Dharwad Result: ದಿಂಗಾಲೇಶ್ವರ ಶ್ರೀಗಳ ಆಶೀರ್ವಾದಿಂದ ನನಗೆ ಗೆಲುವು: ಪ್ರಹ್ಲಾದ್ ಜೋಶಿ ಹೇಳಿದ್ದೇನು?
ಧಾರವಾಡ, ಜೂನ್ 04: ಧಾರವಾಡ ಕ್ಷೇತ್ರದಲ್ಲಿ ನನ್ನ ಪ್ರತಿಸ್ಪರ್ಧಿಗಳು ಅಪಪ್ರಚಾರ ಮಾಡುತ್ತಾ ಬಂದರು. ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳ ಮಾಡಿಯೇ ಇಲ್ಲ ಎಂದು ಸುಳ್ಳು ಹೇಳಿದರು. ಇಂದು ಬಿಜೆಪಿಗೆ ಗೆಲುವಾಗಿದೆ. ಈ ಗೆಲುವು ಮತದಾರ ಪ್ರಭುಗಳಿಗೆ ಸಲ್ಲಬೇಕು ಎಂದು ಧಾರವಾಡದಿಂದ ಐದನೇ ಭಾರಿಗೆ ಸಂಸತ್ಗೆ ಆಯ್ಕೆ ಆದ ಬಿಜೆಪಿ ವಿಜೇತ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಅವರು ಹೇಳಿದರು.
ಮತ ಎಣಿಕಾ ಕೇಂದ್ರದ ಬಳಿ ಅವರು ಸುದ್ದಿಗಾರರ ಜೊತೆ ಮಾತನಾಡಿ, ಪ್ರತಿ ಸ್ಪರ್ಧಿಗಳ ಸುಳ್ಳು ಹೇಳಿಕೆಗಳ ವಿರುದ್ಧ ಅಸಮಧಾನ ವ್ಯಕ್ತಪಡಿಸಿದರು. ನಮ್ಮ ಕ್ಷೇತ್ರದ ಜನತೆಗೆ ಧನ್ಯವಾದಗಳು ಸಲ್ಲಿಸುತ್ತೇನೆ ಜನತಾ ಜನಾರ್ದನ ಆಶಿರ್ವಾದ ದಿಂದ ಗೆಲುವಾಗಿದೆ. ಮತದಾರ ಪ್ರಭುಗಳಿಗೆ ಈ ಗೆಲುವು ಸಲ್ಲಬೇಕು. ಎಲ್ಲ ಕಾರ್ಯಕರ್ತರು ಮುಖಂಡರು ಸೇರಿ ಸಮರ್ಪಕವಾಗಿ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಧಾರವಾಡದಲ್ಲಿ ಪ್ರತಿಸ್ಪರ್ಧಿಗಳು ಅಪಪ್ರಚಾರ ಮಾಡುತ್ತಾ ಬಂದರು. ಸಾಕಷ್ಟು ಹಣ ಹೆಂಡವನ್ನ ಹಂಚಿದ್ದಾರೆ. ಆದರೆ ಜನರು ನಮ್ಮ ಕೈ ಹಿಡಿದಿದ್ದಾರೆ. ಕರ್ನಾಟಕದ ಜನರು ಈಗಾಗಲೇ ಬಿಜೆಪಿಗೆ ಆಶಿರ್ವಾದ ಮಾಡಿದ್ದಾರೆ. ಈಗಾಗಲೇ ದೇಶದಲ್ಲಿ 300 ಗಡಿ ತಲುಪಿದ್ದೇವೆ. ನಿರೀಕ್ಷೆ ತಕ್ಕಂತೆ ನಾವು ಅಂದುಕೊಂಡಂತೆ ಸೀಟು ಬಂದಿಲ್ಲ
ಎಲ್ಲಿ ಏನು ಆಗಿದೆ ಎಂಬ ವಾಸ್ತವಿವನ್ನು ನೋಡಬೇಕಾಗಿದೆ. ಆದಷ್ಟು ಶೀಘ್ರವೇ ದೆಹಲಿಗೆ ತೆರಳುತ್ತೇನೆ. ಈ ಬಗ್ಗೆ ವರಿಷ್ಠರ ಜೊತೆಗೆ ಚರ್ಚಿಸುತ್ತೇ. ದೇಶದಲ್ಲಿ ಚುನಾವಣಾ ಆಗಿದ್ದು ಎನ್ಡಿಎ ಹಾಗೂ 'ಇಂಡಿ' ಮೈತ್ರಿ ಮದ್ಯೆ. ಆದ್ದರಿಂದ ನಮ್ಮ ಜೊತೆಗೆ ನಿಂತವರು ಗಟ್ಟಿಯಾಗಿ ನಿಲ್ಲುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಧಾರವಾಡದಲ್ಲಿ ಈ ಬಾರಿ ಗೆಲುವಿನ ಅಂತರ ಕಡಿಮೆ ಆಗಿದ್ದರ ಪ್ರಶ್ನೆಗೆ ಉತ್ತರಿಸಿದ ಅವರು, ಪರ್ಸೆಂಟೇಜ್ ಓಟ್ ಗಳು ಕಡಿಮೆಯಾಗಿರುವ ಕಾರಣ ಲೀಡ್ ಕಡಿಮೆ ಆಗಿದೆ. ಈಗಾಗಲೇ ನಾವು ಕೈಗೊಂಡಿರುವ ಕಾಮಗಾರಿಗಳ ಮುಂದುವರೆಸಿಕೊಂಡು ಹೋಗುತ್ತೇವೆ. ನನ್ನ ಖಾತೆಯನ್ನ ಸರಿಯಾಗಿ ನಿಭಾಯಿಸಿದ್ದೇನೆ ಎಂದು ಅವರು ಕ್ಷೇತ್ರದಲ್ಲಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡರು.
ದಿಂಗಾಲೇಶ್ವರ ಶ್ರೀಗಳ ಆಶೀರ್ವಾದದಿಂದ ಗೆಲುವು: ಜೋಶಿ
ಮುಂದಿನ ಐದು ವರ್ಷ ನನಗೆ ಮಂತ್ರಿಯಾಗಲು ಪ್ರಧಾನಿ ನರೇಂದ್ರ ಮೋದಿಯವರು ಅವಕಾಶ ಮಾಡಿಕೊಟ್ಟಿದ್ದಾರೆ. ಚುನಾವಣೆಗೂ ಮೊದಲು ದಿಂಗಾಲೇಶ್ವರ ಸ್ವಾಮೀಜಿ ಆರೋಪ ಕುರಿತು ಸಹ ಪ್ರತಿಕ್ರಿಯೆ ಕೊಟ್ಟ ಅವರು
ದಿಂಗಾಲೇಶ್ವರ ಶ್ರೀಗಳ ಅವರ ಆಶೀರ್ವಾದದಿಂದ ನಾನು ಗೆದ್ದಿದ್ದೇನೆ ಎಂದು ಅವರು ತಿಳಿಸಿದರು.
ಚುನಾವಣೆ ಮೊದಲು ದಿಂಗಾಲೇಶ್ವರ ಶ್ರೀಗಳು ಪ್ರಹ್ಲಾದ್ ಜೋಶಿ ವಿರುದ್ಧ ಬಂಡಾವೆದ್ದಿದ್ದರು. ನಂತರ ಪಕ್ಷೇತರ ಸ್ಪರ್ಧೆಗೆ ಮನಸ್ಸು ಮಾಡಿ ಬಿಜೆಪಿ ವಿರುದ್ಧ ನಾಮಪತ್ರ ಸಲ್ಲಿಸಿದ್ದರು. ಇತ್ತ ಕಾಂಗ್ರೆಸ್ನಿಂದ ವಿನೋದ್ ಅಸೂಟಿ ಅವರಿಗೆ ಪಕ್ಷ ಟಿಕೆಟ್ ನೀಡಿತ್ತು. ಸ್ವಾಮೀಜಿಗೆ ಕಣಕ್ಕೆ ಇಳಿಯುತ್ತಾರೆ ಎಂಬ ಸುದ್ದಿ ಗೊತ್ತಾಗುತ್ತಿದ್ದಂತೆ ಕಾಂಗ್ರೆಸ್ ಅವರ ಪರ ರಾಜಕೀಯ ಒಲವು ವ್ಯಕ್ತಪಡಿಸಿತ್ತು. ಈ ವೇಳೆ ಪ್ರತಿ ಹಂತದಲ್ಲೂ ದಿಂಗಾಲೇಶ್ವರ ಶ್ರೀಗಳ ಟೀಕೆಗಳು ನನಗೆ ಆಶೀರ್ವಾದ ಎನ್ನುತ್ತಿದ್ದ ಪ್ರಹ್ಲಾದ್ ಜೋಶಿವಯರಿಗೆ ಧಾರವಾಡ ಜನರು ಬಹುಪರಾಕ್ ಹೇಳಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications