ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಧನರಾಜ್ ಧಾರವಾಡ ಜೈಲಿಗೆ ಶಿಫ್ಟ್: ಬದಲಾದ ಖೈದಿ ನಂಬರ್
ಧಾರವಾಡ, ಆಗಸ್ಟ್ 29 : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-9 ಆರೋಪಿ ಧನರಾಜ್ನನ್ನು ಬೆಂಗಳೂರು ಪರಪ್ಪನ ಅಗ್ರಹಾರದಿಂದ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ಗೆ ರಾಜಾತಿಥ್ಯ ನೀಡಿದ ಪ್ರಕರಣ ಬೆಳಕಿಗೆ ಬಂದ ನಂತರ ದರ್ಶನ್ ಸೇರಿ ಆ ತಂಡದ ಮೂವರನ್ನು ಹೊರತುಪಡಿಸಿ ಉಳಿದೆಲ್ಲಾ ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

ಎ-9 ಆರೋಪಿಯಾಗಿರುವ ಧನರಾಜ್ ನನ್ನು ಬೆಂಗಳೂರು ಪೊಲೀಸರು ಭದ್ರತೆ ಮಧ್ಯೆ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಿದರು. ಈತನ ಜೊತೆಗೆ ಜೊತೆಗೆ ಎ-14 ಆರೋಪಿಯಾಗಿರುವ ಪ್ರದೂಷ್ ನನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.
ಮೊದಲಿಗೆ ಧನರಾಜ್ ನನ್ನು ಧಾರವಾಡದ ಕಾರಾಗೃಹಕ್ಕೆ ಶಿಫ್ಟ್ ಮಾಡಿದ ಪೊಲೀಸರು ಅದೇ ವಾಹನದಲ್ಲಿ ಪ್ರದೂಷ್ ನನ್ನು ಬೆಳಗಾವಿ ಕಾರಾಗೃಹಕ್ಕೆ ಕರೆದೊಯ್ದರು. ಧನರಾಜ್ನನ್ನು ಧಾರವಾಡದ ಕಾರಾಗೃಹಕ್ಕೆ ಕರೆದುಕೊಂಡು ಬಂದ ನಂತರ ಆತನ ಬ್ಯಾಗ್ಗಳನ್ನು ಪರಿಶೀಲನೆ ಮಾಡಿ ನಂತರ ಒಳಗಡೆ ಕರೆದುಕೊಂಡು ಹೋಗಲಾಯಿತು.
ಬದಲಾದ ಖೈದಿ ನಂಬರ್
ಧಾರವಾಡ ಕೇಂದ್ರ ಕಾರಾಗೃಹದಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿಗೆ ಕೈದಿ ನಂಬರ್ 8629 ನೀಡಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿ ನಂಬರ್ ಬೇರೆ ನೀಡಲಾಗಿತ್ತು ಆದರೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಧಿಕಾರಿಗಳು 8629 ನಂಬರ್ ನೀಡಿದ್ದಾರೆ. ಇನ್ನು ವೈದ್ಯಕೀಯ ತಪಾಸಣೆ ವೇಳೆ ಧನರಾಜ್ ಜೈಲು ಸಿಬ್ಬಂದಿ ಜೊತೆ ಕಿರಿಕ್ ಮಾಡಿದ್ದಾನೆ ಎನ್ನಲಾಗಿದೆ. ತಪಾಸಣೆ ಬಳಿಕ ಸಿಬ್ಬಂದಿ ನೇರವಾಗಿ ಊಟಕ್ಕೆ ಕರೆದುಕೊಂಡು ಹೋಗಿದ್ದು, ಚಪಾತಿ, ಅನ್ನ ಸಾಂಬರ್ ಹಾಗೂ ಒಂದು ತರಹದ ಪಲ್ಯ ನೀಡಿದ್ದಾರೆ. ಊಟದ ಬಳಿಕ ಧನರಾಜ್ನನ್ನು ಬ್ಯಾರಕ್ ನಂಬರ್ 7ಕ್ಕೆ ಹಾಕಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications