ಲಿಂಗಾಯತರು ಸಿಎಂ ಆಗಿದ್ದು ಜನಸಂಖ್ಯೆ ಹೆಚ್ಚಿದೆ ಅಂತಲ್ಲ, ಮನೋಭಾವದಿಂದ: ಶಂಕರ ಬಿದರಿ
ಧಾರವಾಡ, ಡಿಸೆಂಬರ್ 14: "ವೀರಶೈವ ಹಾಗೂ ಲಿಂಗಾಯತ ಧರ್ಮ ಒಂದೇ. ಈ ಕುರಿತು ಯಾವುದೇ ಭಿನ್ನಾಭಿಪ್ರಾಯ, ಗೊಂದಲ ಬೇಡ" ಎಂದು ನಿವೃತ್ತ ಪೊಲೀಸ್ ಅಧಿಕಾರಿ ಶಂಕರ ಬಿದರಿ ಹೇಳಿದ್ದಾರೆ.
ಧಾರವಾಡ ನಗರದ ಲಿಂಗಾಯತ ಭವನದಲ್ಲಿ ಆಯೋಜಿಸಿದ್ದ, ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಭಾಗಿಯಾಗಿ ಮಾತನಾಡಿದ ಅವರು, "ವೀರಶೈವರು, ಲಿಂಗಾಯತರು ಒಂದೇ. ಬೇರೆಬೇರೆ ಅಲ್ಲವೇ ಅಲ್ಲ. ಗುರು ಪರಂಪರೆ, ವಿರಕ್ತ ಪರಂಪರೆ, ಶರಣ ಪರಂಪರೆ ಅಂತ ನಮ್ಮಲ್ಲಿ ಮೂರು ಇವೆ, ಆದರೆ ಇವುಗಳಲ್ಲಿ ಬೇಧಭಾವ ಇಲ್ಲ" ಎಂದಿದ್ದಾರೆ.

"ಜಗತ್ತಿನ ಯಾವ ಮೂಲೆಯಲ್ಲಿದ್ದರೂ ಲಿಂಗಧಾರಿಗಳೆಲ್ಲ ಒಂದೇ. ವೀರಶೈವ ಲಿಂಗಾಯತದಷ್ಟು ಉದಾತ್ತ ಧರ್ಮ ಮತ್ತೊಂದಿಲ್ಲ. ದೇಶದ ಎಲ್ಲ ಪ್ರಧಾನಿಗಳು ಬಸವಣ್ಣನವರ ವಿಚಾರಗಳನ್ನೇ ಹೇಳುತ್ತ ಬಂದಿದ್ದಾರೆ. ಲಿಂಗಾಯತರು ಸಿಎಂ ಆಗಿದ್ದು ಸಮಾಜದ ಜನಸಂಖ್ಯೆ ಹೆಚ್ಚಿದೆ ಅಂತಲ್ಲ. ಅವರಲ್ಲಿ ಎಲ್ಲರನ್ನು ಒಂದೇ ಭಾವನೆಯಿಂದ ನೋಡುವಂತಹ ಮನೋಭಾವ, ಸಂಸ್ಕಾರ ಇತ್ತು. ಎಲ್ಲರಲ್ಲಿಯೂ ಸಮಪಾಲು, ಸಮಬಾಳು ಕಂಡ ನಾಯಕರಾಗಿ ಬೆಳೆದಿದ್ದಾರೆ. ಅವರು ಲಿಂಗಾಯತ ಸಮಾಜದಿಂದ ಸಿಎಂ ಆದವರ ಬಗ್ಗೆ ಇಡೀ ದೇಶದಲ್ಲಿ ಪೂಜ್ಯಭಾವ ಇದೆ" ಎಂದರು.
ಈ ವೇಳೆ ಹುಬ್ಬಳ್ಳಿ ಮೂರುಸಾವಿರ ಮಠದ ಸ್ವಾಮೀಜಿ ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು, ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಎನ್ ತಿಪ್ಪಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದರು.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications