ಆತ್ಮಹತ್ಯೆ ಮಾಡಿಕೊಂಡ ದ್ವೀತಿಯ ಪಿಯುಸಿ ವಿದ್ಯಾರ್ಥಿ
ಧಾರವಾಡ, ಮಾರ್ಚ್ 7: ದ್ವಿತೀಯ ಪಿಯುಸಿ ಪರೀಕ್ಷೆ ಚೆನ್ನಾಗಿ ಬರೆದಿಲ್ಲ ಎಂದು ಮನನೊಂದ ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಧಾನೇಶ್ವರ ನಗರದಲ್ಲಿ ಶುಕ್ರವಾರ ಸಂಜೆ ಈ ಘಟನೆ ಸಂಭವಿಸಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾಗರ ಗಾಣಿಗ ( 17 ) ಸಾವಿಗೆ ಶರಣಾದ ರ್ದುದೈವಿ.
ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿ ಗಂಟೆಯಲ್ಲೇ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ತಾಲೂಕಿನ ಕೆ . ಕೆ . ಕೊಪ್ಪ ಗ್ರಾಮದ ಸಾಗರ ನಗರದ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ. ಸಾಗರ , ಬುಧವಾರ ಬರೆದ ಪರೀಕ್ಷೆಯಲ್ಲಿ 15 ಅಂಕಗಳಿಗೆ ಉತ್ತರಿಸಲು ಆಗಿಲ್ಲ ಎಂದು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ.
ಇದರಿಂದಾಗಿ ಮನಸ್ಸಿಗೆ ಆಘಾತ ಮಾಡಿಕೊಂಡು ದಾನೇಶ್ವರಿ ನಗರದಲ್ಲಿ ಓದಲು ಮಾಡಿದ್ದ ರೂಮ್ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.