ರವಿ ಬೆಳಗೆರೆಗೆ ಎದೆನೋವು: ಧಾರವಾಡದಲ್ಲಿ ಆಸ್ಪತ್ರೆಗೆ ದಾಖಲು
ಅನಾರೋಗ್ಯದಿಂದಾಗಿ ಪತ್ರಕರ್ತ ರವಿ ಬೆಳಗೆರೆ ಅವರು ಧಾರವಾಡದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಸ್ ಡಿಎಂ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಧಾರವಾಡ, ಜೂನ್ 24: ಪೊಲೀಸರಿಂದ ಬಂಧನದ ಭೀತಿ ಎದುರಿಸುತ್ತಿರುವ ಖ್ಯಾತ ಪತ್ರಕರ್ತ ರವಿ ಬೆಳಗೆರೆಯವರಿಗೆ ಶನಿವಾರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಧಾರವಾಡ ಎಸ್ ಡಿಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರವಿ ಬೆಳಗೆರೆಗೆ ವಿಧಿಸಿದ ಶಿಕ್ಷೆ ಖಂಡನಾರ್ಹ: ಸನತ್ ಕುಮಾರ್ ಬೆಳಗಲಿ
ವೈದ್ಯರ ಅಭಿಪ್ರಾಯ ಪಡೆದ ನಂತರ ರವಿ ಬೆಳಗೆರೆಯವರನ್ನು ಮತ್ತೆ ರಾಮನಗರಕ್ಕೆ ಕರೆದೊಯ್ಯಲು ಪೊಲೀಸರು ನಿರ್ಧರಿಸಿದ್ದಾರೆ. ಧಾರವಾಡ ಎಸಿಪಿ ನೇತೃತ್ವದಲ್ಲಿ ಬಂದೋಬಸ್ತ್ ಕಲ್ಪಿಸಲಾಗಿದೆ.
ಬಂಧನದ ಭೀತಿ ಏಕೆ?: ತಮ್ಮ ವಿರುದ್ಧ ಅವಹೇಳನಕಾರಿಯಾಗಿ ವರದಿ ಪ್ರಕಟ ಮಾಡಿದ್ದಾರೆ ಎಂಬ ಕಾರಣಕ್ಕೆ ಕಾಂಗ್ರೆಸ್ ಶಾಸಕ ಶಿರಗುಪ್ಪ ನಾಗರಾಜ್ ಹಕ್ಕು ಬಾಧ್ಯತೆ ಸಮಿತಿಗೆ ದೂರು ನೀಡಿದ್ದರು. ಈ ಆರೋಪ ಕೂಡ ಸಾಬೀತಾಗಿದೆ ಎಂದು ಹಕ್ಕು ಬಾಧ್ಯತೆ ಸಮಿತಿ ನೀಡಿದ್ದ ಶಿಫಾರಸ್ಸಿಗೆ ಸದನ ಸರ್ವಾನುಮತದ ಒಪ್ಪಿಗೆ ನೀಡಿತ್ತು.
ಶರಣಾಗುವ ಸ್ಥಿತಿ ಬಂದರೆ ಆತ್ಮಹತ್ಯೆ ಮಾಡಿಕೊಳ್ತ್ತೀನಿ: ರವಿ ಬೆಳಗೆರೆ
ಹೀಗಾಗಿ, ರವಿ ಬೆಳಗೆರೆಯವರನ್ನು ಬಂಧಿಸಲು ರಾಮನಗರ ಪೊಲೀಸರು ಸಜ್ಜಾಗಿದ್ದಾರೆ. ಹಕ್ಕು ಚ್ಯುತಿ ಹಿನ್ನೆಲೆಯಲ್ಲಿ ಬೆಳಗೆರೆಯವರಿಗೆ 1 ವರ್ಷ ಜೈಲು ಹಾಗೂ 10 ಸಾವಿರ ರು. ದಂಡ ವಿಧಿಸಲು ವಿಧಾನಸಭೆ ಸದನ ಶಿಫಾರಸು ಮಾಡಿದೆ.