ಕವಿ ಡಾ. ಚೆನ್ನವೀರ ಕಣವಿ ವಿಧಿವಶ: ಗಣ್ಯರ ಸಂತಾಪ
ಧಾರವಾಡ, ಫೆಬ್ರವರಿ 16: ಕನ್ನಡ ಸಾಹಿತ್ಯ ಲೋಕದ ಹಿರಿಯ ಕವಿ ಚನ್ನವೀರ ಕಣವಿ ದೀರ್ಘಕಾಲದ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಇಂದು 93 ವರ್ಷದ ಡಾ. ಚೆನ್ನವೀರ ಕಣವಿ ಚಿಕಿತ್ಸೆ ಫಲಕಾರಿಯಾಗದೇ ಧಾರವವಾಡದ ಎಸ್ಡಿಎಂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಚೆಂಬೆಳಕಿನ ಖ್ಯಾತಿಯ ನಾಡೋಜ ಚೆನ್ನವೀರ ಕಣವಿ ಅಗಲಿಕೆಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಚೆನ್ನವೀರ ಕಣವಿ ಅಗಲಿಕೆಗೆ ಸಂತಾಪಿಸಿ ಟ್ವೀಟ್ ಮಾಡಿದ್ದಾರೆ.
'ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ' ಎಂದು ಏಳು ದಶಕಗಳ ಕಾಲ ಕನ್ನಡದ ಸಾಹಿತ್ಯ ಕೃಷಿ ಮಾಡಿದ ಸಮನ್ವಯ ಕವಿ ನಾಡೋಜ ಶ್ರೀ ಚನ್ನವೀರ ಕಣವಿಯವರ ನಿಧನಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ. ಭಗವಂತ ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ, ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಬರೆದಿದ್ದಾರೆ.
'ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ' ಎಂದು ಏಳು ದಶಕಗಳ ಕಾಲ ಕನ್ನಡದ ಸಾಹಿತ್ಯ ಕೃಷಿ ಮಾಡಿದ ಸಮನ್ವಯ ಕವಿ ನಾಡೋಜ ಶ್ರೀ ಚನ್ನವೀರ ಕಣವಿಯವರ ನಿಧನಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ.
— Dr Sudhakar K (@mla_sudhakar) February 16, 2022
ಭಗವಂತ ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ, ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/H40xHy58VH
ಅಬಕಾರಿ ಸಚಿವ ಕೆ.ಗೋಪಾಲಯ್ಯ ಕಂಬನಿ
ತಮ್ಮ ಅಪಾರ ಬರಹಗಳ ಮೂಲಕ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದ ನಾಡೋಜ ಕವಿ ಚನ್ನವೀರ ಕಣವಿ ಅವರ ನಿಧನಕ್ಕೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಕಂಬನಿ ಮಿಡಿದಿದ್ದಾರೆ. ಕಥೆ, ಕವಿತೆ,ಸಾಹಿತ್ಯ ಲೇಖನ,ಹೀಗೆ ಕನ್ನಡದ ಎಲ್ಲ ಬಗೆಯ ಸಾಹಿತ್ಯದ ಮೂಲಕ ನಾಡಿನ ಮನೆ ಮನೆಗೆ ತಲುಪಿದ್ದ ಚೆಂಬಳಕಿನ ಕವಿ ಚನ್ನವೀರ ಕಣವಿ ಅವರ ನಿಧನದಿಂದ ಕನ್ನಡ ಸಾಹಿತ್ಯ ಪ್ರಪಂಚ ದೊಡ್ಡ ನಷ್ಟ ಅನುಭವಿಸಿದೆ.

ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ
ಕಳಚಿದ ಕನ್ನಡ ಕಾವ್ಯಲೋಕದ ಕೊಂಡಿಯಾಗಿದ್ದ ನಾಡೋಜ ಕವಿ ಚನ್ನವೀರ ಕಣವಿ ಅವರ ಅಗಲಿಕೆ ರಾಷ್ಟ್ರದ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ. ಅವರ ಅಭಿಮಾನಿಗಳಿಗೆ ಮತ್ತು ಕುಟುಂಬವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಪರಮಾತ್ಮ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಸಚಿವ ಗೋವಿಂದ ಕಾರಜೋಳ
ವಿಶ್ವ ಭಾರತಿಗೆ ಕನ್ನಡಧಾರತಿ ಬೆಳಗಿದ ಕನ್ನಡಿಗರ ಮನದಲ್ಲಿ ಕನ್ನಡ ಜಾಗೃತಿ ಮೂಡಿಸಿದ ಕನ್ನಡದ ಮಹಾಕವಿ ನಾಡೋಜ ಚೆನ್ನವೀರ ಕಣವಿಯವರ ನಿಧನದ ಸುದ್ಧಿ ಕೇಳಿ ತೀವ್ರ ಬೇಸರವಾಯಿತು. ಚೆನ್ನವೀರ ಕಣವಿ ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದಿದ್ದಾರೆ.
ವಿಶ್ವ ಭಾರತಿಗೆ ಕನ್ನಡಧಾರತಿ ಬೆಳಗಿದ ಕನ್ನಡಿಗರ ಮನದಲ್ಲಿ ಕನ್ನಡ ಜಾಗೃತಿ ಮೂಡಿಸಿದ ಕನ್ನಡದ ಮಹಾಕವಿ ನಾಡೋಜ ಚೆನ್ನವೀರ ಕಣವಿಯವರ ನಿಧನದ ಸುದ್ಧಿ ಕೇಳಿ ತೀವ್ರ ಬೇಸರವಾಯಿತು.
— Govind M Karjol (@GovindKarjol) February 16, 2022
ಚೆನ್ನವೀರ ಕಣವಿ ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.#ಸದ್ಗತಿ pic.twitter.com/zByQup46fa
ಖ್ಯಾತ ಕವಿ ಚನ್ನವೀರ ಕಣವಿ ಅವರ ವಿಧಿವಶಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ
ಕನ್ನಡದ ಸಮನ್ವಯ, ಸುನೀತ ಕವಿ, ಖ್ಯಾತ ವಿದ್ವಾಂಸರು, ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಾದ ನಾಡೋಜ ಚನ್ನವೀರ ಕಣವಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.'ಕನ್ನಡದ ಸಾಹಿತ್ಯ ಲೋಕದ ನಕ್ಷತ್ರದಂತಿದ್ದ ಚನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಅವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಬಹು ದೊಡ್ಡ ನಷ್ಟ ಎಂದು ಅವರು ಹೇಳಿದ್ದಾರೆ. ವಿಮರ್ಶೆಗಳ ಜತೆಗೆ ಕಾವ್ಯಗಳು, ಸುನೀತಗಳನ್ನು ಬರೆಯುತ್ತಿದ್ದ ಕಣವಿ ಅವರು ಕಾವ್ಯಾಕ್ಷಿ, ಆಕಾಶಬುಟ್ಟಿ, ಹೊಂಬೆಳಕು, ನೆಲ ಮುಗಿಲು ಸೇರಿದಂತೆ ಹತ್ತು ಹಲವು ಕಾವ್ಯ ಸಂಕಲನ ರಚಿಸಿದ್ದಾರೆ. 1996ರ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಕಣವಿ ಅವರು ಸಾಹಿತ್ಯ ಲೋಕದಲ್ಲಿ ಸಲ್ಲಿಸಿದ್ದ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ,ನಾಡೋಜ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಕವಿರತ್ನ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪುರಸ್ಕಾರಗಳು ಅವರ ಮುಕುಟ ಅಲಂಕರಿಸಿದ್ದವು ಎಂದು ಶಿವಕುಮಾರ್ ಅವರು ಸ್ಮರಿಸಿದ್ದಾರೆ.
ಕಣವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು, ಬಂಧುಗಳು ಹಾಗೂ ಸಾಹಿತ್ಯ ಅಭಿಮಾನಿಗಳಿಗೆ ಅವರ ಅಗಲಿಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ' ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಡಾ. ಅಶ್ವಥ್ನಾರಾಯಣ್ ಸಿಎನ್
'ಸಮನ್ವಯ ಕವಿ', ಖ್ಯಾತ ಸಾಹಿತಿ ನಾಡೋಜ ಡಾ. ಚೆನ್ನವೀರ ಕಣವಿ ಅವರ ನಿಧನದ ಸುದ್ದಿ ದುಃಖ ತಂದಿದೆ. NEP2020 ಅನುಷ್ಠಾನದ ಸಂಬಂಧ ಭೇಟಿಯಾದಾಗ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಸಾಹಿತ್ಯಾಭಿಮಾನಿಗಳು, ಹಿತೈಷಿಗಳು, ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ದೊರಕಲೆಂದು ಪ್ರಾರ್ಥಿಸುವೆ. ಓಂ ಶಾಂತಿ.
Koo App’ಸಮನ್ವಯ ಕವಿ’, ಖ್ಯಾತ ಸಾಹಿತಿ ನಾಡೋಜ ಡಾ. ಚೆನ್ನವೀರ ಕಣವಿ ಅವರ ನಿಧನದ ಸುದ್ದಿ ದುಃಖ ತಂದಿದೆ. NEP2020 ಅನುಷ್ಠಾನದ ಸಂಬಂಧ ಭೇಟಿಯಾದಾಗ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಸಾಹಿತ್ಯಾಭಿಮಾನಿಗಳು, ಹಿತೈಷಿಗಳು, ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ದೊರಕಲೆಂದು ಪ್ರಾರ್ಥಿಸುವೆ. ಓಂ ಶಾಂತಿ. - Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan) 16 Feb 2022
ಮಾಜಿ ಸಿಎಂ ಯಡಿಯೂರಪ್ಪ ಚನ್ನವೀರ ಕಣವಿ ಅವರ ವಿಧಿವಶಕ್ಕೆ ಸಂತಾಪ
ಹಿರಿಯ ಸಾಹಿತಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ವಿಧಿವಶರಾದ ಸುದ್ದಿ ಅತ್ಯಂತ ದುಃಖವನ್ನು ತಂದಿದೆ. ಸಮನ್ವಯ ಕವಿ ಎಂದೇ ಹೆಸರಾಗಿದ್ದ ಕಣವಿಯವರನ್ನು ಕಳೆದುಕೊಂಡು ಕನ್ನಡ ಸಾರಸ್ವತ ಲೋಕ ಅನಾಥವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬ ಹಾಗೂ ಅಸಂಖ್ಯ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ
ಹಿರಿಯ ಸಾಹಿತಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ವಿಧಿವಶರಾದ ಸುದ್ದಿ ಅತ್ಯಂತ ದುಃಖವನ್ನು ತಂದಿದೆ. ಸಮನ್ವಯ ಕವಿ ಎಂದೇ ಹೆಸರಾಗಿದ್ದ ಕಣವಿಯವರನ್ನು ಕಳೆದುಕೊಂಡು ಕನ್ನಡ ಸಾರಸ್ವತ ಲೋಕ ಅನಾಥವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬ ಹಾಗೂ ಅಸಂಖ್ಯ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ
— B.S. Yediyurappa (@BSYBJP) February 16, 2022
ಸಚಿವ ಡಾ ಮುರುಗೇಶ್ ನಿರಾಣಿ
ಕನ್ನಡದ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಮತ್ತು ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಕೊಡಲಿ.
ಮಾಜಿ ಸಿಎಂ ಕುಮಾರಸ್ವಾಮಿ ಚನ್ನವೀರ ಕಣವಿ ಅವರ ನಿಧನಕ್ಕೆ ಸಂತಾಪ
ಆಧುನಿಕ ಕನ್ನಡ ಕಾವ್ಯದ ಮೇರು ಪ್ರತಿಭೆಗಳಲ್ಲಿ ಒಬ್ಬರು, ಹೊಂಬೆಳಕಿನ ಕವಿ, ಸುನೀತಗಳ ಸಾಮ್ರಾಟರೆಂದೇ ಕನ್ನಡಿಗರ ಮನಸ್ಸುಗಳಲ್ಲಿ ತುಂಬಿಹೋಗಿರುವ ನಾಡೋಜ ಚನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು.
ಆಧುನಿಕ ಕನ್ನಡ ಕಾವ್ಯದ ಮೇರು ಪ್ರತಿಭೆಗಳಲ್ಲಿ ಒಬ್ಬರು, ಹೊಂಬೆಳಕಿನ ಕವಿ, ಸುನೀತಗಳ ಸಾಮ್ರಾಟರೆಂದೇ ಕನ್ನಡಿಗರ ಮನಸ್ಸುಗಳಲ್ಲಿ ತುಂಬಿಹೋಗಿರುವ ನಾಡೋಜ ಚನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. 1/3 pic.twitter.com/TAo0nG4ZpO
— H D Kumaraswamy (@hd_kumaraswamy) February 16, 2022
Recommended Video
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications