Chigari Bus: ಅವಳಿನಗರದಲ್ಲಿ ಬಿಆರ್ಟಿಎಸ್ನಿಂದ ಸಮಸ್ಯೆ ಆಗುತ್ತಿದೆಯೇ?: ಬೇಡಿಕೆಗಳೇನು
ಧಾರವಾಡ, ಜುಲೈ 15: ವಾಣಿಜ್ಯ ನಗರಿ ಮತ್ತು ವಿದ್ಯಾಕಾಶಿಗೆ ಸಂಪರ್ಕ ಕಲ್ಪಿಸಿರುವ ಮತ್ತು ಜನರಿಗೆ ವ್ಯಾಪಕ ಮೆಚ್ಚುಗೆ ಪಡೆದುಕೊಂಡಿರುವ ಬಿಆರ್ಟಿಎಸ್ ಚಿಗರಿ ಬಸ್ ಯೋಜನೆ ಇತ್ತೀಚೆಗೆ ಹಲವು ವಿಚಾರಗಳಿಗೆ ಸುದ್ದಿಯಾಗುತ್ತಿದೆ.
ಧಾರವಾಡ ಹುಬ್ಬಳ್ಳಿ, ಧಾರವಾಡ ಅವಳಿನಗರಗಳ ಮಧ್ಯೆ ಅನುಷ್ಠಾನಗೊಂಡಿರುವ ಬಿಆರ್ಟಿಎಸ್ ಯೋಜನೆ ಪ್ರತಿದಿನ ಒಂದಿಲ್ಲೊಂದು ರೀತಿಯಲ್ಲಿ ಸುದ್ದಿಯಾಗುತ್ತಿದೆ. ಬಿಆರ್ಟಿಎಸ್ನಿಂದ ಹಾಕಿರುವ ಬ್ಯಾರಿಕೇಡ್ ಕಳಪೆ ಇರುವುದರಿಂದಲೋ, ಚಿಗರಿ ಬಸ್ಗಳು ಸಾರ್ವಜನಿಕರ ಮೈಮೇಲೆಯೇ ಏರಿ ಬರುವುದರಿಂದಲೋ ಆ ರಸ್ತೆಯಲ್ಲಿ ಅಪಘಾತ ನಡೆಯುತ್ತಿರುವುದರಿಂದಲೋ ಆಕ್ರೋಶಕ್ಕೆ ಗುರಿಯಾಗುತ್ತಿದೆ.

ಅವಳಿನಗರ ಬೆಳೆದಂತೆಲ್ಲ ವಾಹನಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಹುಬ್ಬಳ್ಳಿ ಧಾರವಾಡ ನಗರಗಳ ಮಧ್ಯೆ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ. ಚಿಗರಿ ಬಸ್ಗೆ ಪ್ರತ್ಯೇಕ ರಸ್ತೆಯ ವ್ಯವಸ್ಥೆ ಇದ್ದು ಆ ರಸ್ತೆಯಲ್ಲಿ ಚಿಗರಿ ಬಸ್ಗಳಲ್ಲದೇ ಖಾಸಗಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿಲ್ಲ. ಆ ನಿಗದಿತ ರಸ್ತೆಯಲ್ಲಿ ಬಿಆರ್ಟಿಎಸ್ ಬಸ್ಗಳು ಮಾತ್ರವೇ ಸಂಚರಿಸಬೇಕೆಂಬ ನಿಯಮ ಇದೆ.
ಧಾರವಾಡದಿಂದ ಪಾದಯಾತ್ರೆ, ಹೋರಾಟ
ಇದರಿಂದ ಅಪಘಾತಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿವೆ. ಹೀಗಾಗಿ ಕೆಲ ಪ್ರದೇಶಗಳಲ್ಲಿ ಖಾಸಗಿ ವಾಹನಗಳ ಸಂಚಾರಕ್ಕೆ ಬಿಆರ್ಟಿಎಸ್ ರಸ್ತೆಯಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಧಾರವಾಡ ಧ್ವನಿ ಎಂಬ ಪಕ್ಷಾತೀತ ಹೋರಾಟ ಸಂಘಟನೆಯೊಂದು ಪಾದಯಾತ್ರೆ ಮಾಡಿ ಆಗ್ರಹಿಸಿದೆ.
ಬೇಡಿಕೆಗಳು ಏನು?
ಪ್ರತಿದಿನ ಶೇ.95 ರಷ್ಟು ಸಮಯ ಬಿಆರ್ಟಿಎಸ್ ರಸ್ತೆ ಖಾಲಿಯಾಗಿಯೇ ಇರುತ್ತವೆ. ಸಾರ್ವಜನಿಕ ರಸ್ತೆ ಪ್ರತಿದಿನ ವಾಹನಗಳಿಂದ ಕಿಕ್ಕಿರಿದು ತುಂಬಿರುತ್ತವೆ. ಆದ್ದರಿಂದ ಬಿಆರ್ಟಿಎಸ್ ರಸ್ತೆಯಲ್ಲಿ ಧಾರವಾಡ ಜ್ಯುಬಿಲಿ ವೃತ್ತದಿಂದ ನವಲೂರಿನವರೆಗೆ, ಉಣಕಲ್ನಿಂದ ರಾಣಿ ಚೆನ್ನಮ್ಮ ವೃತ್ತದವರೆಗೂ ಬೈಕ್, ಆಟೊ, ಕಾರು ಮತ್ತು ಲಘು ವಾಹನಗಳು ಸಂಚರಿಸಲು ಅನುಮತಿ ನೀಡಬೇಕು. ಇದರಿಂದ ನಗರದ ದಟ್ಟಣೆ ಕಡಿಮೆ ಆಗಲಿದೆ ಎಂದು ಹೋರಾಟಗಾರರು ಆಗ್ರಹಿಸಿದರು.

ಧಾರವಾಡ ಧ್ವನಿ ಸಂಘಟನೆ ಸದಸ್ಯರು ನವಲೂರಿನಿಂದ ಬಿಆರ್ಟಿಎಸ್ ರಸ್ತೆಯಲ್ಲೇ ಧಾರವಾಡ ಡಿಸಿ ಕಚೇರಿವರೆಗೂ ಪಾದಯಾತ್ರೆ ನಡೆಸುವ ಮೂಲಕ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಬಸ್ ಮುಂದೆ ಮಲಗಿ, ತೆಂಗಿನ ಕಾಯಿ ಒಡೆದು ಆಕ್ರೋಶ
ಈ ಪಾದಯಾತ್ರೆಗೆ ಜೆಎಸ್ಎಸ್ ಸಂಸ್ಥೆ ಕೂಡ ಬೆಂಬಲ ನೀಡಿತು ನವಲೂರಿನಿಂದ ಪಾದಯಾತ್ರೆ ಬರುತ್ತಿದ್ದ ಸಂದರ್ಭದಲ್ಲಿ ಚಿಗರಿ ಬಸ್ ಮಧ್ಯೆ ಬಂದಿದ್ದಕ್ಕೆ ಆಕ್ರೋಶಗೊಂಡ ಹೋರಾಟಗಾರರು ಆ ಚಿಗರಿ ಬಸ್ಗೆ ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೇ ಚಿಗರಿ ಬಸ್ಗೆ ಪೂಜೆ ಮಾಡಿ ಅದರ ಮುಂದೆ ತೆಂಗಿನಕಾಯಿ ಒಡೆದು ವಿಭಿನ್ನ ರೀತಿಯಲ್ಲಿ ಹೋರಾಟ ನಡೆಸಿದರು. ಒಟ್ಟಾರೆ ಬಿಆರ್ಟಿಎಸ್ ಯೋಜನೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ ಸಮಸ್ಯೆ ಬಗೆಹರಿಸಬೇಕು ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಒಂದು ಸಮಿತಿ ರಚಿಸಬೇಕು. ಆ ಸಮಿತಿಯಲ್ಲಿ ಸಾರ್ವಜನಿಕರನ್ನೂ ಸೇರಿಸಿ ಶೀಘ್ರ ಮತ್ತು ಸುರಕ್ಷಿತ ಪ್ರಯಾಣಕ್ಕೆ ಅನುವು ಮಾಡಿಕೊಡಬೇಕು ಎಂದು ಹೋರಾಟಗಾರರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications