ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧಾರವಾಡದ ಭೀಕರ ಅಪಘಾತಕ್ಕೆ ಪ್ರಧಾನಿ ಮೋದಿ ತೀವ್ರ ಸಂತಾಪ

|
Google Oneindia Kannada News

ಧಾರವಾಡ, ಜನವರಿ 15: ಧಾರವಾಡ ತಾಲೂಕಿನ ಇಟಿಗಟ್ಟಿ ಬಳಿ ಶುಕ್ರವಾರ ಬೆಳಿಗ್ಗೆ ನಡೆದ ಟ್ರಕ್ ಮತ್ತು ಟೆಂಪೋ ಟ್ರಾವೆಲರ್ ಮುಖಾಮುಖಿ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಈ ದುರ್ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಧಾರವಾಡ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಪಿಎಂಒ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಸಂದೇಶ ಕಳುಹಿಸಿದ್ದಾರೆ.

ದಾವಣಗೆರೆ; 13 ಕುಟುಂಬಗಳಿಗೆ ಆಘಾತ ತಂದ ಧಾರವಾಡದ ಅಪಘಾತ ದಾವಣಗೆರೆ; 13 ಕುಟುಂಬಗಳಿಗೆ ಆಘಾತ ತಂದ ಧಾರವಾಡದ ಅಪಘಾತ

ಪ್ರಧಾನಮಮಂತ್ರಿ ಕಚೇರಿಯ ಟ್ವೀಟ್ ಸಂದೇಶದಲ್ಲಿ "ಕರ್ನಾಟಕದ ಧಾರವಾಡ ಜಿಲ್ಲೆಯ ರಸ್ತೆ ಅಪಘಾತದಲ್ಲಿ ಜೀವ ಹಾನಿಯಾಗಿರುವುದು ದುಃಖಕರ ವಿಚಾರ. ಈ ಸಮಯದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ.'' ಎಂದು ಹೇಳಿದ್ದಾರೆ.

Prime Minister Narendra Modi Deeply Condolence The Horrific Accident In Dharawad

Recommended Video

BJP ಸರ್ಕಾರದ ಬಗ್ಗೆ Munirathna ಗೆ ನಂಬಿಕೆ ಇಲ್ವಾ ?? | Oneindia Kannada

ಶುಕ್ರವಾರ ಬೆಳಿಗ್ಗೆ ಧಾರವಾಡ ತಾಲ್ಲೂಕಿನಲ್ಲಿ ನಡೆದ ಭೀಕರ ಅಪಘಾತದಲ್ಲಿ 10 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತವಾಗಿ ಎಲ್ಲರೂ ಗೋವಾಕ್ಕೆ ಹೋಗುತ್ತಿದ್ದರು. ಮೃತರೆಲ್ಲರೂ ದಾವಣಗೆರೆ ನಿವಾಸಿಗಳಾಗಿದ್ದಾರೆ.

English summary
Prime Minister Narendra Modi has expressed his deepest condolences to those who died in a road accident in Dharwad district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X