Deepavali Special Train: ಹುಬ್ಬಳ್ಳಿ & ಬೀದರ್ನಿಂದ ಬೆಂಗಳೂರಿಗೆ ವಿಶೇಷ ರೈಲು, ಸಂಪೂರ್ಣ ವಿವರ ಇಲ್ಲಿದೆ
ಹುಬ್ಬಳ್ಳಿ, ನವೆಂಬರ್ 10: ದೀಪಾವಳಿ ಹಬ್ಬಕ್ಕೆ ಜನರಿಗೆ ಅನುಕೂಲವಾಗಲಿ ಎಂದು ಹುಬ್ಬಳ್ಳಿ-ಬೀದರ್-ಯಶವಂತಪುರ ನಡುವೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ ಎಂದು ಕೇಂದ್ರ ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮಾಹಿತಿ ನೀಡಿದ್ದಾರೆ.
ವಿಶೇಷ ರೈಲು (ಗಾಡಿ ಸಂಖ್ಯೆ: 06505) ನವೆಂಬರ್ 10ರಂದು ಮಧ್ಯಾಹ್ನ 2.30ಕ್ಕೆ ಹುಬ್ಬಳ್ಳಿಯಿಂದ ಹೊರಟು ರಾತ್ರಿ 11.15ಕ್ಕೆ ಯಶವಂತಪುರ ತಲುಪಲಿದೆ. ಅಲ್ಲಿಂದ ನಿರ್ಗಮಿಸಿ ಯಾದಗಿರಿ, ಕಲಬುರಗಿ, ತಾಜಸುಲ್ತಾನಪುರ ಮಾರ್ಗವಾಗಿ ಬೆಳಿಗ್ಗೆ 10.49ಕ್ಕೆ ಹುಮನಾಬಾದ್, ಮಧ್ಯಾಹ್ನ 12.15ಕ್ಕೆ ಬೀದರ್ ತಲುಪಲಿದೆ.

ಗಾಡಿ ಸಂಖ್ಯೆ: 06506 ರೈಲು ನವೆಂಬರ್ 14ರಂದು ಮಧ್ಯಾಹ್ನ 2.30ಕ್ಕೆ ಬೀದರ್ನಿಂದ ನಿರ್ಗಮಿಸಿ ಮರುದಿನ ನಸುಕಿನ ಜಾವ 4ಗಂಟೆಗೆ ಯಶವಂತಪುರ ನಿಲ್ದಾಣ ಸೇರಲಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಗುರುವಾರ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ಬೀದರ್-ಯಶವಂತಪುರ ವಾಯಾ ಕಲಬುರಗಿ ರೈಲು ಶನಿವಾರ ರಾತ್ರಿ 11.15ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಮಧ್ಯಾಹ್ನ 1.30ಕ್ಕೆ ಬೀದರ್ ತಲುಪಲಿದೆ. ಅದೇ ದಿನ ಮಧ್ಯಾಹ್ನ 2.30ಕ್ಕೆ ಬೀದರ್ನಿಂದ ನಿರ್ಗಮಿಸಿ ಮರುದಿನ ನಸುಕಿನ ಜಾವ 4ಕ್ಕೆ ಯಶವಂತಪುರ ಸೇರಲಿದೆ ಎಂದು ತಿಳಿಸಿದ್ದಾರೆ.

ವಿಕಾರಬಾದ್ ಮಾರ್ಗವಾಗಿ ಬೀದರ್-ಯಶವಂತಪುರ, ನಾಂದೇಡ್-ಬೀದರ್-ಬೆಂಗಳೂರು ರೈಲುಗಳು ಎಂದಿನಂತೆ ಸಂಚರಿಸಲಿವೆ. ಎರಡು ರೈಲು ವಾಯಾ ಕಲಬುರಗಿ ಮೂಲಕ ಪಯಣ ಬೆಳೆಸಲಿವೆ. ಇದರೊಂದಿಗೆ ಒಟ್ಟು ನಾಲ್ಕು ರೈಲುಗಳು ಬೆಂಗಳೂರಿಗೆ ಸಂಚರಿಸಿದಂತಾಗಲಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ವಿಶೇಷ ರೈಲುಗಳಿಂದ ಹಣ ಉಳಿತಾಯವಾಗಲಿದೆ. ನಮ್ಮ ಮನವಿಗೆ ಓಗೊಟ್ಟು ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ವಿಶೇಷ ರೈಲುಗಳನ್ನು ಬಿಟ್ಟಿದ್ದಾರೆ ಎಂದು ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.
-
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
High Speed Rail: ಬೆಂಗಳೂರು ಸೇರಿ 3 ಹೈಸ್ಪೀಡ್ ರೈಲು ಕಾರಿಡಾರ್ ಡಿಪಿಆರ್ 2027ಕ್ಕೆ ಪೂರ್ಣ, ವಿವರ -
Railway Alert: ಚನ್ನಸಂದ್ರ ನಿಲ್ದಾಣದಲ್ಲಿ ಕಾಮಗಾರಿ, ವಿವಿಧ ರೈಲುಗಳ ಮಾರ್ಗ ಬದಲಾವಣೆ, ಸಂಚಾರ ರದ್ದು -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ











Click it and Unblock the Notifications