ಕರ್ನಾಟಕದ ಬಡವರ ಹಸಿವು ನೀಗಿಸಿದ್ದು ಕೇಂದ್ರ ಸರ್ಕಾರ-ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ, ಏಪ್ರಿಲ್ 28: ರಾಜ್ಯ ಕಾಂಗ್ರೆಸ್ ಸರ್ಕಾರ 10 ಕೆಜಿ ಅಕ್ಕಿ ಕೊಡದೇ ಇದ್ದರೂ ಜನ ಹಸಿವಿನಿಂದ ಬಳಲು ಕೇಂದ್ರ ಬಿಡಲಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ಸರ್ಕಾರ ವಿರುದ್ಧ ಕಿಡಿಕಾರಿದರು.
ಶಿಗ್ಗಾವಿ- ಸವಣೂರು ವಿಧಾನಸಭಾ ಕ್ಷೇತ್ರದ ಶಿಶುವಿನಹಾಳ, ಹಿರೇಮಲ್ಲೂರ, ಹನುಮನಹಳ್ಳಿ ಮತ್ತು ವನಹಳ್ಳಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಹಸಿವುಮುಕ್ತ ಕರ್ನಾಟಕ ಮಾಡುತ್ತೇವೆ. 10 ಕೆಜಿ ಅಕ್ಕಿ ಕೊಡುತ್ತೇವೆ ಎಂದೆಲ್ಲಾ ಗ್ಯಾರೆಂಟಿ ಘೋಷಣೆ ಮಾಡಿದ ಕಾಂಗ್ರೆಸ್ ಸರ್ಕಾರ ಜನಕ್ಕೆ ಕೈ ಕೊಟ್ಟಿತು. ಆದರೆ ನಿಜವಾಗಿ ಹಸಿವು ನೀಗಿಸಿದ್ದು ಕೇಂದ್ರದ 'ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ' ಎಂದು ಹೇಳಿದರು.

ಸದ್ಯದ ಬರ ಪರಿಸ್ಥಿತಿಯಲ್ಲಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರವೊಂದರಲ್ಲೇ ಸರಿಸುಮಾರು 15 ಲಕ್ಷ ಫಲಾನುಭವಿಗಳಿಗೆ ಗರೀಬ್ ಕಲ್ಯಾಣ್ ಅನ್ನ ಯೋಜನೆ ಆಸರೆಯಾಗಿದೆ. ಆದರೆ, 'ಹತ್ತು ಕೇಜಿ ಅಕ್ಕಿ.. ಬೇಕಾ... ಬೇಡ್ವಾ..? ಎಂದು ಗ್ಯಾರೆಂಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ ಅವರು ಜನರ ಹಸಿವು ನೀಗಿಸುವಲ್ಲಿ ನಿಜವಾದ ಕಾಳಜಿ ತೋರಲಿಲ್ಲ ಎಂದು ಸಚಿವ ಜೋಶಿ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಬರ ಭೀಕರತೆ ಇದ್ದರೂ ಜನತೆ ಅಷ್ಟಾಗಿ ಸಂಕಷ್ಟಕ್ಕೆ ಸಿಲುಕಲಿಲ್ಲ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮೂಲಕ ನರೇಂದ್ರ ಮೋದಿ ಅವರು ಕಾಪಾಡಿದ್ದಾರೆ. ಬಡವರ ಉದ್ಧಾರಕ್ಕಾಗಿ ಶ್ರಮಿಸುತ್ತಿರುವ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಶಿವಾನಂದ ಮ್ಯಾಗೇರಿ, ಶ್ರೀಕಾಂತ ದುಂಡೀಗೌಡರ, ಶಶಿಧರ ಯಲಿಗಾರ, ತಿಪ್ಪಣ್ಣ ಸಾತಣ್ಣವರ, ಪ್ರಸಾದ ಸುರಗಿಮಠ, ರವಿ ಕುಡೊಕ್ಕಲಿಗಾರ , ಬಸವರಾಜ್ ನಾರಾಯಣಪುರ , ಶ್ರೀಕಾಂತ ಬುಳ್ಳಕ್ಕನವರ, ದೇವಣ್ಣ ಚಾಕಲಬ್ಬಿ, ಶಂಕರ ಪೊಲೀಸ್ ಗೌಡ್ರು, ಹೊನ್ನಪ್ಪ ಹೂಗಾರ, ಸೋಮಯ್ಯ ಗೌರಿಮಠ, ಅರ್ಜುನ ಹಂಚಿನಮನಿ ಹಾಗು ಪಕ್ಷದ ಪ್ರಮುಖರು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications