ಹಬ್ಬಕ್ಕೆ ಊರಿಗೆ ಹೋರಟ್ರಾ..? ದೀಪಾವಳಿ ಸಂಚಾರಕ್ಕಾಗಿ ವಿಶೇಷ ರೈಲು, ಇಲ್ಲಿದೆ ಸಂಪೂರ್ಣ ವಿವರ
ಧಾರವಾಡ, ನವೆಂಬರ್ 08: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ತಮಿಳುನಾಡಿನ ನಾಗರಕೋಯಿಲ್ ಮತ್ತು ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳ ನಡುವೆ ಮೂರು ಟ್ರಿಪ್ಗಳಿಗಾಗಿ ವಿಶೇಷ ರೈಲುಗಳನ್ನು ಓಡಿಸಲು ದಕ್ಷಿಣ ರೈಲ್ವೆ ವಲಯವು ನಿರ್ಧರಿಸಿದೆ.
ಈ ಕುರಿತು ಬುಧವಾರ ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ನವೆಂಬರ್ 14 ಮತ್ತು 21ರಂದು ನಾಗರಕೋಯಿಲ್-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ (06083) ರೈಲು ಸಂಜೆ 7:35 ಗಂಟೆಗೆ ನಾಗರ ಕೋಯಿಲ್ನಿಂದ ಹೊರಟು ಮರುದಿನ ಮಧ್ಯಾಹ್ನ 12:40 ಗಂಟೆಗೆ ಬೆಂಗಳೂರು ತಲಿಪಲಿದೆ.

ಅದೇ ರೀತಿ ನವೆಂಬರ್ 15 ಮತ್ತು 22ರಂದು ಎಸ್ಎಂವಿಟಿ ಟರ್ಮಿನಲ್ಬೆಂಗಳೂರು-ನಾಗರಕೋಯಿಲ್ ವಿಶೇಷ ಎಕ್ಸ್ಪ್ರೆಸ್ (06084) ರೈಲು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 6:10 ಗಂಟೆಗೆ ನಾಗರಕೋಯಿಲ್ ತಲುಪಲಿದೆ.
ಈ ವಿಶೇಷ ರೈಲುಗಳು ವಲ್ಲಿಯೂರ್, ತಿರುನೆಲ್ವೇಲಿ, ಕೋವಿಲ್ಪಟ್ಟಿ, ಸತೂರ್, ವಿರುಧುನಗರ, ಮಧುರೈ, ದಿಂಡಿಗಲ್, ತಿರುಚ್ಚಿರಾಪಳ್ಳಿ, ಕರೂರ, ನಮಕ್ಕಲ್, ಸೇಲಂ, ಮೊರಪ್ಪೂರ್, ತಿರುಪತ್ತೂರು, ಬಂಗಾರಪೇಟೆ, ಕೃಷ್ಣರಾಜಪುರಂಗಳಲ್ಲಿ ನಿಲುಗಡೆಗೊಳ್ಳಲಿವೆ. ವಿಶೇಷ ರೈಲುಗಳಲ್ಲಿ ಒಂದು ಎಸಿ ಟು-1ಟೈರ್, ಮೂರು ಎಸಿ ತ್ರಿ-ಟೈರ್, 10 ಸ್ಲೀಪರ್ ಕ್ಲಾಸ್, ಎರಡು ಸಾಮಾನ್ಯ ದ್ವಿತೀಯ ದರ್ಜೆ, ಎರಡು ಲಗೇಜ್ ಕಮ್ ಬ್ರೇಕ್ ವ್ಯಾನ್ ಬೋಗಿಗಳ ಸಂಯೋಜನೆ ಒಳಗೊಂಡಿದೆ.
ಭಗತ್ ಕಿ ಕೋಠಿ-ಎಸ್ಎಂವಿಟಿ
ದೀಪಾವಳಿ/ಛತ್ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸಲು ಎಸ್ಎಂವಿಟಿ ಬೆಂಗಳೂರು ಮತ್ತು ಭಗತ್ ಕಿ ಕೋಠಿ-ಎಸ್ಎಂವಿಟಿ ಬೆಂಗಳೂರು (04813/04814) ನಡುವೆ ಎಂಟು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲು ವಾಯವ್ಯ ರೈಲ್ವೆ ವಲಯ ನಿರ್ಧರಿಸಿದೆ.
11ರಿಂದ ಡಿ. 4ರ ವರೆಗೆ ಭಗತ್ ಕಿ ಕೋಠಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ (04813) ರೈಲು ಪ್ರತಿ ಶನಿವಾರ ಮತ್ತು ಸೋಮವಾರ ಬೆಳಗ್ಗೆ 5:15 ಗಂಟೆಗೆ ಭಗತ್ ಕಿ ಕೋಠಿದಿಂದ ಹೊರಟು ಮೂರನೇ ದಿನ ರಾತ್ರಿ 11:30 ಗಂಟೆಗೆ ಬೆಂಗಳೂರು ತಲುಪಲಿದೆ.
ಅದೇ ರೀತಿ ನ. 13ರಿಂದ ಡಿ. 6ರ ವರೆಗೆ ಎಸ್ಎಂವಿಟಿ ಬೆಂಗಳೂರು-ಭಗತ್ ಕಿ ಕೋಠಿ ವಿಶೇಷ ಎಕ್ಸ್ಪ್ರೆಸ್ (04814) ರೈಲು ಪ್ರತಿ ಸೋಮವಾರ ಮತ್ತು ಬುಧವಾರ ಸಂಜೆ 4:30 ಗಂಟೆಗೆ ಬೆಂಗಳೂರಿನಿಂದ ಹೊರಟು ಮೂರನೇ ದಿನ ಮಧ್ಯಾಹ್ನ 12:40 ಗಂಟೆಗೆ ಭಗತ್ ಕಿ ಕೋಠಿ ತಲುಪಲಿದೆ.
ಈ ವಿಶೇಷ ರೈಲುಗಳು ಲೂನಿ, ಸಂದಾರಿ, ಜಾಲೋರ್, ಮಾರ್ವಾರ್ ಭಿನ್ಮಾಲ್, ರಾಣಿವಾರ, ಧನೇರಾ, ಭಿಲ್ಡಿ ಜಂಕ್ಷನ್, ಪಟಾನ್, ಮಹೇಸನಾ ಜಂಕ್ಷನ್, ಅಹಮದಾಬಾದ್ ಜಂಕ್ಷನ್, ವಡೋದರಾ ಜಂಕ್ಷನ್, ಸೂರತ್, ವಾಪಿ, ವಸಾಯಿ ರೋಡ್, ಕಲ್ಯಾಣ ಜಂಕ್ಷನ್, ಪುಣೆ ಜಂಕ್ಷನ್, ಸತಾರಾ, ಮಿರಜ್ ಜಂಕ್ಷನ್, ಘಟಪ್ರಭಾ, ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಹಾವೇರಿ, ರಾಣಿಬೆನ್ನೂರ, ದಾವಣಗೆರೆ, ಬೀರೂರ, ಅರಸೀಕೆರೆ, ತಮಕೂರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿವೆ.
ಈ ವಿಶೇಷ ರೈಲುಗಳಲ್ಲಿ ಎರಡು ಎಸಿ ಟು-ಟೈರ್, ಐದು ಎಸಿ ತ್ರಿ-ಟೈರ್, ಏಳು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ, ಎರಡು ದ್ವಿತೀಯ ದರ್ಜೆ ಕಮ್ ಲಗೇಜ್ ಮತ್ತು ಬ್ರೇಕ್ ವ್ಯಾನ್/ದಿವ್ಯಾಂಗ ಸ್ನೇಹಿ ಬೋಗಿಗಳನ್ನು ಒಳಗೊಂಡಿರುತ್ತವೆ. ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈಲ್ವೆ ನಿಲ್ದಾಣಗಳನ್ನು ಸಂಪರ್ಕಿಸಬೇಕು ಅಥವಾ ಅಧಿಕೃತ ಜಾಲತಾಣ https://enquiry.indianrail.gov.in ಭೇಟಿ ನೀಡಬಹುದು ಎಂದು ದಕ್ಷಿಣ ರೈಲ್ವೆ ವಲಯವು ತಿಳಿಸಿದೆ.
-
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications