ರಾಗಿಣಿ ಜೊತೆ ಸಂಬಂಧ ಕಳಚಿಕೊಂಡ ಹು-ಧಾರವಾಡ ಪಾಲಿಕೆ
ಧಾರವಾಡ, ಸೆ. 8: ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಸ್ವಚ್ಛ ಭಾರತ್ ಅಭಿಯಾನ್ ಯೋಜನೆಯಡಿಯ ಕ್ಲೀನ್ ಸಿಟಿ ಅಭಿಯಾನದ ರಾಯಭಾರಿಯಾಗಿದ್ದ ನಟಿ ರಾಗಿಣಿ ದ್ವಿವೇದಿ ಅವರನ್ನು ರಾಯಭಾರಿ ಸ್ಥಾನದಿಂದ ವಜಾಗೊಳಿಸಲಾಗಿದೆ. ಈ ಕುರಿತಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ(HDMC) ಸುರೇಶ್ ಇಟ್ನಾಳ್ ಪ್ರಕಟಣೆ ಹೊರಡಿಸಿದ್ದಾರೆ.
Recommended Video
ನಟಿ ರಾಗಿಣಿ ಅವರು ಅನೇಕ ಜಾಹೀರಾತು, ಸಿನಿಮಾಗಳನ್ನು ಕೂಡಾ ಒಪ್ಪಿಕೊಂಡಿದ್ದಾರೆ. ಆದರೆ, ಇಲ್ಲಿ ತನಕ ಯಾವುದೇ ಸಂಸ್ಥೆಯ ಒಪ್ಪಂದದಿಂದ ರಾಗಿಣಿಯನ್ನು ಹೊರ ಹಾಕಿಲ್ಲ. ಯಾವೊಬ್ಬ ನಿರ್ಮಾಪಕ ಕೂಡಾ ರಾಗಿಣಿ ವಿರುದ್ಧ ದನಿಯೆತ್ತಿಲ್ಲ. ಕರ್ನಾಟಕ ವಾಣಿಜ್ಯ ಮಂಡಳಿ ಕೂಡಾ ಸಾಮಾನ್ಯವಾಗಿ ಯಾವುದೇ ಪ್ರಕರಣದಲ್ಲಿ ದೋಷಿಯೆಂದು ಸಾಬೀತಾದ ಬಳಿಕ ಈ ರೀತಿ ಕ್ರಮ ನಿರೀಕ್ಷಿತವಾಗಿರುತ್ತದೆ.ಆದರೆ, ಸರ್ಕಾರಿ ಸಂಸ್ಥೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಈ ನಿರ್ಧಾರವನ್ನು ಕೈಗೊಂಡಿದೆ.
ಡ್ರಗ್ಸ್ ಜಾಲದ ಜೊತೆ ನಟಿ ರಾಗಿಣಿ ದ್ವಿವೇದಿಗೆ ನಂಟು ಇರುವ ಆರೋಪ ಕೇಳಿ ಬಂದಿದೆ. ಸಿಸಿಬಿ ಕಸ್ಟಡಿಯಲ್ಲಿದ್ದಾರೆ. 2019-20ನೇ ಸಾಲಿಗೆ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಸ್ವಚ್ಛ ಭಾರತ್ ಅಭಿಯಾನ್ ಯೋಜನೆಯ ಸ್ವಚ್ಛ ನಗರ ಕಾರ್ಯಕ್ರಮದ ಬ್ರ್ಯಾಂಡ್ ರಾಯಭಾರಿಯಾಗಿ ಆಯ್ಕೆ ಮಾಡಲಾಗಿತ್ತು. ಕೊರೊನಾ ಹಿನ್ನೆಲೆಯಲ್ಲಿ ಮುಂದಿನ ಅವಧಿಗೂ ಅವರನ್ನೇ ಮುಂದುವರೆಸಲಾಗಿತ್ತು. ಇದೀಗ ಡ್ರಗ್ ಮಾಫಿಯಾದಲ್ಲಿ ಸಿಲುಕಿ, ರಾಗಿಣಿ ಬಂಧನಕ್ಕೆ ಒಳಗಾಗಿದ್ದರಿಂದ ವಜಾ ಮಾಡಲಾಗಿದೆ ಎಂದು ಪಾಲಿಕೆ ಹೇಳಿದೆ.

''ನಮ್ಮ ಮನೆಯನ್ನು ಮೊದಲಿಗೆ ಸ್ವಚ್ಛವಾಗಿರಿಸಿಕೊಂಡರೆ ನಗರವನ್ನು ಸ್ವಚ್ಛವಾಗಿರಿಸಲು ಸಾಧ್ಯ, ಪಾಲಿಕೆ ಹೊರ ತಂದಿರುವ ತ್ಯಾಜ್ಯ ವಿಂಗಡಣೆ, ಮನೆ ಮನೆ ತ್ಯಾಜ್ಯ ಸಂಗ್ರಹಕ್ಕೆ ಪ್ರತಿ ನಾಗರೀಕರು ಸಹಕರಿಸಿದರೆ ಈ ಯೋಜನೆ ಸಾಕಾರಗೊಳ್ಳುತ್ತದೆ'' ಎಂದು ರಾಯಭಾರಿಯಾದ ಸಂದರ್ಭದಲ್ಲಿ ರಾಗಿಣಿ ಹೇಳಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications