ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆತ್ಮಹತ್ಯೆ ಮಾಡಿಕೊಂಡ ದ್ವೀತಿಯ ಪಿಯುಸಿ ವಿದ್ಯಾರ್ಥಿ

|
Google Oneindia Kannada News

ಧಾರವಾಡ, ಮಾರ್ಚ್ 7: ದ್ವಿತೀಯ ಪಿಯುಸಿ ಪರೀಕ್ಷೆ ಚೆನ್ನಾಗಿ ಬರೆದಿಲ್ಲ ಎಂದು ಮನನೊಂದ ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ.

ಧಾರವಾಡದ ಧಾನೇಶ್ವರ ನಗರದಲ್ಲಿ ಶುಕ್ರವಾರ ಸಂಜೆ ಈ ಘಟನೆ ಸಂಭವಿಸಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾಗರ ಗಾಣಿಗ ( 17 ) ಸಾವಿಗೆ ಶರಣಾದ ರ್ದುದೈವಿ.

ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿ ಗಂಟೆಯಲ್ಲೇ ಪ್ರಶ್ನೆ ಪತ್ರಿಕೆ ಸೋರಿಕೆದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿ ಗಂಟೆಯಲ್ಲೇ ಪ್ರಶ್ನೆ ಪತ್ರಿಕೆ ಸೋರಿಕೆ

ಬೆಳಗಾವಿ ತಾಲೂಕಿನ ಕೆ . ಕೆ . ಕೊಪ್ಪ ಗ್ರಾಮದ ಸಾಗರ ನಗರದ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ. ಸಾಗರ , ಬುಧವಾರ ಬರೆದ ಪರೀಕ್ಷೆಯಲ್ಲಿ 15 ಅಂಕಗಳಿಗೆ ಉತ್ತರಿಸಲು ಆಗಿಲ್ಲ ಎಂದು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ.

PUC Student Committed Suicide In Dharwad

ಇದರಿಂದಾಗಿ ಮನಸ್ಸಿಗೆ ಆಘಾತ ಮಾಡಿಕೊಂಡು ದಾನೇಶ್ವರಿ ನಗರದಲ್ಲಿ ಓದಲು ಮಾಡಿದ್ದ ರೂಮ್‌ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Secondary PUC Student Committed Suicide In Dharwad. 17 year old student sagar ganiga Committed Suicide.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X