ಕುಂದಗೋಳದಲ್ಲಿ ಬಿಜೆಪಿಗೆ ಆತಂಕ ತಂದಿಟ್ಟ ಡಿ.ಕೆ.ಶಿವಕುಮಾರ್ ತಂತ್ರ
Recommended Video
ಕುಂದಗೋಳ, ಮೇ 15: ಕುಂದಗೋಳದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿವಾನಂದ ಬೆಂತೂರು ಬೆ ಡಿ.ಕೆ.ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.
ಕುಂದಗೋಳ ಉಪಚುನಾವಣೆಗೆ ಶಿವಾನಂದ ಬೆಂತೂರು ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು, ಆದರೆ ಜಮೀರ್ ಅಹ್ಮದ್, ವಿನಯ್ ಕುಲಕರ್ಣಿ ಅವರ ಸಂಧಾನದ ನಂತರ ನಾಮಪತ್ರ ವಾಪಸ್ ಪಡೆದು ರಾಜಕೀಯವಾಗಿ ನಿವೃತ್ತಿಯಾಗುವುದಾಗಿ ಹೇಳಿದ್ದರು. ಆದರೆ ಡಿಕೆಶಿ ಅವರು ಮನವೊಲಿಸಿದ ನಂತರ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಶಿವಾನಂದ ಬೆಂತೂರು ಉತ್ತಮ ಬೆಂಬಲಿಗರನ್ನು ಹೊಂದಿದ್ದು, ಅವರು ಕಾಂಗ್ರೆಸ್ ಪಕ್ಷ ಸೇರಿರುವುದು ಕಾಂಗ್ರೆಸ್ಗೆ ಹೆಚ್ಚಿನ ಬಲ ತಂದುಕೊಡಲಿದೆ. ಶಿವಾನಂದ ಬೆಂತೂರು ಅವರು ಪಕ್ಷೇತರವಾಗಿ ಸ್ಪರ್ಧಿಸಿದ್ದರೆ ಉತ್ತಮ ಮತಗಳಿಸುವ ಅಭ್ಯರ್ಥಿ ಆಗಿದ್ದರು, ಇದೀಗ ಅವರು ಕಾಂಗ್ರೆಸ್ಗೆ ಬಂದಿರುವುದು ಆ ಮತಗಳು ಕಾಂಗ್ರೆಸ್ ನತ್ತ ತಿರುಗುವು ಸಾಧ್ಯತೆ ಇದೆ.

ಡಿಕೆಶಿ, ಶಿವಾನಂದ ನಡುವೆ ನಡೆದ ಸಂಭಾಷಣೆ ವೈರಲ್
ಇತ್ತೀಚೆಗೆ ಡಿ.ಕೆ.ಶಿವಕುಮಾರ್ ಮತ್ತು ಶಿವಾನಂದ ಬೆಂತೂರು ಅವರ ನಡುವೆ ನಡೆದದ್ದು ಎನ್ನಲಾದ ಸಂಭಾಷಣೆಯ ಆಡಿಯೋ ಒಂದು ವೈರಲ್ ಆಗಿತ್ತು. ಅದರನ್ವಯ ಡಿ.ಕೆ.ಶಿವಕುಮಾರ್ ಅವರು ಶಿವಾನಂದ ಬೆಂತೂರು ಅವರಿಗೆ ಕಾಂಗ್ರೆಸ್ನಲ್ಲಿ ಉನ್ನತ ಸ್ಥಾನದ ಭರವಸೆ ಕೊಟ್ಟಿದ್ದಾರೆ, ಹಾಗಾಗಿಯೇ ಅವರು ಕಾಂಗ್ರೆಸ್ ಸೇರಿದ್ದಾರೆ ಎನ್ನಲಾಗಿದೆ.

ಮುಂದಿನ ಬಾರಿ ಟಿಕೆಟ್ ಶಿವಾನಂದ ಬೆಂತೂರ್ಗೆ
ವೈರಲ್ ಆದ ಫೋನ್ ಸಂಭಾಷಣೆಯಲ್ಲಿ ಡಿ.ಕೆ.ಶಿವಕುಮಾರ್ ಅವರದ್ದು ಎನ್ನಲಾದ ಧ್ವನಿಯು, ಪ್ರಸ್ತುತ ಉಪಚುನಾವಣೆ ಸ್ಪರ್ಧಿಸಿರುವ ಕುಸುಮ ಶಿವಳ್ಳಿ ಟೆಂಪರರಿ ಅಭ್ಯರ್ಥಿ, ಮುಂದಿನ ಬಾರಿ ಟಿಕೆಟ್ ನಿಮಗೆ ಎಂದು ಹೇಳಿರುವುದು ದಾಖಲಾಗಿದೆ. ಮುಂದಿನ ಬಾರಿಯ ಚುನಾವಣೆ ಟಿಕೆಟ್ ಭರವಸೆ ಸಿಕ್ಕದ್ದರಿಂದ ಶಿವಾನಂದ ಬೆಂತೂರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆಂಬ ಮಾತುಗಳು ಹರಿದಾಡುತ್ತಿವೆ.

ರಾಜಕೀಯ ನಿವೃತ್ತಿ ಪಡೆವುದಾಗಿ ಹೇಳಿದ್ದರು
ನಾಮಪತ್ರ ವಾಪಸ್ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಶಿವಾನಂದ ಬೆಂತೂರು, ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದಿದ್ದರು, ಕುಸುಮಾ ಶಿವಳ್ಳಿ ಅವರಿಗೆ ಬೆಂಬಲ ನೀಡುವುದಿಲ್ಲ ಎಂದೂ ಹೇಳಿದ್ದರು, ಆದರೆ ಡಿಕೆ.ಶಿವಕುಮಾರ್ ಅವರ ಮಾತುಕತೆ ನಂತರ ಈಗ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್-ಬಿಜೆಪಿ ನಡುವೆ ತುರುಸಿನ ಪೈಪೋಟಿ
ಕುಂದಗೋಳ ಶಾಸಕರಾಗಿದ್ದ ಕಾಂಗ್ರೆಸ್ನ ಶಿವಳ್ಳಿ ಅವರ ಅಕಾಲಿಕ ಮರಣದಿಂದ ತೆರವಾದ ಸ್ಥಾನಕ್ಕೆ ಮೇ 19 ರಂದು ಮತದಾನ ನಡೆಯುತ್ತಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಶಿವಳ್ಳಿ ಅವರ ಪತ್ನಿ ಕುಸುಮಾ ಶಿವಳ್ಳಿ ಅವರು ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ಎಸ್.ಐ.ಚಿಕ್ಕನಗೌಡ ಅವರು ಸ್ಪರ್ಧಿಸಿದ್ದಾರೆ. ಫಲಿತಾಂಶ ಮೇ 23ರಂದು ಬರಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications