ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದಿಂದ ಯಡವಟ್ಟು, ಬಿಕಾಂ ವಿದ್ಯಾರ್ಥಿಗಳಿಗೆ ಆಪತ್ತು
ಧಾರವಾಡ, ಡಿಸೆಂಬರ್, 09: ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸದಾ ಒಂದಿಲ್ಲೊಂದು ಯಡವಟ್ಟು ಆಗುತ್ತಲೇ ಇರುತ್ತದೆ. ಇದೀಗ ಯುಜಿ ಪರೀಕ್ಷೆಯ ಅಂಕಪಟ್ಟಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ದೊಡ್ಡ ಯಡವಟ್ಟು ಮಾಡಿಕೊಂಡಿದೆ. ಬಿಕಾಂ ಕೋರ್ಸ್ನ ಅಂತಿಮ ವರ್ಷದ ಪರೀಕ್ಷಾ ಫಲಿತಾಂಶದ ಅಂಕಪಟ್ಟಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಯಡವಟ್ಟು ಮಾಡಿಕೊಂಡಿದ್ದು, ಇದೀಗ ಅದನ್ನು ಸರಿಪಡಿಸಿಕೊಳ್ಳಲು ಮುಂದಾಗಿದೆ.
ಕೋರ್ಸ್ ವಿಷಯ ಅಲ್ಲದ ಅಂಕಗಳ ಸೇರ್ಪಡೆ
ಬಿಕಾಂ ವಿದ್ಯಾರ್ಥಿಗಳ ಅಂತಿಮ ವರ್ಷದ ಒಟ್ಟಾರೆ ಪರೀಕ್ಷಾ ಫಲಿತಾಂಶಕ್ಕೆ ಕೋರ್ಸ್ ವಿಷಯ ಅಲ್ಲದ ಅಂಕಗಳನ್ನು ಸೇರ್ಪಡೆ ಮಾಡಿದೆ. ಕಡ್ಡಾಯ ಕನ್ನಡ ವಿಷಯದ ಅಂಕಗಳನ್ನು ಸೇರ್ಪಡೆ ಮಾಡುವ ಮೂಲಕ ದೊಡ್ಡ ಯಡವಟ್ಟು ಮಾಡಿಕೊಂಡಿದೆ. ಈ ರೀತಿಯ ಸುಮಾರು 15 ಸಾವಿರ ಅಂಕಪಟ್ಟಿಗಳನ್ನು ಮುದ್ರಣ ಮಾಡಿತ್ತು. ಕರ್ನಾಟಕ ವಿಶ್ವವಿದ್ಯಾಲಯ ಪರೀಕ್ಷಾ ವಿಭಾಗ, ಇದೀಗ ತನ್ನ ತಪ್ಪನ್ನು ತಿದ್ದಿಕೊಳ್ಳುವ ಕೆಲಸಕ್ಕೆ ಮುಂದಾಗಿದೆ.

ತಪ್ಪು ಮಾಡಿದವರಿಗೆ ದಂಡ
ಯುಜಿ ವಿಭಾಗದಲ್ಲಿ ಮೊದಲು ಕನ್ನಡ ಕಲಿ ಎಂಬ ವಿಷಯವಿತ್ತು. ಅದನ್ನು ಈಗ ಕಡ್ಡಾಯ ಕನ್ನಡ ಎಂದು ಮಾಡಲಾಗಿದೆ. ಆದರೆ ಕಡ್ಡಾಯ ಕನ್ನಡ ಒಂದು ವಿಷಯ ಅಲ್ಲ. ಆದರೂ ಅದರ ಅಂಕಗಳನ್ನು ವಿದ್ಯಾರ್ಥಿಗಳ ಒಟ್ಟಾರೆ ಫಲಿತಾಂಶಕ್ಕೆ ಸೇರ್ಪಡೆ ಮಾಡಲಾಗಿದೆ. ಈ ತಪ್ಪು ಮಾಡಿದವರಿಗೆ ದಂಡ ವಿಧಿಸಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಇನ್ನು ಅಂಕಪಟ್ಟಿ ವಿತರಣೆ ಮಾಡದೇ ಇರುವುದರಿಂದ ಎಲ್ಲವನ್ನೂ ಮತ್ತೊಮ್ಮೆ ಸರಿಪಡಿಸಿಕೊಳ್ಳಲಾಗುತ್ತಿದೆ ಎಂದು ಮೌಲ್ಯಮಾಪನ ಕುಲಸಚಿವ ಪ್ರೊ. ಸಿ. ಕೃಷ್ಣಮೂರ್ತಿ ತಿಳಿಸಿದರು.

ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿತರಣೆ ಮಾಡುವ ಮೊದಲೇ ಈ ತಪ್ಪು ವಿಶ್ವ ವಿದ್ಯಾಲಯದ ಆಡಳಿತ ಮಂಡಳಿಯ ಗಮನಕ್ಕೆ ಬಂದಿದೆ. ಇದೀಗ ಅಂಕಪಟ್ಟಿಯಲ್ಲಿ ಆದ ಈ ಯಡವಟ್ಟಿನಿಂದ ಪಾಸಿಂಗ್ ಸರ್ಟಿಫಿಕೇಟ್ನಲ್ಲೂ ಶೇಕಡಾ 5ರಷ್ಟು ವ್ಯತ್ಯಾಸ ಆಗಲಿದೆ. ಅದನ್ನೂ ಸರಿಪಡಿಸುವ ಕೆಲಸ ನಡೆದಿದಿದ್ದು, ಒಟ್ಟಾರೆ ಈ ತಪ್ಪಿನಿಂದಾಗಿ ಸಮಯ, ಹಣ ಎಲ್ಲವೂ ವ್ಯರ್ಥವಾದಂತಾಗಿದೆ.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications