ಧಾರವಾಡ ಪ್ರಕರಣ: ತಾಲಿಬಾನಿ ರೀತಿ ಹಲ್ಲೆ ಎನ್ನಬೇಡಿ ಎಂದ ಸಚಿವ
ಧಾರವಾಡ ಬೆಂಗಳೂರು, ಏಪ್ರಿಲ್ 14: ಧಾರವಾಡ ಜಿಲ್ಲೆ ವ್ಯಾಪ್ತಿಯ ಹುಬ್ಬಳ್ಳಿಯಲ್ಲಿ ಬಾಲಕಿ ಕರೆದೊಯ್ದು ಅತ್ಯಾಚಾರ ಮಾಡಿ ಕೊಂದ ಬಿಹಾರ ವ್ಯಕ್ತಿಯನ್ನು ಹತ್ಯೆಗೈಯ್ಯಲಾಗಿದೆ. ಇಂಥದ್ದೊಂದು ಅಮಾನುಷ ಕೃತ್ಯ ನಡೆಯಬಾರದಿತ್ತು. ಅದರ ಬೆನ್ನಲ್ಲೆ ಧಾರವಾಡದ ತಾವರೆಕೆರೆಯಲ್ಲಿ ಮಹಿಳೆಯೊಬ್ಬರ ಮೇಲೆ ಅಮಾನವೀಯವಾಗಿ ನಡೆದುಕೊಂಡು ಘಟನೆ ನಡೆದಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಆದ ಕಾಮಿರ್ಕ ಸಚಿವ ಸಂತೋಷ್ ಲಾಡ್ ಅವರು, ತಾಲಿಬಾನಿ ರೀತಿ ಹಲ್ಲೆ ಎನ್ನಬೇಡಿ ಎಂದು ತಿಳಿಸಿದ್ದಾರೆ.
ಸೋಮವಾರ ಧಾರವಾಡದಲ್ಲಿ ಮಾತನಾಡಿದ ಕಾರ್ಮಿಕ ಸಚಿವರು, ತಾವರೆಕೆರೆಯಲ್ಲಿ ಮಹಿಳೆಯೊಬ್ಬರ ಮೇಲೆ ಅಮಾನವೀಯವಾಗಿ ನಡೆದುಕೊಳ್ಳಲಾಗಿದೆ. ಇದನ್ನು ತಾಲಿಬಾನಿ ರೀತಿಯಲ್ಲೇ ನಡೆಸಲಾಗಿದೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು, ಈ ಮಹಿಳೆ ಮೇಲಿನ ಹಲ್ಲೆಯನ್ನು ತಾಲಿಬಾನಿಗೆ ಹೋಲಿಸಬೇಡಿ ಎಂದಿದ್ದಾರೆ.

ಇಂದಿನ ತಾವರೆಕೆರೆಯಲ್ಲಿ ನಡೆದ ಈ ಹಲ್ಲೆ ತಾಲಿಬಾನಿ ರೀತಿಯಲ್ಲಿ ನಡೆದಿದೆ ಎನ್ನುವುದಾದರೆ. ದೇಶವನ್ನೆ ಬೆಚ್ಚಿ ಬೀಳಿಸಿದ್ದ ಮಣಿಪುರದಲ್ಲಿ ಆಗಿದ್ದು ಏನು? ಎಂದು ಸಚಿವರು ಪ್ರಶ್ನಿಸಿದರು. ರಾಜ್ಯದಲ್ಲಿ ಇಂತಹ ಘಟನೆಗಳು ಸಾಕಷ್ಟು ಆಗಿರುತ್ತವೆ. ಅಂತವುಗಳಿಗೆ ತಾಲಿಬಾನಿ ಪದ ಬಳಕೆ ಮಾಡುವುದು ಸರಿಯಲ್ಲ. ಮಣಿಪುರದಲ್ಲಿ ಎರಡು ವರ್ಷಗಳಿಂದ ಏನಾಗುತ್ತಿದೆ? ಇಲ್ಲಿ ಆಗಿರುವುದಕ್ಕೆ ತಾಲಿಬಾನಿ ಪದ ಬಳಸಬೇಡಿ ಎಂದು ಸಚಿವ ಲಾಡ್ ಮನವಿ ಮಾಡಿದರು.
ಜಾತಿ ಗಣತಿ ವರದಿ: ಸಚಿವರ ತಿರುಗೇಟು
ರಾಜ್ಯದಲ್ಲಿ ಜಾತಿ ಗಣತಿ ಜಾರಿಯ ಪರ ವಿರೋಧ ಚರ್ಚೆ ಶುರುವಾಗಿದೆ. ಈ ಮಧ್ಯೆ ಕಾರ್ಮಿಕ ಸಚಿವರು, ಕಳೆದ 14 ವರ್ಷದಿಂದ ಕೇಂದ್ರ ಸರ್ಕಾರ ಜನಗಣತಿ ಮಾಡಿಲ್ಲ. ಮೈಸೂರು ಮಹಾರಾಜರು ಇದರ ಬಗ್ಗೆ ಮಾತನಾಡಬೇಕು. ರಾಜ್ಯ ಸರ್ಕಾರ ಕಳೆದ 10 ವರ್ಷಗಳ ಹಿಂದಿನ ಜಾತಿ ಜನಗಣತಿಯನ್ನು ಈಗ ತರುತ್ತಿದೆ ಎಂದಿರುವ ಮೈಸೂರು ಸಂಸದ ಯದುವೀರ್ ಒಡೆಯರ್ ಅವರ ಆರೋಪಕ್ಕೆ ಸಚಿವರು ತಿರುಗೇಟು ನೀಡಿದರು.
ಜಾತಿ ಜನಗಣತಿ 10 ವರ್ಷಗಳ ಹಿಂದಿನದು ಎಂದು ಮೈಸೂರು ಮಹಾರಾಜರು ಆರೋಪಿಸಿದ್ದಾರೆ. ಕಳೆದ 14 ವರ್ಷಗಳಿಂದ ಕೇಂದ್ರ ಸರ್ಕಾರ ಜನ ಗಣತಿಯನ್ನೇ ಮಾಡಿಸಿಲ್ಲ. ಅದರ ಬಗ್ಗೆ ಮಹಾರಾಜರು ಮೊದಲು ಮಾತನಾಡಲಿ. ಹತ್ತು ವರ್ಷಕ್ಕೊಮ್ಮೆ ಜನ ಗಣತಿ ಆಗಬೇಕು. 14 ವರ್ಷದಿಂದ ಕೇಂದ್ರ ಸರ್ಕಾರ ಜನ ಗಣತಿಯನ್ನೇ ಮಾಡಿಲ್ಲ. 2020ರಲ್ಲಿ ಗಣತಿ ಆಗಬೇಕಿತ್ತು. ಬಿಜೆಪಿಯವರು ಗಣತಿ ಮಾಡಿಸಿಲ್ಲ. ಇದನ್ನು ಯಾಕೆ ಮಾಡಿಲ್ಲ ಎಂದು ಮಹಾರಾಜರು ಹೇಳಬೇಕು ಎಂದರು.
ನಮ್ಮ ಸರ್ಕಾರದ ಜಾತಿ ಜನಗಣತಿಯಲ್ಲಿ ಲೋಪ ದೋಷ ಇದ್ದರೆ ಹೇಳಲಿ. ಮೊದಲು ವರದಿ ಹೊರಗೆ ಬರಲಿ. ಈ ಬಗ್ಗೆ ಸಿಎಂ ಅವರೇ ಹೇಳಿದ್ದಾರೆ. ಸಂಬಂಧಿಸಿದ ಇಲಾಖೆ ಇದರ ಬಗ್ಗೆ ಮಾಹಿತಿ ಕೊಡಲಿದೆ. ಅಲ್ಲಿಯವರೆಗೂ ಮಹಾರಾಜರು ಸ್ವಲ್ಪ ಸಮಾಧಾನದಿಂದ ಇರಬೇಕು ಎಂದು ತಿಳಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications