ನನ್ನ ತಂದೆ ನಿರಪರಾಧಿ: ಭಾವನಾ ಬೆಳಗೆರೆ
Recommended Video

ಧಾರವಾಡ, ಡಿಸೆಂಬರ್ 09 : ರವಿ ಬೆಳಗೆರೆ ಮಗಳು ಭಾವನಾ ಅವರು 'ನನ್ನ ತಂದೆ ತಪ್ಪು ಮಾಡಿಲ್ಲ, ಅವರು ನಿರಪರಾಧಿಯಾಗಿ ಹೊರಬರಲಿದ್ದಾರೆ' ಎಂದು ತಂದೆ ಪರ ಮಾತನಾಡಿದ್ದಾರೆ.
ರವಿ ಬೆಳಗೆರೆ ಅವರ ಮಗಳಾದ ಭಾವನಾ ಅವರು ಸಿನಿಮಾ ನಟ ಶ್ರೀನಗರ ಕಿಟ್ಟಿ ಅವರ ಪತ್ನಿ. ಭಾವನಾ ಅವರು ಕೆಲವು ಕಿರುತೆರೆ ಕಾರ್ಯಕ್ರಮಗಳನ್ನು ನಿರ್ಮಿಸಿದ್ದಾರೆ. ಹಾಗೂ ಇವರು ಬಿಗ್ ಬಾಸ್ನಲ್ಲಿಯೂ ಭಾಗವಹಿಸಿದ್ದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 'ಅಪ್ಪ ಒಬ್ಬರನ್ನು ಕೊಲ್ಲುವ ನಿರ್ಧಾರಕ್ಕೆ ಹೋಗಿರಲು ಸಾಧ್ಯವಿಲ್ಲ, ಅವರು ಖಂಡಿತ ನಿರಪರಾಧಿ, ನಾನು ಅವರ ಮಗಳು ಅವರ ಪರವಾಗಿಯೇ ನಿಲ್ಲುತ್ತೇನೆ ಎಂದಿದ್ದಾರೆ.

'ವಕೀಲರ ನಿರ್ದೇಶನ ಇರುವುದರಿಂದ ಪ್ರಕರಣದ ಬಗ್ಗೆ ಹೆಚ್ಚಿಗೇನು ಹೇಳುವುದಿಲ್ಲ ಎಂದ ಅವರು, ಪ್ರಕರಣ ಕುರಿತಂತೆ ಸಿಸಿಬಿಗೆ ನಾನು ಮತ್ತು ನನ್ನ ಕುಟುಂಬ ಸಂಪೂರ್ಣ ಸಹಕಾರವನ್ನು ನೀಡುತ್ತೇವೆ ಎಂದರು.
ರವಿ ಬೆಳಗೆರೆ ಅವರ ಎರಡನೇ ಪತ್ನಿ ಅವರ ಬಗ್ಗೆ ಏನನ್ನು ಹೇಳಲು ನಿರಾಕರಿಸಿದ ಭಾವನಾ ಅವರು 'ಆಕೆಗೂ ನನಗೂ ಯಾವುದೇ ಸಂಬಂಧವಿಲ್ಲ, ಅವರ ಬಗ್ಗೆ ನನಗೆ ಗೊತ್ತೂ ಇಲ್ಲ, ಆ ಕುರಿತು ಏನನ್ನೇ ಕೇಳುವುದಿದ್ದರೂ ಅವರನ್ನೇ ಕೇಳಿ' ಎಂದು ಹೇಳಿದ್ದಾರೆ.
ತಂದೆಯ ಆರೋಗ್ಯ ಸರಿಯಿಲ್ಲ, ನಿಯಮಿತವಾಗಿ ಅವರು ಕೆಲವು ಮಾತ್ರೆಗಳನ್ನು ತೆಗೆದುಕೊಳ್ಳಬೇಕು, ಅವರಿಗೆ ನನ್ನ ಅವಶ್ಯಕತೆ ಇದೆ ಹಾಗಾಗಿ ಈಗ ನಾನು ಬೆಂಗಳೂರಿಗೆ ತೆರಳುತ್ತಿದ್ದೇನೆ ಎಂದು ಅವರು ಹೇಳಿದರು.
ಈಗಲೇ ಪ್ರಕರಣದ ಬಗ್ಗೆ ಮಾತನಾಡುವುದಿಲ್ಲ ಎಂದ ಅವರು, ಹೈಕೋರ್ಟ್, ಸುಪ್ರಿಂಕೋರ್ಟ್ ಗೆ ಹೋಗುವಷ್ಟು ದೊಡ್ಡ ಪ್ರಕರಣ ಇದಲ್ಲ, ಅವರಿಗೆ ಮಂಗಳವಾರ ಅಥವಾ ಬುಧವಾರ ಜಾಮೀನು ಸಿಗುವ ವಿಶ್ವಾಸವಿದೆ ಎಂದು ನುಡಿದಿದರು.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications