ಫೆ. 5ರಂದು ಧಾರವಾಡದಲ್ಲಿ ಸಾಹಿತ್ಯ ಸಂಕ್ರಾಂತಿ
ಧಾರವಾಡ, ಫೆಬ್ರವರಿ. 01 : ಕ್ರಾಂತಿ ಪ್ರಕಾಶನದಿಂದ ಸಾಹಿತ್ಯ ಸಂಕ್ರಾಂತಿ ಎಂಬ ಕಾರ್ಯಕ್ರಮ ಫೆಬ್ರವರಿ 5ರಂದು ರವಿವಾರ ಧಾರವಾಡದ ರಂಗಾಯಣದ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ಜರುಗಲಿದೆ.
ಅಂದು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5ವರೆಗೆ ಕಾರ್ಯಕ್ರಮ ನಡೆಯಲಿದ್ದು ಮುಂಜಾನೆ ಕ್ರಾಂತಿ ಪ್ರಕಾಶನದಿಂದ ಪ್ರಕಟಗೊಂಡ ಪ್ರೇಮಾ ನಡುವಿನಮನಿ ಅವರ 'ಕಂಬನಿ' ಕಥಾಸಂಕಲನ ಮತ್ತು ಡಾ. ಸಿದ್ರಾಮ್ ಕಾರಣಿಕ ಅವರ 'ನಮ್ಮೊಳಗಿನ ನಾವು' ಕಥಾಸಂಕಲನ ಲೋಕಾರ್ಪಣೆಗೊಳ್ಳಲಿವೆ.

ಮೊಟ್ಟಮೊದಲ ಬಾರಿಗೆ ಕ್ರಾಂತಿ ಪ್ರಕಾಶನ ಧಾರವಾಡ ನೀಡುತ್ತಿರುವ ಕ್ರಾಂತಿ ಪುರಸ್ಕಾರ ಪ್ರಧಾನ ಸಮಾರಂಭ ನಡೆಯಲಿದ್ದು, ಪತ್ರಿಕಾ ಸೇವೆಗಾಗಿ ಡಾ. ವೀರೇಶ ಹಂಡಿಗಿ, ಸಾಹಿತ್ಯ/ಸಮಾಜ ಸೇವೆಗಾಗಿ ಪೇದೆ ಸೋಮು ರೆಡ್ಡಿ.
ಸಮಾಜ ಸೇವೆಗಾಗಿ ಅಲ್ತಾಫ ಬಿಳಗುಳ, ರಂಗಭೂಮಿ ಸೇವೆಗಾಗಿ ಸಂಪತಕುಮಾರ, ಸಾಹಿತ್ಯ ಸೇವೆಗಾಗಿ ಚಂಸು ಪಾಟೀಲ, ಕುಮಾರಿ ರೇಣುಕಾ ಹೆಳವರ ಮತ್ತು ಮಹಮದ್ ಅಲಿ ಗೂಡುಬಾಯಿ ಅವರಿಗೆ ಕ್ರಾಂತಿ ಪುರಸ್ಕಾರ ನೀಡಲಾಗುವುದು.
ಸಾಹಿತಿ ಪೊಲೀಸ್ ಕಾನ್ಸ್ ಟೇಬಲ್ ಸೋಮು ರೆಡ್ಡಿಯವರ 'ಅಭಿನೇತ್ರಿ' ಕಾದಂಬರಿ, 'ನೋಟದಾಗ ನಗೆಯಾ ಮೀಟಿ' ಕಥಾಸಂಕಲನ ಕೃತಿಗಳ ಸಂವಾದ ಕಾರ್ಯಕ್ರಮ ನಡೆಯಲಿದೆ.
ಪ್ರೇಮಾ ನಡುವಿನಮನಿರವರ ಕಂಬನಿಯೊಳಗಿನ ಕಥೆಯನ್ನು ಆಧರಿಸಿದ ಕಿರುಚಿತ್ರ ಪ್ರದರ್ಶನ ನಡೆಯಲಿದೆ. ಚಿತ್ರದ ಹೆಸರು ಕಂಬನಿ. ದಿ. ಸಾಹಿತಿ ಮಾಬು ಡಂಬಳ ಆವರ ನೆನಪಿಗಾಗಿ ಕವಿಗೋಷ್ಠಿ ಕಾರ್ಯಕ್ರಮ ನಡೆಯಲಿದೆ.
ವಿವಿಧ ಜಿಲ್ಲೆಗಳಿಂದ ಸುಮಾರು ಅರವತ್ತಕ್ಕೂ ಹೆಚ್ಚು ಕವಿಗಳು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಭಾಗವಹಿಸಿದ ಎಲ್ಲಾ ಕವಿಗಳಿಗೆ ಕ್ರಾಂತಿ ಪ್ರಕಾಶನದಿಂದ ಪ್ರಮಾಣ ಪತ್ರ ನೀಡಲಾಗುವುದು.
ಬೆಳಗಾವಿ ಉತ್ತರ ವಲಯ ಐಜಿಪಿ ಡಾ. ಕೆ ರಾಮಚಂದ್ರರಾವ್ ಉದ್ಘಾಟನೆ ಮಾಡಲಿದ್ದಾರೆ. ಸಿದ್ದನಗೌಡ ಪಾಟೀಲ್, ಚಂದ್ರಕಾಂತ ಬೆಲ್ಲದ ಇನ್ನಿತರರು ಆಗಮಿಸಲಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications