ಡಿ.ಕೆ ಶಿವಕುಮಾರ್ ಗಳಿಸಿದ ಹಣ ಜನರದ್ದು: ಎಸ್.ಆರ್ ಹಿರೇಮಠ ವಾಗ್ದಾಳಿ
ಧಾರವಾಡ, ಅಕ್ಟೋಬರ್ 7: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಸಂಪಾದಿಸಿದ್ದು ಸಾರ್ವಜನಿಕರ ಹಣ, ಅವರ ಮೇಲೆ ಎಫ್ಐಆರ್ ದಾಖಲಿಸಬೇಕು. ಅವರ ಮನೆ ಮೇಲೆ ಸಿಬಿಐ ದಾಳಿ ಮಾಡಿದ್ದು ಸ್ವಾಗತಾರ್ಹ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್ ಹಿರೇಮಠ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಆರ್ ಹಿರೇಮಠ ಅವರು, ಡಿ.ಕೆ ಶಿವಕುಮಾರ್ ಮೇಲೆ ಎಫ್ಐಆರ್ ದಾಖಲಿಸಿ ಮತ್ತ್ಯಾರೂ ಇಂತಹ ಕೆಲಸ ಮಾಡದಂತೆ ಮಾಡಬೇಕು. ಅವರ ಅಕ್ರಮ ಸಂಪಾದನೆ ಮೇಲೆ ಸಿಬಿಐ ದಾಳಿ ಮಾಡಿರುವುದು ಬಹಳ ಸಂತೋಷದ ವಿಷಯ. ಅವರ ಪರವಾಗಿ ಈ ಕಾಂಗ್ರೆಸ್ಸಿನವರು ಪ್ರತಿಭಟನೆ ಮಾಡುವುದನ್ನು ನಿಲ್ಲಿಸಬೇಕು ಎಂದರು.
ಆರೋಗ್ಯ ಸಚಿವ ಬಿ.ಶ್ರೀರಾಮುಲು 100 ಕೋಟಿ ರುಪಾಯಿ ಮೌಲ್ಯದ ಮನೆ ಕಟ್ಟಲು ಎಲ್ಲಿಂದ ಹಣ ಬಂತು? ಅದನ್ನು ಬಹಿರಂಗಪಡಿಸಬೇಕು. ನಾವು ಈಗಾಗಲೇ ಈ ರೀತಿ ಅಕ್ರಮ ಸಂಪಾದನೆ ಮಾಡಿದವರ ಬಗ್ಗೆ ಪ್ರಧಾನಿಗೆ ಪತ್ರ ಬರೆದಿದ್ದೆವೆ ಎಂದರು.

ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನೆಯ ಮೇಲೆ ಸಿಬಿಐ ದಾಳಿಯ ಕುರಿತು ಕಾಂಗ್ರೆಸ್ ಜನರ ಹಾದಿ ತಪ್ಪಿಸುವ ಕಾರ್ಯದಲ್ಲಿ ನಿರತವಾಗಿದೆ ಎಂದು ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ವೇದವ್ಯಾಸ್ ಕಾಮತ್, ಕಾಂಗ್ರೆಸ್ ಮುಖಂಡರು ತಮ್ಮ ನಾಯಕ ತಪ್ಪು ಮಾಡದೇ ಹೋಗಿದ್ದರೆ ಸಿಬಿಐ ಏಕೆ ದಾಳಿ ಮಾಡುತ್ತಿತ್ತು ಎನ್ನುವುದನ್ನು ಅರ್ಥ ಮಾಡಿಕೊಳ್ಳಲಿ. ಯಾರೇ ತಪ್ಪು ಮಾಡಿದರೂ ತನಿಖಾ ತಂಡಗಳಿಗೆ ಆ ವ್ಯಕ್ತಿಯನ್ನು ಬಂಧಿಸಲು ಅಥವಾ ವಿಚಾರಣೆ ನಡೆಸಲು ಅಧಿಕಾರವಿದೆ ಎಂದು ತಿಳಿಸಿದ್ದಾರೆ.
ಯಾವುದೇ ಪಕ್ಷವು ಆಡಳಿತದಲ್ಲಿದ್ದರೂ ತನಿಖಾ ತಂಡ ತಪ್ಪಿತಸ್ಥರನ್ನು ವಿಚಾರಣೆ ನಡೆಸುತ್ತದೆ. ಕಾಂಗ್ರೆಸ್ ಅಥವಾ ಇನ್ಯಾವುದೇ ಪಕ್ಷದ ಮುಖಂಡರ ಮೇಲೆ ಸಿಬಿಐ ದಾಳಿ ಮಾಡಿಲ್ಲ ಎಂದರು.
ಕೇವಲ ಡಿ.ಕೆ ಶಿವಕುಮಾರ್ ಅವರ ಮನೆಯ ಮೇಲೆ ಸಿಬಿಐ ದಾಳಿ ನಡೆಸಿದೆ ಎಂದರೆ ಸೂಕ್ತ ಮಾಹಿತಿಯ ಆಧಾರದ ಮೇಲೆಯೇ ವಿಚಾರಣೆ ನಡೆಯುತ್ತದೆ. ಆದರೆ ಕಾಂಗ್ರೆಸ್ ಪಕ್ಷದ ಪ್ರಮುಖರು ರಾಜಕೀಯ ಲಾಭಕ್ಕಾಗಿ ಬಿಜೆಪಿಯ ವಿರುದ್ಧ ಆರೋಪಿಸುತ್ತಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ಮುಖಂಡರು ತಪ್ಪು ಮಾಡದಿದ್ದರೆ ತನಿಖೆಗೆ ಹೆದರುವ ಅವಶ್ಯಕತೆ ಏಕೆ? ಜನರ ಮನಸ್ಸಿನಲ್ಲಿ ಗೊಂದಲ ಎಬ್ಬಿಸುವ ಕಾಂಗ್ರೆಸ್ ಷಡ್ಯಂತ್ರವನ್ನು ಬುದ್ಧಿವಂತ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಯೋಗೇಶ್ ಗೌಡ ಕೇಸ್ ತೀರ್ಪು ಪ್ರಕಟ: ವಿನಯ್ ಕುಲಕರ್ಣಿ ಅಪರಾಧಿ ಎಂದ ಕೋರ್ಟ್: 17 ಮಂದಿ ಸಿಬಿಐ ವಶಕ್ಕೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ











Click it and Unblock the Notifications