ಅಂಜುಮನ್ ಸಂಸ್ಥೆ ಉದ್ಧಟತನ ತೊರಿದ್ರೆ,ನಮಾಜ್ ಅವಕಾಶ ರದ್ದಿಗೆ ಕೋರ್ಟ್ಗೆ ಹೋಗುತ್ತೇವೆ-ಮುತಾಲಿಕ್
ಧಾರವಾಡ, ಸೆಪ್ಟೆಂಬರ್ 15: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಐದು ವರ್ಷಗಳ ಅವಧಿಗೆ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವ ಸಂಬಂಧ ಪಾಲಿಕೆ ಹೊರಡಿಸಿದ್ದ ಠರಾವು ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆಯು ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ.
ಈ ಬಗ್ಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿದ್ದು, ಕಳೆದ ವರ್ಷವೇ ನ್ಯಾಯಾಲಯ ಅನುಮತಿ ನೀಡಿತ್ತು. ಇಷ್ಟಾದರೂ ಅಂಜುಮನ್ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿತ್ತು. ನ್ಯಾಯಾಲಯ ಮುಟ್ಟಿ ನೋಡುವ ರೀತಿಯಲ್ಲಿ ತೀರ್ಪು ಕೊಟ್ಟಿದೆ ಎಂದು ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದರು.

ಅಂಜುಮನ್ ಸಂಸ್ಥೆ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ನೀಡಿದೆ. ಆ ಹಿನ್ನೆಲೆಯಲ್ಲಿ ಅಂಜುಮನ್ ಸಂಸ್ಥೆ ಪದೇಪದೇ ನ್ಯಾಯಾಲಯದ ಮೊರೆ ಹೋಗುತ್ತಿದೆ. ಈ ತೀರ್ಪಿನಿಂದಾಗಿ ಅಂಜುಮನ್ ಸಂಸ್ಥೆಗೆ ಮುಖಭಂಗವಾಗಿದೆ. ಅಂಜುಮನ್ ಸಂಸ್ಥೆ ಇದೇ ರೀತಿ ಉದ್ಧಟತನ ತೋರಿದರೆ ನಮಾಜ್ಗೂ ಅಡ್ಡಿಪಡಿಸಬೇಕಾಗುತ್ತದೆ. ವರ್ಷದಲ್ಲಿ ಎರಡು ಬಾರಿ ನಮಾಜ್ಗೆ ನೀಡಿರುವ ಅವಕಾಶ ರದ್ದು ಮಾಡುವಂತೆ ನ್ಯಾಯಾಲಯ ಮೊರೆ ಹೋಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಗಣೇಶ ಅಂದರೆ ವಿಘ್ನ ನಿವಾರಕ. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ದೇಶದ ಯಾವುದೇ ಮೂಲೆಯಲ್ಲಿ ವಿರೋಧವಿಲ್ಲ. ಆದರೆ ಇಲ್ಲಿ ಮಾತ್ರ ವಿರೋಧ ವ್ಯಕ್ತವಾಗುತ್ತಿತ್ತು. ಈಗ ಅದಕ್ಕೂ ಪೂರ್ಣವಿರಾಮ ಬಿದ್ದಂತಾಗಿದೆ. ಅಂಜುಮನ್ ಸಂಸ್ಥೆ ಮತ್ತು ಕಾಂಗ್ರೆಸ್ ಸರ್ಕಾರ ಪಾಠ ಕಲಿಯಬೇಕು. ಶಾಂತಿ ಸುವ್ಯವಸ್ಥೆ ಹೆಸರು ಹೇಳಿ ಏನಾದರೂ ಅವಕಾಶ ನೀಡದಿದ್ದಲ್ಲಿ ಮತ್ತೆ ಹೋರಾಡಬೇಕಾಗುತ್ತದೆ. ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಶತಸಿದ್ಧ ಎಂದರು.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಐದು ವರ್ಷಗಳ ಕಾಲ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲು ಪಾಲಿಕೆಯಲ್ಲಿ ಠರಾವು ಪಾಸು ಮಾಡಲಾಗಿತ್ತು. ಈ ಠರಾವನ್ನು ಪ್ರಶ್ನಿಸಿ ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆಯು ಈ ಠರಾವಿಗೆ ತಡೆಯಾಜ್ಞೆ ನೀಡುವಂತೆ ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಇಂದು ಪ್ರಕರಣದ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠ ಅಂಜುಮನ್ ಇಸ್ಲಾಂ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಆ ಮೂಲಕ ಈದ್ಗಾ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡುವುದು ಪಾಲಿಕೆಗೆ ಬಿಟ್ಟಂತಾಗಿದೆ.

-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications