ಧಾರವಾಡದಲ್ಲಿ ಇಂದು ಯೋಧ ಹಸನ್ ಸಾಬ ಅಂತ್ಯಕ್ರಿಯೆ
ಧಾರವಾಡ, ಆಗಸ್ಟ್ 01 : ಕಾಶ್ಮೀರದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಹುತಾತ್ಮರಾದ ಯೋಧ ಹಸನ್ ಸಾಬ ಖುದಾವಂದ ಅವರ ಅಂತ್ಯಕ್ರಿಯೆ ಸೋಮವಾರ ನಡೆಯಲಿದೆ. ಯೋಧನ ಸಾವಿಗೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಅವರು ಸಂತಾಪ ಸೂಚಿಸಿದ್ದಾರೆ.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಸೈದಾಪುರ ಗ್ರಾಮದ ಬಿಎಸ್ಎಫ್ ಯೋಧ ಹಸನ್ ಸಾಬ ಖುದಾವಂದ (24) ಕಾಶ್ಮೀರದಲ್ಲಿ ವೀರಮರಣವನ್ನಪ್ಪಿದ್ದಾರೆ. ಯೋಧನ ಪಾರ್ಥೀವ ಶರೀರ ಇಂದು ಧಾರವಾಡಕ್ಕೆ ಆಗಮಿಸಲಿದ್ದು, ಸಕಲ ಸರ್ಕಾರಿ ಗೌರವದೊಂದಿಗೆ ಸಂಜೆ ಅಂತ್ಯಕ್ರಿಯೆ ನಡೆಯಲಿದೆ.[ಶಿವಮೊಗ್ಗದಲ್ಲಿ ಯೋಧ ಉಮೇಶ ಅಂತ್ಯ ಸಂಸ್ಕಾರ]

ಯೋಧ ಹಸನ್ ಸಾಬ ಖುದಾವಂದ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ, ಶಾಸಕ ಸಿ.ಎಸ್.ಶಿವಳ್ಳಿ, ಶಾಸಕರಾದ ಎನ್.ಹೆಚ್.ಕೋನರೆಡ್ಡಿ, ಶ್ರೀನಿವಾಸ ಮಾನೆ ಮುಂತಾದವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.[ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯರನ್ನು ಸ್ಮರಿಸಿದ ಕೊಡವರು]
ಮೃತ ಯೋಧನ ಕುಟುಂಬಕ್ಕೆ ಸಚಿವರು ವಯಕ್ತಿಕವಾಗಿ 1 ಲಕ್ಷ ರೂಪಾಯಿಗಳ ಪರಿಹಾರ ನೀಡಿದರು. ಪಾರ್ಥಿವ ಶರೀರ ಸೋಮವಾರ ಗ್ರಾಮಕ್ಕೆ ತಲುಪಲಿದ್ದು ಅಂತಿಮ ಸಂಸ್ಕಾರಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಳಗಾವಿ ಯೋಧನ ಅಂತ್ಯಕ್ರಿಯೆ : ಕಾಶ್ಮೀರದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಯೋಧ ಹಸನ್ ಸಾಬ ಖುದಾವಂದ ಅವರ ಜೊತೆ ಬೆಳಗಾವಿಯ ಗೋಕಾಕ್ ತಾಲೂಕಿನ ಸುಭೇದಾರ್ ಬಸಪ್ಪ ಪಾಟೀಲ್ ಅವರು ಹುತಾತ್ಮರಾಗಿದ್ದು, ಅವರ ಅಂತ್ಯಕ್ರಿಯೆಯೂ ಇಂದು ನಡೆಯುತ್ತಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications