ಕರ್ನಾಟಕ ಚುನಾವಣಾ ಫಲಿತಾಂಶ: ನಿಜವಾಯ್ತು ಹನುಮನಕೊಪ್ಪದ ಬೊಂಬೆ ಭವಿಷ್ಯ!
ಧಾರವಾಡ, ಮೇ 15: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಕೊನೆಗೂ ಮುಗಿದಿದೆ. ಯಾರು ಮುಂದಿನ ಸಿಎಂ ಎನ್ನುವ ಪ್ರಶ್ನೆಗೆ ಇನ್ನೇನು ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ. ಆದರೆ ಈ ಬಾರಿ ಹೊಸ ನಾಯಕತ್ವ ಸಿಗುತ್ತದೆ ಎಂದು 2 ತಿಂಗಳ ಹಿಂದೆಯೇ ಧಾರವಾಡದ ಬೊಂಬೆ ಭವಿಷ್ಯ ನುಡಿದಿತ್ತು. ಆ ಭವಿಷ್ಯ ಇದೀಗ ನಿಜವಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಫಲಿತಾಂಶ ಹೊರಬಿದ್ದ ಮೇಲಂತೂ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಒಂದೇ ಪ್ರಶ್ನೆ ಇದೀಗ ಜನರ ಮುಂದಿದೆ. ಆದರೆ ಇದಕ್ಕೂ ಮೊದಲು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲಿದೆ ಅಂತಾ ಧಾರವಾಡದ ಮಣ್ಣಿನ ಬೊಂಬೆ ಭವಿಷ್ಯ ನುಡಿದಿತ್ತು. ಅದರಂತೆ ಇದೀಗ ಹಳೆಯ ಬಿಜೆಪಿ ಸರ್ಕಾರ ಹೋಗಿ ಕಾಂಗ್ರೆಸ್ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಲು ಸಿದ್ಧವಾಗುತ್ತಿದೆ.

ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮಕ್ಕೆ ಹೊಂದಿಕೊಂಡಿರುವ ಹನುಮನಕೊಪ್ಪ ಗ್ರಾಮಸ್ಥರು ಪ್ರತಿವರ್ಷ ಯುಗಾದಿಯಂದು ಒಂದು ಸಂಪ್ರದಾಯ ನಡೆಸಿಕೊಂಡು ಬಂದಿದ್ದಾರೆ. ಅಮವಾಸ್ಯೆಯಂದು ತಮ್ಮ ಗ್ರಾಮದ ಹಳ್ಳದ ದಂಡೆಯ ಮೇಲೆ ಒಂದು ಸಮತಟ್ಟಾದ ಕಲಾಕೃತಿ ಮಾಡಿ ಅದರ ನಾಲ್ಕೂ ದಿಕ್ಕಿಗೆ ರಾಜಕಾರಣದ ಬೊಂಬೆಗಳನ್ನು ಮಾಡಿಡುತ್ತಾರೆ.
ಒಳಗಡೆ ರೈತರು, ಸೈನಿಕರು, ಕಾಳುಗಳನ್ನು ಇಡುತ್ತಾರೆ. ಅಮವಾಸ್ಯೆ ದಿನ ಈ ಆಕೃತಿ ಮಾಡಿಟ್ಟು, ಮಾರನೆ ದಿನ ಅದನ್ನು ನೋಡಲು ಹೋಗುತ್ತಾರೆ. ಈ ಆಕೃತಿಯ ಯಾವ್ಯಾವ ಭಾಗಕ್ಕೆ ಪೆಟ್ಟಾಗಿದೆ ಎಂಬುದನ್ನು ನೋಡಿ ಅದರ ಮೇಲೆ ಆ ಭಾಗದ ಭವಿಷ್ಯವನ್ನು ಇವರು ನಿರ್ಧರಿಸುತ್ತಾರೆ. ಮಳೆ ಹೇಗಿದೆ ಹಾಗೂ ಯಾವ ಬೆಳೆಗೆ ಬೆಲೆ ಸಿಗುತ್ತದೆ ಎಂಬುದನ್ನೂ ಇವರ ನಿರ್ಧರಿಸುತ್ತಾರೆ.
ಪ್ರಸಕ್ತ ವರ್ಷ ಕರ್ನಾಟಕ ದಿಕ್ಕಿನ ರಾಜಕೀಯ ಬೊಂಬೆಯ ಬಲಗಾಲಿಗೆ ಪೆಟ್ಟಾಗಿದ್ದು, ನಮ್ಮ ರಾಜ್ಯದ ನಾಯಕತ್ವ ಬದಲಾವಣೆಯಾಗಬಹುದು ಎಂದು ಊಹಿಸಲಾಗಿದೆ. ಊಹಿಸಲಾಗಿತ್ತು. ಅದರಂತೆ ಬೊಂಬೆ ಭವಿಷ್ಯ ಇದೀಗ ನಿಜವಾಗಿದೆ.

ಒಟ್ಟಾರೆ ಈ ಗ್ರಾಮದಲ್ಲಿ ನಡೆಯುವ ಆಚರಣೆಗೆ ತನ್ನದೇ ಆದ ಪ್ರತೀತಿ ಇದ್ದು, ರಾಜಕೀಯ ಭವಿಷ್ಯವನ್ನ ಸರಿಯಾಗಿ ನುಡಿಯುವ ಗ್ರಾಮ ಅಂತಲೇ ಗುರುತಿಸಿಕೊಂಡಿದೆ. ಈ ಹಿಂದೆ ಕೂಡ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ರಾಷ್ಟ್ರ ರಾಜಕಾರಣದ ಇಂದಿರಾ ಗಾಂಧಿ ಬಗ್ಗೆಯೂ ಈ ಬೊಂಬೆ ನುಡಿದ ಭವಿಷ್ಯ ನಿಜವಾಗಿದೆ ಎನ್ನುವುದು ಸ್ಥಳೀಯರ ಮಾತಾಗಿದೆ. ಈ ಬಾರಿಯ ಚುನಾವಣೆಯ ಫಲಿತಾಂಶ ನೋಡಿದಾಗ ಈ ಬೊಂಬೆ ಭವಿಷ್ಯ ಮತ್ತೊಮ್ಮೆ ನಿಜವಾಗಿದ್ದು, ಜನರಲ್ಲಿ ಈ ಭವಿಷ್ಯದ ಆಚರಣೆ ಮತ್ತಷ್ಟು ನಂಬಿಕೆಯನ್ನು ಹುಟ್ಟು ಹಾಕಿದಂತಾಗಿದೆ.
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications