Pralhad Joshi: ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ ಯಾವಾಗ? ಅಪ್ಡೇಟ್ ಮಾಹಿತಿ
ಹುಬ್ಬಳ್ಳಿ, ಏಪ್ರಿಲ್ 10: ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮೇ 07ರಂದು ಜರುಗಲಿದೆ. ಇದೇ ಏಪ್ರಿಲ್ 12ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸತತ 5ನೇ ಬಾರಿ ಕಣಕ್ಕಿಳಿದಿರುವ ಪ್ರಹ್ಲಾದ್ ಜೋಶಿ ಅವರು ಇದೇ ಏಪ್ರಿಲ್ 15ರಂದು ಅದ್ದೂರಿ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
ಭಾರೀ ಬಹುಮತಗಳ ಅಂತರದಿಂದ ಸ್ವಕ್ಷೇತ್ರ ಧಾರವಾಡದಲ್ಲಿ ನಿರಂತರವಾಗಿ ಗೆಲುವು ಸಾಧಿಸುತ್ತಲೇ ಬಂದಿರುವ ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು, ಗಣಿ ಸಚಿವರೂ ಆಗಿರುವ ಪ್ರಹ್ಲಾದ್ ಜೋಶಿ ಅವರು ಈಗ 5ನೇ ಬಾರಿಯೂ ವಿಜಯ ಪತಾಕೆ ಹಾರಿಸಲು ಭರ್ಜರಿ ತಯಾರಿ ನಡೆಸಿದ್ದಾರೆ.

2014 ಮತ್ತು 2019ರ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 1 ಲಕ್ಷ, 2 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದ ಜೋಶಿ ಅವರು ಈಗ 2024ರ ಅಖಾಡದಲ್ಲಿ ಹಿಂದಿಗಿಂತ ಹೆಚ್ಚು ಅಂತರದಲ್ಲಿ ಗೆಲುವು ದಾಖಲಿಸುವ ಗುರಿಯತ್ತ ಹೆಜ್ಜೆ ಹಾಕುತ್ತಿದ್ದಾರೆ.
ಮೊದಲ ಹಂತದಲ್ಲಿ ಪ್ರಚಾರ ಪೂರ್ಣ
ಕೆಲವು ಸಣ್ಣ ಪುಟ್ಟ ಅಡೆತಡೆಗಳು ಎದುರಾದರೂ ಸಹಿತ ಅವರು ಪ್ರಹ್ಲಾದ್ ಜೋಶಿ ಅವರು ಕ್ಷೇತ್ರದಲ್ಲಿ ಈ ಬಾರಿ ಐತಿಹಾಸಿಕ ಗೆಲುವು ಸಾಧಿಸಲು ಸಿದ್ಧತೆ ನಡೆಸಿದ್ದಾರೆ. ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಮೊದಲ ಹಂತದಲ್ಲಿ ಸಚಿವರು ಪಕ್ಷದ ಶಾಸಕರು, ಪ್ರಮುಖ ಮುಖಂಡರು, ಕಾರ್ಯಕರ್ತರ ಜತೆಯಾಗಿ ಕ್ಷೇತ್ರದಾದ್ಯಂತ ಸುತ್ತಾಡಿ ಮತಯಾಚನೆ ಮಾಡಿದ್ದಾರೆ. ಹಳ್ಳಿ ಹಳ್ಳಿಗಳಿಗೂ ಹೋಗಿ ಜನರನ್ನು ಭೇಟಿ ಮಾಡಿ ಆಶೀರ್ವಾದ ಕೋರಿದ್ದಾರೆ.
ಕ್ಷೇತ್ರದಲ್ಲಿನ ಹುಬ್ಬಳ್ಳಿ-ಧಾರವಾಡ, ನವಲಗುಂದ, ಕಲಘಟಗಿ, ಶಿಗ್ಗಾವಿ-ಸವಣೂರು ಸೇರಿದಂತೆ ಪ್ರತಿಯೊಂದು ಕಡೆಯೂ ಪ್ರತಿ ಸಮುದಾಯದ ಮುಖಂಡರ ಜೊತೆ ಸಭೆ ಸಮಾವೇಶ ನಡೆಸಿ ಬೆಂಬಲ ಕೋರಿದ್ದಾರೆ. ಸರ್ವ ಜನಾಂಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ಚುನಾವಣಾ ತಯಾರಿ ಕೈಗೊಂಡಿದ್ದಾರೆ. ನಾಮಪತ್ರ ಸಲ್ಲಿಕೆಯು ಆರಂಭವಾಗಲಿದ್ದು, ಅವರು ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.

ಮಠಗಳಿಗೆ ಭೇಟಿ: ಆಶೀರ್ವಾ ಪಡೆದ ಜೋಶಿ
ಬುಧವಾರ ನಗರದ ಕಾಳಿಕಾ ದೇವಿ ದೇವಸ್ಥಾನ, ನಗರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಕಳೆದ ಕೆಲ ದಿನಗಳಿಂದ ಕ್ಷೇತ್ರದಲ್ಲಿನ ಪ್ರಮುಖ ಮಠ- ಮಂದಿರಗಳಿಗೆ ತೆರಳಿ ಪೂಜೆ ಸಲ್ಲಿಸುವ ಜತೆಗೆ ವಿವಿಧ ಸಮುದಾಯಗಳ ಧರ್ಮ ಗುರುಗಳಿಂದ ಆಶೀರ್ವಾದ ಪಡೆದಿದ್ದಾರೆ.
ಯುಗಾದಿ ಹಬ್ಬದ ದಿನವೇ ಸಚಿವರು ಪಂಚ ಪೀಠಗಳ ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ವಿರಸೋಮೇಶ್ವರ ಶಿವಾಚಾರ್ಯ ಶ್ರೀಗಳು ಕಾಶಿ ಜಗದ್ಗುರು ಚಂದ್ರಶೇಖರ್ ಶಿವಾಚಾರ್ಯ ಶ್ರೀಗಳು ಸೇರಿದಂತೆ ವೀರಶೈವ ಸಮುದಾಯದ ಪ್ರಮುಖ ಸ್ವಾಮೀಜಿಗಳನ್ನು ಹಾಗೂ ಕಾಗಿನೆಲೆ ಗುರುಪೀಠ, ರಾಜನಹಳ್ಳಿ ವಾಲ್ಮೀಕಿ ಗುರುಪೀಠ ಹೀಗೆ ವಿವಿಧ ಸಮುದಾಯಗಳ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ಏ.15ಕ್ಕೆ ಬೃಹತ್ ಮೆರವಣಿಗೆ
ಏಪ್ರಿಲ್ 15ರಂದು ಪ್ರಹ್ಲಾದ್ ಜೋಶಿಯವರು ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಬೆಳಗ್ಗೆ ಹುಬ್ಬಳ್ಳೀಯ ಚನ್ನಮ್ಮ ವೃತ್ತ ಸೇರಿದಂತೆ ಪ್ರಮುಖ ವೃತ್ತ, ರಸ್ತೆಗಳಲ್ಲಿ ಹೆಚ್ಚಿನ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ.
ಪ್ರಚಾರ ಕಾರ್ಯದಲ್ಲಿ ಪ್ರಧಾನಿ ಮೋದಿ ಭಾಗಿ?
ಹುಬ್ಬಳ್ಳಿ- ಧಾರವಾಡದಲ್ಲಿ ಪ್ರಹ್ಲಾದ್ ಜೋಶಿಯವರ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ ಎಂದು ಸಚಿವರ ಮೂಲಗಳು ತಿಳಿಸಿವೆ. ಆದರೆ ಪ್ರಧಾನಿ ಮೋದಿ ಆಗಮನ ಬಗ್ಗೆ ನಿರ್ದಿಷ್ಟ ದಿನಾಂಕ ಗೊತ್ತುಪಡಿಸಿಲ್ಲ. ಪ್ರಧಾನಿ ಮಾತ್ರವಲ್ಲದೇ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ, ಮಾಜಿ ಸಿಎಂ ಬಿಎಸ್ ವೈ ಜೋಶಿ ಅವರ ಪರ ಸದ್ಯದಲ್ಲೇ ಪ್ರಚಾರ ನಡೆಸಲಿದ್ದಾರೆ.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications