Jagadish Shettar: ಅಣ್ಣನ ಪರ 'ಧಾರವಾಡ' ಟಿಕೆಟ್ಗೆ ಸಹೋದರ ಬೇಡಿಕೆ
ಧಾರವಾಡ, ಮಾರ್ಚ್ 13: ಕರ್ನಾಟಕ ಲೋಕಸಭಾ ಚುನಾವಣೆಯ ಬಿಜೆಪಿ ಒಬ್ಬ ಅಭ್ಯರ್ಥಿ ಹೆಸರು ಇನ್ನೂ ಪ್ರಕಟಗೊಂಡಿಲ್ಲ. ಉತ್ತರ ಕರ್ನಾಟಕದ ಧಾರವಾಡ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಇದೀಗ ಜಗದೀಶ್ ಶೆಟ್ಟರ್ ಪರ ಸಹೋದರ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಎರಡು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದ್ದಾರೆ. ಪಕ್ಷದಲ್ಲಿ ಶೆಟ್ಟರ್ ಅವರನ್ನು ಸರಿಯಾಗಿ ನಡೆಸಿಕೊಳ್ಳದಿರುವ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಬುಧವಾರ ಮಾತನಾಡಿದ ಪ್ರದೀಪ್ ಶೆಟ್ಟರ್ ಅವರು, ಸದರಿ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಧಾರವಾಡದಿಂದ ಸ್ಪರ್ಧಿಸುವಂತೆ ಬಹಳಷ್ಟು ಅಭಿಮಾನಿಗಳು, ಎಲ್ಲ ಸಮಾಜದಿಂದ ಒತ್ತಡವಿದೆ ಎಂದರು.

ಧಾರವಾಡ ಕ್ಷೇತ್ರದಲ್ಲಿ ನಮ್ಮ ಸಮಾಜದವರು ಬಹಳಷ್ಟು ಜನರಿದ್ದಾರೆ. ಧಾರವಾಡ ಅವರಿಗೆ ಟಿಕೆಟ್ ಕೊಟ್ಟರೆ ಬಹಳಷ್ಟು ಅನುಕೂಲವಾಗಲಿದೆ. ಜಗದೀಶ ಶೆಟ್ಟರ್ ಅವರು ಮತ್ತು ನಾವು ಅಖಂಡ ಧಾರವಾಡ ಜಿಲ್ಲೆಯಲ್ಲಿ ಬೆಳೆದವರು. ಇಲ್ಲಿ ನಮ್ಮ ಸಮಾಜದವರು ಸಾಕಷ್ಟು ಸಂಖ್ಯೆಯಲ್ಲಿ ಇದ್ದಾರೆ.
ಎರಡು ಕ್ಷೇತ್ರದ ಟಿಕೆಟ್ಗೆ ಬೇಡಿಕೆ
ಅಖಂಡ ಧಾರವಾಡದಲ್ಲಿ ಬೆಳೆದಿರುವುದರಿಂದ ಜಗದೀಶ ಶೆಟ್ಟರ್ ಅವರಿಗೆ ಈ ಬಾರಿ ಧಾರವಾಡ ಲೋಕಸಭಾ ಕ್ಷೇತ್ರ ಟಿಕೆಟ್ ಇಲ್ಲವೇ ಹಾವೇರಿ ಕ್ಷೇತ್ರದ ಬಿಜೆಪಿ ಕೊಟ್ಟರೆ ಒಳ್ಳೆಯದು ಎಂದು ಅವರು ಪ್ರತಿಪಾದಿಸಿದರು.
ಬೆಳಗಾವಿ ಕ್ಷೇತ್ರ ನಮ್ಮ ಪಕ್ಕದ ಜಿಲ್ಲೆ, ಆದರೆ ಅದು ನಮ್ಮ ಜಿಲ್ಲೆ ಅಲ್ಲದ್ದರಿಂದ ಅಲ್ಲಿ ನಮ್ಮ ಸಂಪರ್ಕ ಕಡಿಮೆ. ಆಯಾ ಜಿಲ್ಲೆಯ ನಾಯಕರಿಗೆ ಅಲ್ಲಿಯ ಟಿಕೆಟ್ ನೀಡಿದರೆ ಹೆಚ್ಚು ಅನುಕೂಲವಾಗುತ್ತದೆ. ಜಗದೀಶ ಶೆಟ್ಟರ್ ರಾಜ್ಯದ ನಾಯಕರು, ಅವರಿಗೆ ಯಾವುದೇ ಸಮಸ್ಯೆ ಇಲ್ಲ. ಕಾರ್ಯಕರ್ತರು, ಮುಖಂಡರು ಧಾರವಾಡಕ್ಕೆ ಕೊಡಬೇಕು ಎನ್ನುತ್ತಿದ್ದಾರೆ. ಇದರಿಂದ ಕೊಪ್ಪಳ, ಗದಗ, ಹಾವೇರಿ, ಬಾಗಲಕೋಟೆ ಕ್ಷೇತ್ರಗಳಿಗೂ ಅನುಕೂಲವಾಗಲಿದೆ ಎಂದು ಅವರ ವಿವರಿಸಿದರು.

ಪ್ರದೀಪ್ ಶೆಟ್ಟರ್ ಅಸಮಾಧಾನ
ಮಾಜಿ ಸಿಎಂ ಜಗದೀಶ ಶೆಟ್ಟರ್ ಪಕ್ಷಕ್ಕೆ ಮರಳಿದ ಮೇಲೆ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂಬ ವಿಚಾರ, ಅಭ್ಯರ್ಥಿ ಯಾರೇ ಆಗಲಿ, ಒಟ್ಟಾಗಿ ಕೆಲಸ ಮಾಡಬೇಕು ಅದು ಪಕ್ಷದಲ್ಲಿ ಆಗುತ್ತಿಲ್ಲ. ಸ್ವಲ್ಪ ದಿನ ಈ ರೀತಿ ನಡೆಯುತ್ತದೆ. ಅಭ್ಯರ್ಥಿ ಯಾರೇ ಆಗಲಿ ಪಕ್ಷ ಕಟ್ಟಬೇಕು ಎಂದರೆ ಎಲ್ಲರೂ ಒಗ್ಗಟ್ಟಾಗಿ ಮುಂದೆ ಸಾಗಬೇಕು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಕಳೆದ ದಿನ ನನ್ನ ಅನುದಾನದಡಿಯಲ್ಲಿ ತ್ರಿಚಕ್ರ ವಾಹನ ವಿತರಣೆ ಕಾರ್ಯಕ್ರಮಕ್ಕೆ ಜಗದೀಶ ಶೆಟ್ಟರ್ ಅವರು ಬಂದಿದ್ದರು. ಆ ವೇಳೆ ಮನೆಗೆ ಕರೆದಿದ್ದೆ ಹೀಗಾಗಿ ಮನೆಗೆ ಬಂದಿದ್ದರೂ ಯಾವುದೇ ಚರ್ಚೆ ಇಲ್ಲ. ಸಭೆ ನಡೆದಿಲ್ಲ ಎಲ್ಲ ಸಮಾಜದವರು ಬಂದಿದ್ದರು.
ರಾಜ್ಯಾಧ್ಯಕ್ಷರ ಗಮನಕ್ಕೆ ತರುತ್ತೇವೆ
ಕೆಲವು ಕಡೆ ಆಮಂತ್ರಣ ನೀಡುತ್ತಿದ್ದಾರೆ, ಕೆಲವು ಕಡೆ ನೀಡುತ್ತಿಲ್ಲ. ಇದರ ಬಗ್ಗೆ ಜಿಲ್ಲಾ ಘಟಕದ ಅಧ್ಯಕ್ಷರು, ಜವಾಬ್ದಾರಿ ತೆಗೆದುಕೊಂಡವರನ್ನು ಕೇಳಬೇಕು. ಅಲ್ಲದೆ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಮಾಹಿತಿ ನೀಡುತ್ತೇನೆ ಎಂದು ಅವರು ತಿಳಿಸಿದರು.
ಜಗದೀಶ್ ಶೆಟ್ಟರ್ ಅವರು ಪಕ್ಷಕ್ಕೆ ಮರಳಿದ ಬಳಿಕ ನಾನು ಟಿಕೆಟ್ ಕೇಳಿಲ್ಲ ಎಂದಿದ್ದರು. ಹಾವೇರಿ, ಬೆಳಗಾವಿ, ಇಲ್ಲವೇ ಧಾರವಾಡ ಈ ಕ್ಷೇತ್ರಗಳಲ್ಲಿ ವರಿಷ್ಠರು ಸೂಚನೆ ಮೇರೆಗೆ ಎಲ್ಲಿಂದಲಾದರೂ ಸ್ಪರ್ಧೆಗೆ ಸಿದ್ದ ಎಂದಿದ್ದರು. ಸದ್ಯ ಧಾರವಾಡದ ಟಿಕೆಟ್ಗೆ ಹಾಲಿ ಸಂಸದ ಪ್ರಹ್ಲಾದ್ ಜೋಶಿಯವರು ಆಕಾಂಕ್ಷಿಯಾಗಿದ್ದಾರೆ. ಆದರೆ ಯಾರಿಗೆ ಎಲ್ಲಿಂದ ಟಿಕೆಟ್ ಎಂಬುದು ಬಿಜೆಪಿ ಪಟ್ಟಿ ಪ್ರಕಟಗೊಂಡ ಬಳಿಕವೇ ತಿಳಿಯಲಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications