ಮಾರುವೇಷ ಧರಿಸಿ ಆಟೋಚಾಲಕರಿಗೆ ಬಿಸಿ ಮುಟ್ಟಿಸಿದ ಧಾರವಾಡ ಪೊಲೀಸ್!
ಧಾರವಾಡ, ಆಗಸ್ಟ್, 17: ನಗರದ ಸಂಚಾರಿ ಪೊಲೀಸರ ಮಾರುವೇಷದ ಕಾರ್ಯಾಚರಣೆಗೆ ಭಾರಿ ಪ್ರಶಂಸೆ ವ್ಯಕ್ತವಾಗುತ್ತಿದೆ. ಧಾರವಾಡದ ರೈಲ್ವೇ ನಿಲ್ದಾಣದಲ್ಲಿನ ಮಾರುವೇಷ ಕಾರ್ಯಾಚರಣೆ ರಾಜ್ಯಕ್ಕೆ ಮಾದರಿ ಆಗಿದೆ.
ಸಂಚಾರಿ ಪೊಲೀಸರು ಮಾರುವೇಷದಲ್ಲಿ ಕಾರ್ಯಾಚರಣೆ ಮಾಡಿ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ್ದು, ಪೊಲೀಸರ ಸಾಹಸಕ್ಕೆ ಧಾರವಾಡ ಜನರು ಭಾರಿ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ನಗರದ ರೈಲ್ವೇ ನಿಲ್ದಾಣದಲ್ಲಿ ಸಾರ್ವಜನಿಕರಿಂದ ಆಟೋ ಚಾಲಕರು ಬಾಡಿಗೆ ದರದಕ್ಕಿಂತ ಹೆಚ್ಚಿನ ಹಣವನ್ನು ವಸೂಲಿ ಮಾಡಿದ್ದಾರೆ. ಈ ಸಮಯದಲ್ಲಿ ಸಂಚಾರಿ ಪೊಲೀಸರು ಮಾರುವೇಷ ಕಾರ್ಯಾಚರಣೆ ಮೂಲಕ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ್ದಾರೆ. ಹೀಗೆ ರಾಜ್ಯಕ್ಕೆ ಮಾದರಿಯಾಗುವ ಕಾರ್ಯಾಚರಣೆಯನ್ನು ಧಾರವಾಡ ಸಂಚಾರಿ ಠಾಣೆ ಪೊಲೀಸರು ಮಾಡಿದ್ದಾರೆ.
ರೈಲ್ವೇ ನಿಲ್ದಾಣಕ್ಕೆ ಬರುವ ಸಾರ್ವಜನಿಕರ ಬಳಿ ಆಟೋದವರು ನಿಗದಿಗಿಂತ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿದ್ದರು. ಈ ಕುರಿತಂತೆ ಸಾಕಷ್ಟು ಬಾರಿ ಸಾರ್ವಜನಿಕರಿಂದ ಸಂಚಾರಿ ಪೊಲೀಸರಿಗೆ ದೂರುಗಳು ಬಂದಿದ್ದವು. ಇದೆಲ್ಲವನ್ನೂ ಅರಿತುಕೊಂಡ ಪೊಲೀಸರು ಇಂದು ಮಾರುವೇಷವನ್ನು ಹಾಕಿಕೊಂಡು ರೈಲ್ವೇ ನಿಲ್ದಾಣದ ಒಳಗಡೆಯಿಂದ ಪ್ರಯಾಣಿಕರ ರೀತಿ ಬಂದು ಆಟೋವನ್ನು ಬಾಡಿಗೆಗೆ ಕೇಳಿದ್ದಾರೆ. ನಂತರ ನಿಗದಿತ ದರದಕ್ಕಿಂತ ಅಧಿಕ ಹಣ ವಸೂಲಿ ಮಾಡುತ್ತಿದ್ದ 6-7 ಆಟೋಗಳನ್ನು ಸೀಜ್ ಮಾಡಿದ್ದಾರೆ. ಬೇಕಾಬಿಟ್ಟಿಯಾಗಿ ಹಣ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಧಾರವಾಡ ಸಂಚಾರಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಪೊಲೀಸ್ ಆಯುಕ್ತ ಮತ್ತು ಧಾರವಾಡ ಸಂಚಾರಿ ಪೊಲೀಸ್ ಇನ್ಸ್ಪೆಕ್ಟರ್ ಮಲ್ಲನಗೌಡ ನಾಯ್ಕರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಎಎಸ್ಐ ವಿರೇಶ ಬಳ್ಳಾರಿ ನೇತೃತ್ವದಲ್ಲಿನ ಟೀಂ ಮಾರುವೇಷ ಹಾಕಿಕೊಂಡು ಕಾರ್ಯಾಚರಣೆ ಮಾಡಿದ್ದಾರೆ. ಸದ್ಯ 6-7 ಆಟೋಗಳನ್ನು ಸೀಜ್ ಮಾಡಿದ್ದು, ಚಾಲಕರನ್ನು ಕೂಡ ಪೊಲೀಸರು ವಶಕ್ಕೆ ತಗೆದುಕೊಂಡಿದ್ದಾರೆ. ಪೊಲೀಸರು ಮುಂದಿನ ಹಂತದ ಕ್ರಮಗಳನ್ನು ಕೈಗೊಂಡು ವಿಚಾರಣೆ ಮಾಡುವುದಾಗಿ ತಿಳಿಸಿದರು.

ಮಾರುವೇಷದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಶಂಕರಗೌಡ ಪಾಟೀಲ, ಶಿವಾನಂದ ಸುತಗಟ್ಟಿ, ಬಸವರಾಜ ಉಳ್ಳಿಗೇರಿ, ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ. ಮಾರುವೇಷದ ಕಾರ್ಯಾಚರಣೆ ರಾಜ್ಯಕ್ಕೆ ಮಾದರಿಯಾಗಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications