ಡಿ ಮತ್ತು 700 ಎಲೆಕ್ಟ್ರಾನಿಕ್ ಡಿಟೋನೇಟರ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬುಧವಾರ ಧಾರವಾಡದ ಎಸ್ಪಿ ಕೃಷ್ಣಕಾಂತ .ಪಿ ಈ ಕುರಿತು ಮಾಹಿತಿ ನೀಡಿದರು. ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ಹದ್ದೆಯಲ್ಲಿರುವ ಮೇ. ಡಿ. ಬಿ. ಮಾಸೂರ ಸ್ಟೋನ್ ಕ್ರಷಿಂಗ್ ಇಂಡಸ್ಟ್ರಿಸ್ನಲ್ಲಿ ಅಕ್ರಮವಾಗಿ ಹಾಗೂ ಅನಧಿಕೃತವಾಗಿ ಸಂಗ್ರಹಿಸಿದ್ದ ಸ್ಪೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಮಾರ್ಚ್ 15ರ ಸಂಜೆ ಖಚಿತ ಮಾಹಿತಿ ಆಧರಿಸಿ ಪೊಲೀಸ್ ಇನ್ಸ್ಪೆಕ್ಟರ್ಗಳಾದ ವಿಜಯಕುಮಾರ ಬಿರಾದಾರ ಮತ್ತು ಶ್ರೀಧರ. ವಿ ಸತಾರೇ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ದಾಳಿ ಮಾಡಿದರು.

ಯಾವುದೇ ದಾಖಲೆಗಳು ಇಲ್ಲದ ಹಾಗೂ ಅನಧಿಕೃತವಾಗಿ ಸಂಗ್ರಹಿಸಿದ್ದ 9 ರಟ್ಟಿನ ಬಾಕ್ಸ್ಗಳಲ್ಲಿದ್ದ ರೂ. 16,500 ಮೌಲ್ಯದ 1650 ಜಿಲೆಟಿನ್ ಕಡ್ಡಿ, ಕಟ್ಟಿಗೆ ಬಾಕ್ಸ್ನಲ್ಲಿದ್ದ 3,500 ರೂ. ಮೌಲ್ಯದ 700 ಎಲೆಕ್ಟ್ರಾನಿಕ್ ಡಿಟೋನೇಟರ್ ವಶಕ್ಕೆ ಪಡೆಯಲಾಯಿತು.
ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿದೆ. ಸ್ಟೋನ್ ಕ್ರಷಿಂಗ್ ಇಂಡಸ್ಟ್ರಿಸ್ ಮಾಲೀಕ ಧಾರವಾಡದ ದಯಾನಂದ ಬಸವರಾಜ ಮಾಸೂರ, ಕ್ರಷರ್ನ ಕಾರಕೂನ ಆಗಿರುವ ಕರಡಿಗುಡ್ಡ ಗ್ರಾಮದ ಶಂಕರಗೌಡ ಶಿವನಗೌಡ ಗೌಡ್ರ ಹಾಗೂ ಸ್ಪೋಟಕ ವಸ್ತು ಪೂರೈಸಿದ್ದ ಬಾಗಲಕೋಟೆಯ ನವೀನ ಕುಮಾರ ಎ. ವಾಲಿ ಮೇಲೆ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ.

ಈ ಪ್ರಕರಣಕ್ಕೆ ಸಬಂಧಿಸಿದಂತೆ ಆರೋಪಿ ಶಂಕರಗೌಡ ಶಿವನಗೌಡ ಗೌಡ್ರ ವಶಕ್ಕೆ ಪಡೆಯಲಾಗಿದ್ದು, ಇನ್ನಿಬ್ಬರು ಆರೋಪಿಗಳನ್ನು ಶೀಘ್ರದಲ್ಲಿಯೇ ಬಂಧಿಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
-
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್












Click it and Unblock the Notifications