ಕಲ್ಲಿದ್ದಲು ಗಣಿ ಖಾಸಗೀಕರಣ: ಎಸ್ ಆರ್ ಹಿರೇಮಠ ವಿರೋಧ
ಧಾರವಾಡ, ಮೇ 22: ಕೇಂದ್ರ ಸರ್ಕಾರ ಕಲ್ಲಿದ್ದಲು ಗಣಿಗಾರಿಕೆಯನ್ನು ಖಾಸಗೀಕರಣ ಮಾಡಲು ಹೊರಟಿರುವುದಕ್ಕೆ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ವಿರೋಧ ವ್ಯಕ್ತಪಡಿಸಿದ್ದಾರೆ.
Recommended Video
ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಲ್ಲಿದ್ದಲು ಗಣಿಗಾರಿಕೆಯನ್ನು ಖಾಸಗೀಕರಣ ಮಾಡಿದರೆ ಹಗಲು ದರೋಡೆ ಮಾಡಲು ಅನುಕೂಲವಾಗುತ್ತದೆ. ಕೇಂದ್ರದ ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವರಾದ ಪ್ರಹ್ಲಾದ ಜೋಶಿ ಅವರು ಇದರ ಬಗ್ಗೆ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
ಹೋರಾಟಗಾರ ಎಸ್ ಆರ್ ಹಿರೇಮಠ್ ಮೇಲೆ ಹಲ್ಲೆ ಆಗಿದ್ದು ಏಕೆ?
ಈ ಹಿಂದೆ ಕರ್ನಾಟಕದ ಬಳ್ಳಾರಿಯಲ್ಲಿ ಜನಾರ್ಧನ ರೆಡ್ಡಿ ಅವರು ಗಣಿಗಾರಿಕೆಯಲ್ಲಿ ಹಗಲು ದರೋಡೆ ಮಾಡಿದಂತೆ ದೇಶದಲ್ಲೂ ಗಣಿಗಾರಿಕೆಗಳು ಖಾಸಗೀಕರಣವಾದರೆ ಹಗಲು ದರೋಡೆಯಾಗುವುದಂತೂ ಸತ್ಯ. ಇದರಿಂದ ದೇಶದ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ. ಕೂಡಲೇ ಕೇಂದ್ರ ಸರ್ಕಾರ ಕಲ್ಲಿದ್ದಲು ಗಣಿಗಾರಿಕೆಯನ್ನು ಖಾಸಗೀಕರಣಗೊಳಿಸುವುದನ್ನು ಕೈಬಿಡಬೇಕು ಎಂದು ಹಿರೇಮಠ ಒತ್ತಾಯಿಸಿದರು.
ದೇಶದ ಗಣಿ ಸಂಪತ್ತು ಮೋದಿ ಅವರಿಂದಾದರೂ ಉಳಿಯುತ್ತದೆ ಎಂದು ನಾವು ನಂಬಿದ್ದೆವು. ಆದರೆ, ಅವರೇ ಈಗ ಕಲ್ಲಿದ್ದಲು ಗಣಿಗಾರಿಕೆಯನ್ನು ಖಾಸಗೀಕರಣ ಮಾಡಲು ಹೊರಟಿದ್ದಾರೆ. ಈ ಸಂಬಂಧ ನಾವು ರಾಷ್ಟ್ರದಾದ್ಯಂತ ಜನಾಂದೋಲನ ರೂಪಿಸುತ್ತೇವೆ ಎಂದರು.