ಕುಂದಗೋಳದಲ್ಲಿ ಬಿಜೆಪಿಗೆ ಆತಂಕ ತಂದಿಟ್ಟ ಡಿ.ಕೆ.ಶಿವಕುಮಾರ್ ತಂತ್ರ
Recommended Video
ಕುಂದಗೋಳ, ಮೇ 15: ಕುಂದಗೋಳದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿವಾನಂದ ಬೆಂತೂರು ಬೆ ಡಿ.ಕೆ.ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.
ಕುಂದಗೋಳ ಉಪಚುನಾವಣೆಗೆ ಶಿವಾನಂದ ಬೆಂತೂರು ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು, ಆದರೆ ಜಮೀರ್ ಅಹ್ಮದ್, ವಿನಯ್ ಕುಲಕರ್ಣಿ ಅವರ ಸಂಧಾನದ ನಂತರ ನಾಮಪತ್ರ ವಾಪಸ್ ಪಡೆದು ರಾಜಕೀಯವಾಗಿ ನಿವೃತ್ತಿಯಾಗುವುದಾಗಿ ಹೇಳಿದ್ದರು. ಆದರೆ ಡಿಕೆಶಿ ಅವರು ಮನವೊಲಿಸಿದ ನಂತರ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಶಿವಾನಂದ ಬೆಂತೂರು ಉತ್ತಮ ಬೆಂಬಲಿಗರನ್ನು ಹೊಂದಿದ್ದು, ಅವರು ಕಾಂಗ್ರೆಸ್ ಪಕ್ಷ ಸೇರಿರುವುದು ಕಾಂಗ್ರೆಸ್ಗೆ ಹೆಚ್ಚಿನ ಬಲ ತಂದುಕೊಡಲಿದೆ. ಶಿವಾನಂದ ಬೆಂತೂರು ಅವರು ಪಕ್ಷೇತರವಾಗಿ ಸ್ಪರ್ಧಿಸಿದ್ದರೆ ಉತ್ತಮ ಮತಗಳಿಸುವ ಅಭ್ಯರ್ಥಿ ಆಗಿದ್ದರು, ಇದೀಗ ಅವರು ಕಾಂಗ್ರೆಸ್ಗೆ ಬಂದಿರುವುದು ಆ ಮತಗಳು ಕಾಂಗ್ರೆಸ್ ನತ್ತ ತಿರುಗುವು ಸಾಧ್ಯತೆ ಇದೆ.

ಡಿಕೆಶಿ, ಶಿವಾನಂದ ನಡುವೆ ನಡೆದ ಸಂಭಾಷಣೆ ವೈರಲ್
ಇತ್ತೀಚೆಗೆ ಡಿ.ಕೆ.ಶಿವಕುಮಾರ್ ಮತ್ತು ಶಿವಾನಂದ ಬೆಂತೂರು ಅವರ ನಡುವೆ ನಡೆದದ್ದು ಎನ್ನಲಾದ ಸಂಭಾಷಣೆಯ ಆಡಿಯೋ ಒಂದು ವೈರಲ್ ಆಗಿತ್ತು. ಅದರನ್ವಯ ಡಿ.ಕೆ.ಶಿವಕುಮಾರ್ ಅವರು ಶಿವಾನಂದ ಬೆಂತೂರು ಅವರಿಗೆ ಕಾಂಗ್ರೆಸ್ನಲ್ಲಿ ಉನ್ನತ ಸ್ಥಾನದ ಭರವಸೆ ಕೊಟ್ಟಿದ್ದಾರೆ, ಹಾಗಾಗಿಯೇ ಅವರು ಕಾಂಗ್ರೆಸ್ ಸೇರಿದ್ದಾರೆ ಎನ್ನಲಾಗಿದೆ.

ಮುಂದಿನ ಬಾರಿ ಟಿಕೆಟ್ ಶಿವಾನಂದ ಬೆಂತೂರ್ಗೆ
ವೈರಲ್ ಆದ ಫೋನ್ ಸಂಭಾಷಣೆಯಲ್ಲಿ ಡಿ.ಕೆ.ಶಿವಕುಮಾರ್ ಅವರದ್ದು ಎನ್ನಲಾದ ಧ್ವನಿಯು, ಪ್ರಸ್ತುತ ಉಪಚುನಾವಣೆ ಸ್ಪರ್ಧಿಸಿರುವ ಕುಸುಮ ಶಿವಳ್ಳಿ ಟೆಂಪರರಿ ಅಭ್ಯರ್ಥಿ, ಮುಂದಿನ ಬಾರಿ ಟಿಕೆಟ್ ನಿಮಗೆ ಎಂದು ಹೇಳಿರುವುದು ದಾಖಲಾಗಿದೆ. ಮುಂದಿನ ಬಾರಿಯ ಚುನಾವಣೆ ಟಿಕೆಟ್ ಭರವಸೆ ಸಿಕ್ಕದ್ದರಿಂದ ಶಿವಾನಂದ ಬೆಂತೂರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆಂಬ ಮಾತುಗಳು ಹರಿದಾಡುತ್ತಿವೆ.

ರಾಜಕೀಯ ನಿವೃತ್ತಿ ಪಡೆವುದಾಗಿ ಹೇಳಿದ್ದರು
ನಾಮಪತ್ರ ವಾಪಸ್ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಶಿವಾನಂದ ಬೆಂತೂರು, ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದಿದ್ದರು, ಕುಸುಮಾ ಶಿವಳ್ಳಿ ಅವರಿಗೆ ಬೆಂಬಲ ನೀಡುವುದಿಲ್ಲ ಎಂದೂ ಹೇಳಿದ್ದರು, ಆದರೆ ಡಿಕೆ.ಶಿವಕುಮಾರ್ ಅವರ ಮಾತುಕತೆ ನಂತರ ಈಗ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್-ಬಿಜೆಪಿ ನಡುವೆ ತುರುಸಿನ ಪೈಪೋಟಿ
ಕುಂದಗೋಳ ಶಾಸಕರಾಗಿದ್ದ ಕಾಂಗ್ರೆಸ್ನ ಶಿವಳ್ಳಿ ಅವರ ಅಕಾಲಿಕ ಮರಣದಿಂದ ತೆರವಾದ ಸ್ಥಾನಕ್ಕೆ ಮೇ 19 ರಂದು ಮತದಾನ ನಡೆಯುತ್ತಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಶಿವಳ್ಳಿ ಅವರ ಪತ್ನಿ ಕುಸುಮಾ ಶಿವಳ್ಳಿ ಅವರು ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ಎಸ್.ಐ.ಚಿಕ್ಕನಗೌಡ ಅವರು ಸ್ಪರ್ಧಿಸಿದ್ದಾರೆ. ಫಲಿತಾಂಶ ಮೇ 23ರಂದು ಬರಲಿದೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications